• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಐಎಡಿಎಂಕೆ ಬಿರುಕು ಸರಿಯಾಗಲು ಪ್ರಧಾನಿ ಮೋದಿಯೇ ಕಾರಣ ಎಂದ ಪಳನಿಸ್ವಾಮಿ!

TNN Correspondent Posted On February 18, 2018
0


0
Shares
  • Share On Facebook
  • Tweet It

ಚೆನ್ನೈ: ರಾಜಕಾರಣದಲ್ಲಿ ಒಡೆದು ಆಳುವ, ಒಬ್ಬರ ಮೇಲೆ ಇನ್ನೊಬ್ಬರು ಎತ್ತಿಕಟ್ಟಿ, ಇನ್ನೊಬ್ಬರನ್ನು ಅಧಿಕಾರದಿಂದ ಕೆಳಗಿಳಿಸುವ ತಂತ್ರ, ಕುತಂತ್ರಗಳೇ ಜಾಸ್ತಿ ನಡೆಯುತ್ತವೆ. ಆದರೆ ಪ್ರಧಾನಿ ಮೋದಿ ಅವರ ಪ್ರಯತ್ನದಿಂದ ಎಐಎಡಿಎಂಕೆ ಪಕ್ಷದಲ್ಲಿ ಉಂಟಾಗಿದ್ದ ಬಿರುಕೊಂದು ಸರಿಯಾಗಿದೆ.

ಹೌದು, ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆಯೇ ನಾನು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಬಣದೊಂದಿಗೆ ಕೈ ಜೋಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಸ್ಪಷ್ಟಪಡಿಸಿದ್ದಾರೆ.

2017ರಲ್ಲಿ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದಾಗ, ಕೆ.ಪಳನಿಸ್ವಾಮಿ ವಿಚಾರ ಮಾತುಕತೆಗೆ ಬಂತು. ಆಗ ಪ್ರಧಾನಿಯವರು ಎಐಎಡಿಎಂಕೆ ಪಕ್ಷವನ್ನು ಉಳಿಸಲು ಪಳನಿಸ್ವಾಮಿ ಅವರೊಂದಿಗೆ ಕೈಜೋಡಿಸಿ ಎಂದು ಸಲಹೆ ನೀಡಿದ್ದರು. ನಾನು ಸಹ ಅದಂರತೆ ನಡೆದುಕೊಂಡೆ ಎಂದು ತೇಣಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಸೆಲ್ವಂ ತಿಳಿಸಿದ್ದಾರೆ.

ಅಮ್ಮಾ (ಜಯಲಲಿತಾ) ನಿಧನದ ಬಳಿಕ ನನಗೆ ಯಾವುದೇ ಅಧಿಕಾರದ ಆಸೆಯಿರಲಿಲ್ಲ. ಆದರೂ ಪಕ್ಷದಲ್ಲಿ ಒಡಕು ಉಂಟಾಗಿತ್ತು. ಪ್ರಧಾನಿ ಮೋದಿ ಅವರು ಅದು ಸರಿಯಾಗಲಿ, ನೀವು ಮತ್ತೆ ಒಂದಾಗಿ ಎಂಬ ಇರಾದೆ ವ್ಯಕ್ತಪಡಿಸಿದ್ದರು. ಮುಂದೆ ಅವರ ಸಲಹೆಯಂತೆಯೇ ಆಯಿತು ಎಂದು ಸ್ಪಷ್ಟಪಡಿಸಿದ್ದಾರೆ.

ಜಯಲಲಿತಾ ನಿಧನದ ಬಳಿಕ ಎಐಎಡಿಎಂಕೆಯಲ್ಲಿ ಭಾರಿ ಬಿರುಕು ಉಂಟಾಗಿತ್ತು. ಪಳನಿಸ್ವಾಮಿ ಒಂದು ಬಣ ಸೃಷ್ಟಿಸಿಕೊಂಡಿದ್ದರೆ, ಜಯಲಲಿತಾ ಆಪ್ತೆ ಶಶಿಕಲಾ ಗುಂಪಿನಲ್ಲಿ ಪನ್ನೀರ್ ಗುರುತಿಸಿಕೊಂಡಿದ್ದರು. ಶಶಿಕಲಾ ಜೈಲಿಗೆ ಹೋದ ಬಳಿಕ ಪಳನಿಸ್ವಾಮಿ ಹಾಗೂ ಪನ್ನೀರ್ ಸೆಲ್ವಂ ಒಂದಾಗಿದ್ದರು. ಸೆಲ್ವಂ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಲಭಿಸಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search