• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡಪರ ಸಂಘಟನೆಗಳಿಗೇ ರಾಜ್ಯದ ಇತಿಹಾಸ ಗೊತ್ತಿಲ್ಲ ಎಂದು ಅವಮಾನ ಮಾಡಿದ ಕಾಂಗ್ರೆಸ್ ಸಚಿವ!

TNN Correspondent Posted On February 17, 2018
0


0
Shares
  • Share On Facebook
  • Tweet It

ಕಲಬುರಗಿ: ಇತ್ತೀಚೆಗಷ್ಟೇ ಸರ್ಕಾರದಿಂದಲೇ ಬಹಮನಿ ಸುಲ್ತಾನರ ಉತ್ಸವ ಆಯೋಜಿಸಿ ರಾಜ್ಯದ ಜನ ಹಾಗೂ ಸ್ವತಃ ಮುಖ್ಯಮಂತ್ರಿಯವರಿಂದಲೇ ಟೀಕೆಗೆ ಒಳಗಾದ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮತ್ತೊಂದು ಹೇಳಿಕೆ ನೀಡುವ ಮೂಲಕ ಕನ್ನಡಪರ ಸಂಘಟನೆಗಳಿಗೆ ಅವಮಾನ ಮಾಡಿದ್ದಾರೆ.

ಬಹುಮನಿ ಸುಲ್ತಾನರ ಉತ್ಸವ ಆಚರಣೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ವಿರುದ್ಧ ಕೆಂಡಾಮಂಡಲವಾದ ಶರಣ ಪ್ರಕಾಶ್ ಪಾಟೀಲ್, “ಕನ್ನಡಪರ ಸಂಘಟನೆಗಳಿಗೆ ಇತಿಹಾಸದ ಅರಿವೇ ಇಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಇದಕ್ಕೆ ಹಲವು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ನಾನು ಇತಿಹಾಸ ಅರಿತಿದ್ದು, ಕನ್ನಡ ಪರ ಸಂಘಟನೆಗಳು ಹಾಗೂ ಹೋರಾಟಗಾರರು ರಾಜ್ಯದ ಇತಿಹಾಸವನ್ನು ಅರಿತೇ ಸಂಘಟನೆ ಕಟ್ಟಿದ್ದಾರೆ. ಇದು ಗೊತ್ತಿದ್ದರೂ ಸಚಿವ ಕನ್ನಡ ಪರ ಸಂಘಟನೆಗಳಿಗೆ ಅವಮಾನ ಮಾಡಿದ್ದು, ಕೂಡಲೇ ಕ್ಷಮೆಯಾಚಿಸಬೇಕು ಎಂದು ಹಸಿರು ಸೇನೆ (ಕಲಬುರಗಿ)ಸಂಸ್ಥಾಪಕ ಅಧ್ಯಕ್ಷ ವೀರಣ್ಣ ಕೊರಳಿ ಆಗ್ರಹಿಸಿದ್ದಾರೆ.

ಹಸನಗಂಗು, ಬಹುಮನ್ ಶಾ ಅವರಿಂದ ಹಿಡಿದು ಕಲೀ ಅಲ್ಲಾ ಶಾ ವರೆಗಿನ ಇತಿಹಾಸ ನಮಗೆ ಗೊತ್ತಿದೆ. 13 ರಿಂದ 15ನೇ ಶತಮಾನದವರೆಗೆ ಆಳ್ವಿಕೆ ನಡೆಸಿದ ಬಹುಮನಿ ಸುಲ್ತಾನರು 17 ಅರಸರನ್ನು ಕಂಡಿದ್ದು, ಅವರಲ್ಲಿ ಮೂವರು ಬಾಲ್ಯಾವಸ್ಥೆಯಲ್ಲೇ ಅಧಿಕಾರದ ಗದ್ದುಗೆಯೇರಿದ್ದರು ಎಂಬುದು ತಿಳಿದಿದೆ ಎಂದು ಕೊರಳಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಷ್ಟೇ ಅಲ್ಲ, ಹಿಂದೂ ಹಾಗೂ ಮುಸ್ಲಿಮರಿಗೆ ಬಹುಮನಿ ಸುಲ್ತಾನರು ಯಾವುದೇ ಕೊಡುಗೆ ನೀಡಿಲ್ಲ. ಅವರ ಅವಧಿಯಲ್ಲಿ ಹಿಂದೂ ದೇವಾಲಯ ಧ್ವಂಸಗೊಳಿಸಲಾಗಿದೆ. ಹಿಂದೂಗಳನ್ನು ಕೊಂದಿದ್ದಾರೆ. ಅಂತಹವರ ಜಯಂತಿ ಆಚರಿಸುವ ಹಾಗೂ ಕನ್ನಡಪರ ಹೋರಾಟಗಾರರಿಗೆ ಕರುನಾಡಿನ ಇತಿಹಾಸ ತಿಳಿಸುವ ಯಾವ ಅವಶ್ಯಕತೆಯೂ ಸಚಿವರಿಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search