• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಶಾಂತಿ, ಸಹಬಾಳ್ವೆಯ ಮೂರ್ತರೂಪ ಎಂದ ಮುಸ್ಲಿಂ ರಾಷ್ಟ್ರದ ನಾಯಕ ಯಾರು ಗೊತ್ತಾ?

TNN Correspondent Posted On February 18, 2018
0


0
Shares
  • Share On Facebook
  • Tweet It

ದೆಹಲಿ: ಪ್ರಕಾಶ್ ರೈ ಅಂತಹ ಅತೃಪ್ತ ಆತ್ಮಗಳು, ಆಮೀರ್ ಖಾನ್ ಅವರಂತಹ ಶ್ರೀಮಂತರು ಹಾಗೂ ಬಾಯಿ ತೆವಲು ಇರುವವರು ಭಾರತದಲ್ಲಿ ಅಸಹಿಷ್ಣುತೆ ಇದೆ, ಅಭದ್ರತೆ ಕಾಡುತ್ತಿದೆ ಎಂದು ಬೊಬ್ಬೆ ಹಾಕುತ್ತಾರೆ. ಆದರೆ, ಅದೇ ವಿಶ್ವದ ಪ್ರಮುಖ ರಾಷ್ಟ್ರಗಳ ನಾಯಕರು ಮಾತ್ರ ಭಾರತದ ಆಚಾರ-ವಿಚಾರ, ಸಂಸ್ಕೃತಿ, ಶಾಂತಿಪ್ರಿಯತೆಯನ್ನು ಹಾಡಿಹೊಗಳುತ್ತಾರೆ.

ಇದಕ್ಕೆ ಪೂರಕವಾಗಿ ಮತ್ತೊಂದು ನಿದರ್ಶನ ಸಿಕ್ಕಿದ್ದು, ಇರಾನ್ ಅಧ್ಯಕ್ಷ ಹಸನ್ ರೌಹಾನಿ ಭಾರತದ ಶಾಂತಿಪ್ರಿಯತೆಯನ್ನು ಮುಕ್ತ ಕಂಠದಿಂದ ಹೊಗಳಿದ್ದಾರೆ. ಮೂರು ದಿನ ಭಾರತದ ಪ್ರವಾಸದಲ್ಲಿರುವ ಮುಸ್ಲಿಂ ರಾಷ್ಟ್ರದ ಅಧ್ಯಕ್ಷ, “ಭಾರತ ಶಾಂತಿ ಸಹಬಾಳ್ವೆಯ ಜೀವಂತ ನಿದರ್ಶನ ಹಾಗೂ ಶಾಂತಿಗೆ ಮ್ಯೂಸಿಯಂ” ಇದ್ದಂತೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಶತಶತಮಾನಗಳಿಂದ ಮುಸ್ಲಿಮರು, ಶಿಯಾ ಹಾಗೂ ಸುನ್ನಿ ಪಂಗಡಗಳು, ಬೌದ್ಧ ಧರ್ಮೀಯರು, ಸಿಖ್ಖರು ಹಾಗೂ ಹಿಂದೂಗಳು ಒಗ್ಗಟ್ಟಾಗಿ ಬಾಳುತ್ತಿದ್ದಾರೆ. ಇಂತಹ ಒಂದು ಸಹಬಾಳ್ವೆಯಿಂದಲೇ ಭಾರತ ಉತ್ತಮ ನಾಗರಿಕತೆ ಪಡೆದಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ವಿಶ್ವದಲ್ಲಿ ಇಸ್ಲಾಂ ಧರ್ಮವು ಸಹ ಶಾಂತಿ ಬಯಸುತ್ತಿದೆ. ಆದರೆ ಕೆಲವು ಮೂಲಭೂತವಾದಿಗಳ ಕುತಂತ್ರದಿಂದ ಧರ್ಮಕ್ಕೇ ಕೆಟ್ಟ ಹೆಸರು ಬರುತ್ತಿದೆ. ಅದನ್ನು ಹೋಗಲಾಡಿಸಲು ಶಿಯಾ ಹಾಗೂ ಸುನ್ನಿ ಪಂಗಡದವರು ಒಗ್ಗಟ್ಟಾಗಬೇಕು. ಶಾಂತಿ, ಸಹಬಾಳ್ವೆಯಿಂದ ಬದುಕಬೇಕು ಎಂದು ಸಹ ಸಲಹೆ ನೀಡಿದ್ದಾರೆ.

ಅದೇ ರೀತಿ, ಅವು ಮುಸ್ಲಿಂ ರಾಷ್ಟ್ರಗಳಿರಲಿ, ಅಥವಾ ಅದಾವುದೇ ಧರ್ಮ, ಸಂಸ್ಕೃತಿ ಪ್ರಧಾನ ರಾಷ್ಟ್ರಗಳಿರಬಹುದು. ಎಲ್ಲ ರಾಷ್ಟ್ರಗಳು ತಮ್ಮ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಯುದ್ಧವೇ ಅಂತಿಮ ಪರಿಹಾರ ಎಂಬುದನ್ನು ಬಿಡಬೇಕು ಎಂದಿದ್ದಾರೆ.

ಅಲ್ಲದೆ ಪ್ರಧಾನಿ ಮೋದಿ ಅವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿರುವ ಹಸನ್, ಭಾರತಕ್ಕೆ ವಿಶ್ವಸಂಸ್ಥೆಯಲ್ಲಿ ವೀಟೋ ಅಧಿಕಾರ ನೀಡಬೇಕು ಎಂದು ಸಹ ವಿಶ್ವಸಂಸ್ಥೆಗೆ ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತದ ಖ್ಯಾತೆ ವಿಶ್ವವ್ಯಾಪಿಯಾಗುತ್ತಿರುವುದಂತೂ ಸುಳ್ಳಲ್ಲ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search