• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವಚ್ಛ ಭಾರತ ಅಭಿಯಾನದ ಯಶಸ್ಸಿಗಾಗಿ ಶೌಚಾಲಯ ಶುದ್ಧಗೊಳಿಸಿ ಜಾಗೃತಿ ಮೂಡಿಸಿದ ಬಿಜೆಪಿ ಸಂಸದ!

TNN Correspondent Posted On February 18, 2018
0


0
Shares
  • Share On Facebook
  • Tweet It

ಭೋಪಾಲ್: ರಾಜಕಾರಣಿಗಳು ಎಂದರೆ ಯಾವುದೇ ಕಾಮಗಾಗಿಗೆ ಗುದ್ದಲಿಪೂಜೆ, ಕಟ್ಟಡ ಉದ್ಘಾಟನೆಯ ಟೇಪ್ ಕತ್ತರಿಸುವ ಚಿತ್ರಗಳು ಪತ್ರಿಕೆಗಳಲ್ಲಿ ಪ್ರಕಟವಾಗುತ್ತವೆ. ಅದರಲ್ಲಿ ಅವರು ಸಹ ಪ್ರಚಾರಕ್ಕಾಗಿ ಚೆನ್ನಾಗಿಯೇ ಪೋಸ್ ಕೊಡುತ್ತಾರೆ. ಅಥವಾ ಸಸಿ ನೆಟ್ಟು ತಾವು ಪರಿಸರ ಪ್ರೇಮಿಗಳು ಎಂದೋ, ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿಯೋ ಜನಪ್ರಿಯತೆ ಗಳಿಸಲು ನಾಟಕವಾಡುತ್ತಾರೆ.

ಆದರೆ ಮಧ್ಯಪ್ರದೇಶದಲ್ಲಿ ಬಿಜೆಪಿ ಸಂಸದರೊಬ್ಬರು ಸ್ವಚ್ಛ ಭಾರತ ಅಭಿಯಾನದ ಯಶಸ್ಸು ಹಾಗೂ ಜಾಗೃತಿ ಮೂಡಿಸಲು ತಾವೇ ಶೌಚಾಲಯ ಸ್ವಚ್ಛಗೊಳಿಸುವ ಮೂಲಕ ಬೇರೆ ರಾಜಕಾರಣಿಗಳಿಗೆ ಮಾದರಿಯಾಗುವ ಕೆಲಸ ಮಾಡಿದ್ದಾರೆ.

ರೇವಾ ಕ್ಷೇತ್ರದ ಸಂಸದ ಜನಾರ್ದನ್ ಮಿಶ್ರಾ ಶೌಚಾಲಯ ಸ್ವಚ್ಛಗೊಳಿಸಿದ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಿಶ್ರಾ ಅವರಿಗೆ ಮೆಚ್ಚುಗೆಯ ಮಾತುಗಳು ಸಹ ವ್ಯಕ್ತವಾಗಿವೆ.

ರೇವಾದ ಖಾಜುಹಾ ಎಂಬ ಶಾಲೆಗೆ ಜನಾರ್ದನ್ ಮಿಶ್ರಾ ಭೇಟಿ ನೀಡಿದ್ದು, ಅಲ್ಲಿ ಶೌಚಾಲಯ ಸ್ವಚ್ಛವಿರದ ಕಾರಣ ವಿದ್ಯಾರ್ಥಿಗಳು ಒಳಗೆ ಹೋಗಿ ಬರಲು ಮುಜುಗಪಟ್ಟುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಮಿಶ್ರಾ ತಕ್ಷಣ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಶಾಲೆಯ ಶೌಚಾಲಯ ಯಾವಾಗಲೂ ನೈರ್ಮಲ್ಯದಿಂದ ಇರುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡುವ ಜತೆಗೆ ಸ್ವಚ್ಛ ಭಾರತ ಯೋಜನೆಯ ಯಶಸ್ಸಿಗಾಗಿ ಮಕ್ಕಳಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಸಹ ಮೂಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿಂದೊಮ್ಮೆ ಶಾಲೆಯೊಂದಕ್ಕೆ ಭೇಟಿ ನೀಡಿದ್ದಾಗ, ವಿದ್ಯಾರ್ಥಿಗಳು ಸರಿಯಾಗಿ ಸ್ನಾನ ಮಾಡದೆ ಶಾಲೆಗೆ ಬಂದಿದ್ದನ್ನು ಕಂಡಿದ್ದ ಮಿಶ್ರಾ ಅವರು ಒಬ್ಬ ವಿದ್ಯಾರ್ಥಿಗೆ ಸ್ನಾನವನ್ನೇ ಮಾಡಿಸಿದ್ದರು. ಕಳೆದ ವಾರ ಬಡಾವಣೆಯೊಂದರಲ್ಲಿ ಕಸಗುಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಒಟ್ಟಿನಲ್ಲಿ ಬಿಳಿ ಬಟ್ಟೆ ತೊಟ್ಟು ಶೋಕಿ ಮಾಡುವ ರಾಜಕಾರಣಿಗಳಿಗಿಂತ ಬಿಜೆಪಿಯ ಜನಾರ್ದನ್ ಮಿಶ್ರ ವಿಭಿನ್ನವಾಗಿ ಕಾಣುತ್ತಾರೆ. ಇಂತಹವರ ಸಂತತಿ ಜಾಸ್ತಿಯಾಗಲಿ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search