• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವಚ್ಛ ಭಾರತ ಅಭಿಯಾನದ ಯಶಸ್ಸಿಗಾಗಿ ಶೌಚಾಲಯ ಶುದ್ಧಗೊಳಿಸಿ ಜಾಗೃತಿ ಮೂಡಿಸಿದ ಬಿಜೆಪಿ ಸಂಸದ!

TNN Correspondent Posted On February 18, 2018
0


0
Shares
  • Share On Facebook
  • Tweet It

ಭೋಪಾಲ್: ರಾಜಕಾರಣಿಗಳು ಎಂದರೆ ಯಾವುದೇ ಕಾಮಗಾಗಿಗೆ ಗುದ್ದಲಿಪೂಜೆ, ಕಟ್ಟಡ ಉದ್ಘಾಟನೆಯ ಟೇಪ್ ಕತ್ತರಿಸುವ ಚಿತ್ರಗಳು ಪತ್ರಿಕೆಗಳಲ್ಲಿ ಪ್ರಕಟವಾಗುತ್ತವೆ. ಅದರಲ್ಲಿ ಅವರು ಸಹ ಪ್ರಚಾರಕ್ಕಾಗಿ ಚೆನ್ನಾಗಿಯೇ ಪೋಸ್ ಕೊಡುತ್ತಾರೆ. ಅಥವಾ ಸಸಿ ನೆಟ್ಟು ತಾವು ಪರಿಸರ ಪ್ರೇಮಿಗಳು ಎಂದೋ, ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿಯೋ ಜನಪ್ರಿಯತೆ ಗಳಿಸಲು ನಾಟಕವಾಡುತ್ತಾರೆ.

ಆದರೆ ಮಧ್ಯಪ್ರದೇಶದಲ್ಲಿ ಬಿಜೆಪಿ ಸಂಸದರೊಬ್ಬರು ಸ್ವಚ್ಛ ಭಾರತ ಅಭಿಯಾನದ ಯಶಸ್ಸು ಹಾಗೂ ಜಾಗೃತಿ ಮೂಡಿಸಲು ತಾವೇ ಶೌಚಾಲಯ ಸ್ವಚ್ಛಗೊಳಿಸುವ ಮೂಲಕ ಬೇರೆ ರಾಜಕಾರಣಿಗಳಿಗೆ ಮಾದರಿಯಾಗುವ ಕೆಲಸ ಮಾಡಿದ್ದಾರೆ.

ರೇವಾ ಕ್ಷೇತ್ರದ ಸಂಸದ ಜನಾರ್ದನ್ ಮಿಶ್ರಾ ಶೌಚಾಲಯ ಸ್ವಚ್ಛಗೊಳಿಸಿದ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಿಶ್ರಾ ಅವರಿಗೆ ಮೆಚ್ಚುಗೆಯ ಮಾತುಗಳು ಸಹ ವ್ಯಕ್ತವಾಗಿವೆ.

ರೇವಾದ ಖಾಜುಹಾ ಎಂಬ ಶಾಲೆಗೆ ಜನಾರ್ದನ್ ಮಿಶ್ರಾ ಭೇಟಿ ನೀಡಿದ್ದು, ಅಲ್ಲಿ ಶೌಚಾಲಯ ಸ್ವಚ್ಛವಿರದ ಕಾರಣ ವಿದ್ಯಾರ್ಥಿಗಳು ಒಳಗೆ ಹೋಗಿ ಬರಲು ಮುಜುಗಪಟ್ಟುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಮಿಶ್ರಾ ತಕ್ಷಣ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಶಾಲೆಯ ಶೌಚಾಲಯ ಯಾವಾಗಲೂ ನೈರ್ಮಲ್ಯದಿಂದ ಇರುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡುವ ಜತೆಗೆ ಸ್ವಚ್ಛ ಭಾರತ ಯೋಜನೆಯ ಯಶಸ್ಸಿಗಾಗಿ ಮಕ್ಕಳಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಸಹ ಮೂಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿಂದೊಮ್ಮೆ ಶಾಲೆಯೊಂದಕ್ಕೆ ಭೇಟಿ ನೀಡಿದ್ದಾಗ, ವಿದ್ಯಾರ್ಥಿಗಳು ಸರಿಯಾಗಿ ಸ್ನಾನ ಮಾಡದೆ ಶಾಲೆಗೆ ಬಂದಿದ್ದನ್ನು ಕಂಡಿದ್ದ ಮಿಶ್ರಾ ಅವರು ಒಬ್ಬ ವಿದ್ಯಾರ್ಥಿಗೆ ಸ್ನಾನವನ್ನೇ ಮಾಡಿಸಿದ್ದರು. ಕಳೆದ ವಾರ ಬಡಾವಣೆಯೊಂದರಲ್ಲಿ ಕಸಗುಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಒಟ್ಟಿನಲ್ಲಿ ಬಿಳಿ ಬಟ್ಟೆ ತೊಟ್ಟು ಶೋಕಿ ಮಾಡುವ ರಾಜಕಾರಣಿಗಳಿಗಿಂತ ಬಿಜೆಪಿಯ ಜನಾರ್ದನ್ ಮಿಶ್ರ ವಿಭಿನ್ನವಾಗಿ ಕಾಣುತ್ತಾರೆ. ಇಂತಹವರ ಸಂತತಿ ಜಾಸ್ತಿಯಾಗಲಿ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search