• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಶಾಂತಿ, ಸಹಬಾಳ್ವೆಯ ಮೂರ್ತರೂಪ ಎಂದ ಮುಸ್ಲಿಂ ರಾಷ್ಟ್ರದ ನಾಯಕ ಯಾರು ಗೊತ್ತಾ?

TNN Correspondent Posted On February 18, 2018
0


0
Shares
  • Share On Facebook
  • Tweet It

ದೆಹಲಿ: ಪ್ರಕಾಶ್ ರೈ ಅಂತಹ ಅತೃಪ್ತ ಆತ್ಮಗಳು, ಆಮೀರ್ ಖಾನ್ ಅವರಂತಹ ಶ್ರೀಮಂತರು ಹಾಗೂ ಬಾಯಿ ತೆವಲು ಇರುವವರು ಭಾರತದಲ್ಲಿ ಅಸಹಿಷ್ಣುತೆ ಇದೆ, ಅಭದ್ರತೆ ಕಾಡುತ್ತಿದೆ ಎಂದು ಬೊಬ್ಬೆ ಹಾಕುತ್ತಾರೆ. ಆದರೆ, ಅದೇ ವಿಶ್ವದ ಪ್ರಮುಖ ರಾಷ್ಟ್ರಗಳ ನಾಯಕರು ಮಾತ್ರ ಭಾರತದ ಆಚಾರ-ವಿಚಾರ, ಸಂಸ್ಕೃತಿ, ಶಾಂತಿಪ್ರಿಯತೆಯನ್ನು ಹಾಡಿಹೊಗಳುತ್ತಾರೆ.

ಇದಕ್ಕೆ ಪೂರಕವಾಗಿ ಮತ್ತೊಂದು ನಿದರ್ಶನ ಸಿಕ್ಕಿದ್ದು, ಇರಾನ್ ಅಧ್ಯಕ್ಷ ಹಸನ್ ರೌಹಾನಿ ಭಾರತದ ಶಾಂತಿಪ್ರಿಯತೆಯನ್ನು ಮುಕ್ತ ಕಂಠದಿಂದ ಹೊಗಳಿದ್ದಾರೆ. ಮೂರು ದಿನ ಭಾರತದ ಪ್ರವಾಸದಲ್ಲಿರುವ ಮುಸ್ಲಿಂ ರಾಷ್ಟ್ರದ ಅಧ್ಯಕ್ಷ, “ಭಾರತ ಶಾಂತಿ ಸಹಬಾಳ್ವೆಯ ಜೀವಂತ ನಿದರ್ಶನ ಹಾಗೂ ಶಾಂತಿಗೆ ಮ್ಯೂಸಿಯಂ” ಇದ್ದಂತೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಶತಶತಮಾನಗಳಿಂದ ಮುಸ್ಲಿಮರು, ಶಿಯಾ ಹಾಗೂ ಸುನ್ನಿ ಪಂಗಡಗಳು, ಬೌದ್ಧ ಧರ್ಮೀಯರು, ಸಿಖ್ಖರು ಹಾಗೂ ಹಿಂದೂಗಳು ಒಗ್ಗಟ್ಟಾಗಿ ಬಾಳುತ್ತಿದ್ದಾರೆ. ಇಂತಹ ಒಂದು ಸಹಬಾಳ್ವೆಯಿಂದಲೇ ಭಾರತ ಉತ್ತಮ ನಾಗರಿಕತೆ ಪಡೆದಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ವಿಶ್ವದಲ್ಲಿ ಇಸ್ಲಾಂ ಧರ್ಮವು ಸಹ ಶಾಂತಿ ಬಯಸುತ್ತಿದೆ. ಆದರೆ ಕೆಲವು ಮೂಲಭೂತವಾದಿಗಳ ಕುತಂತ್ರದಿಂದ ಧರ್ಮಕ್ಕೇ ಕೆಟ್ಟ ಹೆಸರು ಬರುತ್ತಿದೆ. ಅದನ್ನು ಹೋಗಲಾಡಿಸಲು ಶಿಯಾ ಹಾಗೂ ಸುನ್ನಿ ಪಂಗಡದವರು ಒಗ್ಗಟ್ಟಾಗಬೇಕು. ಶಾಂತಿ, ಸಹಬಾಳ್ವೆಯಿಂದ ಬದುಕಬೇಕು ಎಂದು ಸಹ ಸಲಹೆ ನೀಡಿದ್ದಾರೆ.

ಅದೇ ರೀತಿ, ಅವು ಮುಸ್ಲಿಂ ರಾಷ್ಟ್ರಗಳಿರಲಿ, ಅಥವಾ ಅದಾವುದೇ ಧರ್ಮ, ಸಂಸ್ಕೃತಿ ಪ್ರಧಾನ ರಾಷ್ಟ್ರಗಳಿರಬಹುದು. ಎಲ್ಲ ರಾಷ್ಟ್ರಗಳು ತಮ್ಮ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಯುದ್ಧವೇ ಅಂತಿಮ ಪರಿಹಾರ ಎಂಬುದನ್ನು ಬಿಡಬೇಕು ಎಂದಿದ್ದಾರೆ.

ಅಲ್ಲದೆ ಪ್ರಧಾನಿ ಮೋದಿ ಅವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿರುವ ಹಸನ್, ಭಾರತಕ್ಕೆ ವಿಶ್ವಸಂಸ್ಥೆಯಲ್ಲಿ ವೀಟೋ ಅಧಿಕಾರ ನೀಡಬೇಕು ಎಂದು ಸಹ ವಿಶ್ವಸಂಸ್ಥೆಗೆ ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತದ ಖ್ಯಾತೆ ವಿಶ್ವವ್ಯಾಪಿಯಾಗುತ್ತಿರುವುದಂತೂ ಸುಳ್ಳಲ್ಲ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search