• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಐಎಡಿಎಂಕೆ ಬಿರುಕು ಸರಿಯಾಗಲು ಪ್ರಧಾನಿ ಮೋದಿಯೇ ಕಾರಣ ಎಂದ ಪಳನಿಸ್ವಾಮಿ!

TNN Correspondent Posted On February 18, 2018
0


0
Shares
  • Share On Facebook
  • Tweet It

ಚೆನ್ನೈ: ರಾಜಕಾರಣದಲ್ಲಿ ಒಡೆದು ಆಳುವ, ಒಬ್ಬರ ಮೇಲೆ ಇನ್ನೊಬ್ಬರು ಎತ್ತಿಕಟ್ಟಿ, ಇನ್ನೊಬ್ಬರನ್ನು ಅಧಿಕಾರದಿಂದ ಕೆಳಗಿಳಿಸುವ ತಂತ್ರ, ಕುತಂತ್ರಗಳೇ ಜಾಸ್ತಿ ನಡೆಯುತ್ತವೆ. ಆದರೆ ಪ್ರಧಾನಿ ಮೋದಿ ಅವರ ಪ್ರಯತ್ನದಿಂದ ಎಐಎಡಿಎಂಕೆ ಪಕ್ಷದಲ್ಲಿ ಉಂಟಾಗಿದ್ದ ಬಿರುಕೊಂದು ಸರಿಯಾಗಿದೆ.

ಹೌದು, ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆಯೇ ನಾನು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಬಣದೊಂದಿಗೆ ಕೈ ಜೋಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಸ್ಪಷ್ಟಪಡಿಸಿದ್ದಾರೆ.

2017ರಲ್ಲಿ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದಾಗ, ಕೆ.ಪಳನಿಸ್ವಾಮಿ ವಿಚಾರ ಮಾತುಕತೆಗೆ ಬಂತು. ಆಗ ಪ್ರಧಾನಿಯವರು ಎಐಎಡಿಎಂಕೆ ಪಕ್ಷವನ್ನು ಉಳಿಸಲು ಪಳನಿಸ್ವಾಮಿ ಅವರೊಂದಿಗೆ ಕೈಜೋಡಿಸಿ ಎಂದು ಸಲಹೆ ನೀಡಿದ್ದರು. ನಾನು ಸಹ ಅದಂರತೆ ನಡೆದುಕೊಂಡೆ ಎಂದು ತೇಣಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಸೆಲ್ವಂ ತಿಳಿಸಿದ್ದಾರೆ.

ಅಮ್ಮಾ (ಜಯಲಲಿತಾ) ನಿಧನದ ಬಳಿಕ ನನಗೆ ಯಾವುದೇ ಅಧಿಕಾರದ ಆಸೆಯಿರಲಿಲ್ಲ. ಆದರೂ ಪಕ್ಷದಲ್ಲಿ ಒಡಕು ಉಂಟಾಗಿತ್ತು. ಪ್ರಧಾನಿ ಮೋದಿ ಅವರು ಅದು ಸರಿಯಾಗಲಿ, ನೀವು ಮತ್ತೆ ಒಂದಾಗಿ ಎಂಬ ಇರಾದೆ ವ್ಯಕ್ತಪಡಿಸಿದ್ದರು. ಮುಂದೆ ಅವರ ಸಲಹೆಯಂತೆಯೇ ಆಯಿತು ಎಂದು ಸ್ಪಷ್ಟಪಡಿಸಿದ್ದಾರೆ.

ಜಯಲಲಿತಾ ನಿಧನದ ಬಳಿಕ ಎಐಎಡಿಎಂಕೆಯಲ್ಲಿ ಭಾರಿ ಬಿರುಕು ಉಂಟಾಗಿತ್ತು. ಪಳನಿಸ್ವಾಮಿ ಒಂದು ಬಣ ಸೃಷ್ಟಿಸಿಕೊಂಡಿದ್ದರೆ, ಜಯಲಲಿತಾ ಆಪ್ತೆ ಶಶಿಕಲಾ ಗುಂಪಿನಲ್ಲಿ ಪನ್ನೀರ್ ಗುರುತಿಸಿಕೊಂಡಿದ್ದರು. ಶಶಿಕಲಾ ಜೈಲಿಗೆ ಹೋದ ಬಳಿಕ ಪಳನಿಸ್ವಾಮಿ ಹಾಗೂ ಪನ್ನೀರ್ ಸೆಲ್ವಂ ಒಂದಾಗಿದ್ದರು. ಸೆಲ್ವಂ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಲಭಿಸಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search