• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಲೇಜಿಗೆ ಸರಿಯಾಗಿ ಬನ್ನಿ ಎಂದರೆ ಪ್ರತಿಭಟನೆ ಮಾಡುವುದು ಜೆಎನ್ ಯು ವಿದ್ಯಾರ್ಥಿಗಳು ಮಾತ್ರವೇ ಇರಬೇಕು!

TNN Correspondent Posted On February 17, 2018
0


0
Shares
  • Share On Facebook
  • Tweet It

ದೆಹಲಿ: ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಅವರಂತಹ ವಿದ್ಯಾರ್ಥಿಗಳು ದೆಹಲಿಯ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ದೇಶದ್ರೋಹದ ಹೇಳಿಕೆ ನೀಡಿದ ಕುರಿತು ರಾಷ್ಟ್ರವ್ಯಾಪಿ ಸುದ್ದಿಯಾಗಿತ್ತು. ಈಗ ಮತ್ತೊಂದು ಕಾರಣಕ್ಕಾಗಿ ಜೆಎನ್ ಯು ಸುದ್ದಿಯಾಗಿದೆ.

ಆಗಿದ್ದಿಷ್ಟೆ. ವಿದ್ಯಾರ್ಥಿಗಳು ವಿವಿ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳಿಗೆ ಅನ್ಯಾಯವಾದಾಗ, ಸೌಲಭ್ಯ ನೀಡದೇ ಇದ್ದಾಗ ವಿವಿ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ಮಾಡುವುದು ಸಾಮಾನ್ಯ. ಆದರೆ ಜೆಎನ್ ಯು ವಿವಿ ವಿದ್ಯಾರ್ಥಿಗಳು ಮಾತ್ರ ಕಾಲೇಜಿಗೆ ಸರಿಯಾಗಿ ಬನ್ನಿ ಎಂದಿದ್ದಕ್ಕೇ ಪ್ರತಿಭಟನೆ ಮಾಡಿದ್ದಾರೆ ಎಂದರೆ ನಂಬಲೇಬೇಕು.

ಹೌದು, ಇತ್ತೇಚೆಗೆ ಹಾಸ್ಟೆಲ್ ಊಟ ತಿಂದು ಕಾಲೇಜಿಗೆ ಚಕ್ಕರ್ ಹೊಡೆಯುವವರ ಸಂಖ್ಯೆ ಜಾಸ್ತಿಯಾದ ಹಿನ್ನೆಲೆಯಲ್ಲಿ ವಿವಿ ಆಡಳಿತ ಮಂಡಳಿಯು ಪ್ರತಿ ವಿದ್ಯಾರ್ಥಿಗೆ ಶೇ.75ರಷ್ಟು ಹಾಜರಾತಿ ಕಡ್ಡಾಯಗೊಳಿಸಿದೆ. ಹಾಜರಾತಿ ಇರದಿದ್ದರೆ ಪರೀಕ್ಷೆಗೆ ಕೂರಿಸುವುದಿಲ್ಲ ಎಂದು ತಿಳಿಸಿದೆ.

ಆದರೆ ಇದನ್ನೇ ಮಹಾನ್, ಘೋರ ಅನ್ಯಾಯ ಎಂಬಂತೆ ಭಾವಿಸಿರುವ ಕೆಲವ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಆದೇಶ ಹಿಂಪಡೆಯಬೇಕು, ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪೋಷಕರು ನಮ್ಮ ಮಕ್ಕಳು ಓದಿ ಉದ್ಧಾರ ಆಗಲಿ ಎಂದು ಕಷ್ಟಪಟ್ಟಾದರೂ ಉನ್ನತ ಶಿಕ್ಷಣಕ್ಕಾಗಿ ವಿಶ್ವವಿದ್ಯಾಲಯಕ್ಕೆ ಕಳುಹಿಸುತ್ತಾರೆ. ಸರ್ಕಾರ ಸಹ ಕೋಟ್ಯಂತರ ರೂ. ವೆಚ್ಚ ಮಾಡಿ ಉನ್ನತ ಶಿಕ್ಷಣ ನೀಡುತ್ತದೆ. ಇದೇ ದಿಸೆಯಲ್ಲಿ ಕಾಲೇಜು ಆಡಳಿತ ಮಂಡಳಿ ಶಿಸ್ತಿನ ನಿಯಮ ರೂಪಿಸಿದೆ. ಆದರೆ ಇದನ್ನೂ ವಿರೋಧಿಸಿ ಪ್ರತಿಭಟನೆ ಮಾಡುತ್ತಾರೆಂದರೆ?

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search