• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಐಎಡಿಎಂಕೆ ಬಿರುಕು ಸರಿಯಾಗಲು ಪ್ರಧಾನಿ ಮೋದಿಯೇ ಕಾರಣ ಎಂದ ಪಳನಿಸ್ವಾಮಿ!

TNN Correspondent Posted On February 18, 2018
0


0
Shares
  • Share On Facebook
  • Tweet It

ಚೆನ್ನೈ: ರಾಜಕಾರಣದಲ್ಲಿ ಒಡೆದು ಆಳುವ, ಒಬ್ಬರ ಮೇಲೆ ಇನ್ನೊಬ್ಬರು ಎತ್ತಿಕಟ್ಟಿ, ಇನ್ನೊಬ್ಬರನ್ನು ಅಧಿಕಾರದಿಂದ ಕೆಳಗಿಳಿಸುವ ತಂತ್ರ, ಕುತಂತ್ರಗಳೇ ಜಾಸ್ತಿ ನಡೆಯುತ್ತವೆ. ಆದರೆ ಪ್ರಧಾನಿ ಮೋದಿ ಅವರ ಪ್ರಯತ್ನದಿಂದ ಎಐಎಡಿಎಂಕೆ ಪಕ್ಷದಲ್ಲಿ ಉಂಟಾಗಿದ್ದ ಬಿರುಕೊಂದು ಸರಿಯಾಗಿದೆ.

ಹೌದು, ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆಯೇ ನಾನು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಬಣದೊಂದಿಗೆ ಕೈ ಜೋಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಸ್ಪಷ್ಟಪಡಿಸಿದ್ದಾರೆ.

2017ರಲ್ಲಿ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದಾಗ, ಕೆ.ಪಳನಿಸ್ವಾಮಿ ವಿಚಾರ ಮಾತುಕತೆಗೆ ಬಂತು. ಆಗ ಪ್ರಧಾನಿಯವರು ಎಐಎಡಿಎಂಕೆ ಪಕ್ಷವನ್ನು ಉಳಿಸಲು ಪಳನಿಸ್ವಾಮಿ ಅವರೊಂದಿಗೆ ಕೈಜೋಡಿಸಿ ಎಂದು ಸಲಹೆ ನೀಡಿದ್ದರು. ನಾನು ಸಹ ಅದಂರತೆ ನಡೆದುಕೊಂಡೆ ಎಂದು ತೇಣಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಸೆಲ್ವಂ ತಿಳಿಸಿದ್ದಾರೆ.

ಅಮ್ಮಾ (ಜಯಲಲಿತಾ) ನಿಧನದ ಬಳಿಕ ನನಗೆ ಯಾವುದೇ ಅಧಿಕಾರದ ಆಸೆಯಿರಲಿಲ್ಲ. ಆದರೂ ಪಕ್ಷದಲ್ಲಿ ಒಡಕು ಉಂಟಾಗಿತ್ತು. ಪ್ರಧಾನಿ ಮೋದಿ ಅವರು ಅದು ಸರಿಯಾಗಲಿ, ನೀವು ಮತ್ತೆ ಒಂದಾಗಿ ಎಂಬ ಇರಾದೆ ವ್ಯಕ್ತಪಡಿಸಿದ್ದರು. ಮುಂದೆ ಅವರ ಸಲಹೆಯಂತೆಯೇ ಆಯಿತು ಎಂದು ಸ್ಪಷ್ಟಪಡಿಸಿದ್ದಾರೆ.

ಜಯಲಲಿತಾ ನಿಧನದ ಬಳಿಕ ಎಐಎಡಿಎಂಕೆಯಲ್ಲಿ ಭಾರಿ ಬಿರುಕು ಉಂಟಾಗಿತ್ತು. ಪಳನಿಸ್ವಾಮಿ ಒಂದು ಬಣ ಸೃಷ್ಟಿಸಿಕೊಂಡಿದ್ದರೆ, ಜಯಲಲಿತಾ ಆಪ್ತೆ ಶಶಿಕಲಾ ಗುಂಪಿನಲ್ಲಿ ಪನ್ನೀರ್ ಗುರುತಿಸಿಕೊಂಡಿದ್ದರು. ಶಶಿಕಲಾ ಜೈಲಿಗೆ ಹೋದ ಬಳಿಕ ಪಳನಿಸ್ವಾಮಿ ಹಾಗೂ ಪನ್ನೀರ್ ಸೆಲ್ವಂ ಒಂದಾಗಿದ್ದರು. ಸೆಲ್ವಂ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಲಭಿಸಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search