• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಶಾಂತಿ, ಸಹಬಾಳ್ವೆಯ ಮೂರ್ತರೂಪ ಎಂದ ಮುಸ್ಲಿಂ ರಾಷ್ಟ್ರದ ನಾಯಕ ಯಾರು ಗೊತ್ತಾ?

TNN Correspondent Posted On February 18, 2018
0


0
Shares
  • Share On Facebook
  • Tweet It

ದೆಹಲಿ: ಪ್ರಕಾಶ್ ರೈ ಅಂತಹ ಅತೃಪ್ತ ಆತ್ಮಗಳು, ಆಮೀರ್ ಖಾನ್ ಅವರಂತಹ ಶ್ರೀಮಂತರು ಹಾಗೂ ಬಾಯಿ ತೆವಲು ಇರುವವರು ಭಾರತದಲ್ಲಿ ಅಸಹಿಷ್ಣುತೆ ಇದೆ, ಅಭದ್ರತೆ ಕಾಡುತ್ತಿದೆ ಎಂದು ಬೊಬ್ಬೆ ಹಾಕುತ್ತಾರೆ. ಆದರೆ, ಅದೇ ವಿಶ್ವದ ಪ್ರಮುಖ ರಾಷ್ಟ್ರಗಳ ನಾಯಕರು ಮಾತ್ರ ಭಾರತದ ಆಚಾರ-ವಿಚಾರ, ಸಂಸ್ಕೃತಿ, ಶಾಂತಿಪ್ರಿಯತೆಯನ್ನು ಹಾಡಿಹೊಗಳುತ್ತಾರೆ.

ಇದಕ್ಕೆ ಪೂರಕವಾಗಿ ಮತ್ತೊಂದು ನಿದರ್ಶನ ಸಿಕ್ಕಿದ್ದು, ಇರಾನ್ ಅಧ್ಯಕ್ಷ ಹಸನ್ ರೌಹಾನಿ ಭಾರತದ ಶಾಂತಿಪ್ರಿಯತೆಯನ್ನು ಮುಕ್ತ ಕಂಠದಿಂದ ಹೊಗಳಿದ್ದಾರೆ. ಮೂರು ದಿನ ಭಾರತದ ಪ್ರವಾಸದಲ್ಲಿರುವ ಮುಸ್ಲಿಂ ರಾಷ್ಟ್ರದ ಅಧ್ಯಕ್ಷ, “ಭಾರತ ಶಾಂತಿ ಸಹಬಾಳ್ವೆಯ ಜೀವಂತ ನಿದರ್ಶನ ಹಾಗೂ ಶಾಂತಿಗೆ ಮ್ಯೂಸಿಯಂ” ಇದ್ದಂತೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಶತಶತಮಾನಗಳಿಂದ ಮುಸ್ಲಿಮರು, ಶಿಯಾ ಹಾಗೂ ಸುನ್ನಿ ಪಂಗಡಗಳು, ಬೌದ್ಧ ಧರ್ಮೀಯರು, ಸಿಖ್ಖರು ಹಾಗೂ ಹಿಂದೂಗಳು ಒಗ್ಗಟ್ಟಾಗಿ ಬಾಳುತ್ತಿದ್ದಾರೆ. ಇಂತಹ ಒಂದು ಸಹಬಾಳ್ವೆಯಿಂದಲೇ ಭಾರತ ಉತ್ತಮ ನಾಗರಿಕತೆ ಪಡೆದಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ವಿಶ್ವದಲ್ಲಿ ಇಸ್ಲಾಂ ಧರ್ಮವು ಸಹ ಶಾಂತಿ ಬಯಸುತ್ತಿದೆ. ಆದರೆ ಕೆಲವು ಮೂಲಭೂತವಾದಿಗಳ ಕುತಂತ್ರದಿಂದ ಧರ್ಮಕ್ಕೇ ಕೆಟ್ಟ ಹೆಸರು ಬರುತ್ತಿದೆ. ಅದನ್ನು ಹೋಗಲಾಡಿಸಲು ಶಿಯಾ ಹಾಗೂ ಸುನ್ನಿ ಪಂಗಡದವರು ಒಗ್ಗಟ್ಟಾಗಬೇಕು. ಶಾಂತಿ, ಸಹಬಾಳ್ವೆಯಿಂದ ಬದುಕಬೇಕು ಎಂದು ಸಹ ಸಲಹೆ ನೀಡಿದ್ದಾರೆ.

ಅದೇ ರೀತಿ, ಅವು ಮುಸ್ಲಿಂ ರಾಷ್ಟ್ರಗಳಿರಲಿ, ಅಥವಾ ಅದಾವುದೇ ಧರ್ಮ, ಸಂಸ್ಕೃತಿ ಪ್ರಧಾನ ರಾಷ್ಟ್ರಗಳಿರಬಹುದು. ಎಲ್ಲ ರಾಷ್ಟ್ರಗಳು ತಮ್ಮ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಯುದ್ಧವೇ ಅಂತಿಮ ಪರಿಹಾರ ಎಂಬುದನ್ನು ಬಿಡಬೇಕು ಎಂದಿದ್ದಾರೆ.

ಅಲ್ಲದೆ ಪ್ರಧಾನಿ ಮೋದಿ ಅವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿರುವ ಹಸನ್, ಭಾರತಕ್ಕೆ ವಿಶ್ವಸಂಸ್ಥೆಯಲ್ಲಿ ವೀಟೋ ಅಧಿಕಾರ ನೀಡಬೇಕು ಎಂದು ಸಹ ವಿಶ್ವಸಂಸ್ಥೆಗೆ ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತದ ಖ್ಯಾತೆ ವಿಶ್ವವ್ಯಾಪಿಯಾಗುತ್ತಿರುವುದಂತೂ ಸುಳ್ಳಲ್ಲ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search