• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡಪರ ಸಂಘಟನೆಗಳಿಗೇ ರಾಜ್ಯದ ಇತಿಹಾಸ ಗೊತ್ತಿಲ್ಲ ಎಂದು ಅವಮಾನ ಮಾಡಿದ ಕಾಂಗ್ರೆಸ್ ಸಚಿವ!

TNN Correspondent Posted On February 17, 2018
0


0
Shares
  • Share On Facebook
  • Tweet It

ಕಲಬುರಗಿ: ಇತ್ತೀಚೆಗಷ್ಟೇ ಸರ್ಕಾರದಿಂದಲೇ ಬಹಮನಿ ಸುಲ್ತಾನರ ಉತ್ಸವ ಆಯೋಜಿಸಿ ರಾಜ್ಯದ ಜನ ಹಾಗೂ ಸ್ವತಃ ಮುಖ್ಯಮಂತ್ರಿಯವರಿಂದಲೇ ಟೀಕೆಗೆ ಒಳಗಾದ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮತ್ತೊಂದು ಹೇಳಿಕೆ ನೀಡುವ ಮೂಲಕ ಕನ್ನಡಪರ ಸಂಘಟನೆಗಳಿಗೆ ಅವಮಾನ ಮಾಡಿದ್ದಾರೆ.

ಬಹುಮನಿ ಸುಲ್ತಾನರ ಉತ್ಸವ ಆಚರಣೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ವಿರುದ್ಧ ಕೆಂಡಾಮಂಡಲವಾದ ಶರಣ ಪ್ರಕಾಶ್ ಪಾಟೀಲ್, “ಕನ್ನಡಪರ ಸಂಘಟನೆಗಳಿಗೆ ಇತಿಹಾಸದ ಅರಿವೇ ಇಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಇದಕ್ಕೆ ಹಲವು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ನಾನು ಇತಿಹಾಸ ಅರಿತಿದ್ದು, ಕನ್ನಡ ಪರ ಸಂಘಟನೆಗಳು ಹಾಗೂ ಹೋರಾಟಗಾರರು ರಾಜ್ಯದ ಇತಿಹಾಸವನ್ನು ಅರಿತೇ ಸಂಘಟನೆ ಕಟ್ಟಿದ್ದಾರೆ. ಇದು ಗೊತ್ತಿದ್ದರೂ ಸಚಿವ ಕನ್ನಡ ಪರ ಸಂಘಟನೆಗಳಿಗೆ ಅವಮಾನ ಮಾಡಿದ್ದು, ಕೂಡಲೇ ಕ್ಷಮೆಯಾಚಿಸಬೇಕು ಎಂದು ಹಸಿರು ಸೇನೆ (ಕಲಬುರಗಿ)ಸಂಸ್ಥಾಪಕ ಅಧ್ಯಕ್ಷ ವೀರಣ್ಣ ಕೊರಳಿ ಆಗ್ರಹಿಸಿದ್ದಾರೆ.

ಹಸನಗಂಗು, ಬಹುಮನ್ ಶಾ ಅವರಿಂದ ಹಿಡಿದು ಕಲೀ ಅಲ್ಲಾ ಶಾ ವರೆಗಿನ ಇತಿಹಾಸ ನಮಗೆ ಗೊತ್ತಿದೆ. 13 ರಿಂದ 15ನೇ ಶತಮಾನದವರೆಗೆ ಆಳ್ವಿಕೆ ನಡೆಸಿದ ಬಹುಮನಿ ಸುಲ್ತಾನರು 17 ಅರಸರನ್ನು ಕಂಡಿದ್ದು, ಅವರಲ್ಲಿ ಮೂವರು ಬಾಲ್ಯಾವಸ್ಥೆಯಲ್ಲೇ ಅಧಿಕಾರದ ಗದ್ದುಗೆಯೇರಿದ್ದರು ಎಂಬುದು ತಿಳಿದಿದೆ ಎಂದು ಕೊರಳಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಷ್ಟೇ ಅಲ್ಲ, ಹಿಂದೂ ಹಾಗೂ ಮುಸ್ಲಿಮರಿಗೆ ಬಹುಮನಿ ಸುಲ್ತಾನರು ಯಾವುದೇ ಕೊಡುಗೆ ನೀಡಿಲ್ಲ. ಅವರ ಅವಧಿಯಲ್ಲಿ ಹಿಂದೂ ದೇವಾಲಯ ಧ್ವಂಸಗೊಳಿಸಲಾಗಿದೆ. ಹಿಂದೂಗಳನ್ನು ಕೊಂದಿದ್ದಾರೆ. ಅಂತಹವರ ಜಯಂತಿ ಆಚರಿಸುವ ಹಾಗೂ ಕನ್ನಡಪರ ಹೋರಾಟಗಾರರಿಗೆ ಕರುನಾಡಿನ ಇತಿಹಾಸ ತಿಳಿಸುವ ಯಾವ ಅವಶ್ಯಕತೆಯೂ ಸಚಿವರಿಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search