• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವಚ್ಛ ಭಾರತ ಅಭಿಯಾನದ ಯಶಸ್ಸಿಗಾಗಿ ಶೌಚಾಲಯ ಶುದ್ಧಗೊಳಿಸಿ ಜಾಗೃತಿ ಮೂಡಿಸಿದ ಬಿಜೆಪಿ ಸಂಸದ!

TNN Correspondent Posted On February 18, 2018
0


0
Shares
  • Share On Facebook
  • Tweet It

ಭೋಪಾಲ್: ರಾಜಕಾರಣಿಗಳು ಎಂದರೆ ಯಾವುದೇ ಕಾಮಗಾಗಿಗೆ ಗುದ್ದಲಿಪೂಜೆ, ಕಟ್ಟಡ ಉದ್ಘಾಟನೆಯ ಟೇಪ್ ಕತ್ತರಿಸುವ ಚಿತ್ರಗಳು ಪತ್ರಿಕೆಗಳಲ್ಲಿ ಪ್ರಕಟವಾಗುತ್ತವೆ. ಅದರಲ್ಲಿ ಅವರು ಸಹ ಪ್ರಚಾರಕ್ಕಾಗಿ ಚೆನ್ನಾಗಿಯೇ ಪೋಸ್ ಕೊಡುತ್ತಾರೆ. ಅಥವಾ ಸಸಿ ನೆಟ್ಟು ತಾವು ಪರಿಸರ ಪ್ರೇಮಿಗಳು ಎಂದೋ, ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿಯೋ ಜನಪ್ರಿಯತೆ ಗಳಿಸಲು ನಾಟಕವಾಡುತ್ತಾರೆ.

ಆದರೆ ಮಧ್ಯಪ್ರದೇಶದಲ್ಲಿ ಬಿಜೆಪಿ ಸಂಸದರೊಬ್ಬರು ಸ್ವಚ್ಛ ಭಾರತ ಅಭಿಯಾನದ ಯಶಸ್ಸು ಹಾಗೂ ಜಾಗೃತಿ ಮೂಡಿಸಲು ತಾವೇ ಶೌಚಾಲಯ ಸ್ವಚ್ಛಗೊಳಿಸುವ ಮೂಲಕ ಬೇರೆ ರಾಜಕಾರಣಿಗಳಿಗೆ ಮಾದರಿಯಾಗುವ ಕೆಲಸ ಮಾಡಿದ್ದಾರೆ.

ರೇವಾ ಕ್ಷೇತ್ರದ ಸಂಸದ ಜನಾರ್ದನ್ ಮಿಶ್ರಾ ಶೌಚಾಲಯ ಸ್ವಚ್ಛಗೊಳಿಸಿದ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಿಶ್ರಾ ಅವರಿಗೆ ಮೆಚ್ಚುಗೆಯ ಮಾತುಗಳು ಸಹ ವ್ಯಕ್ತವಾಗಿವೆ.

ರೇವಾದ ಖಾಜುಹಾ ಎಂಬ ಶಾಲೆಗೆ ಜನಾರ್ದನ್ ಮಿಶ್ರಾ ಭೇಟಿ ನೀಡಿದ್ದು, ಅಲ್ಲಿ ಶೌಚಾಲಯ ಸ್ವಚ್ಛವಿರದ ಕಾರಣ ವಿದ್ಯಾರ್ಥಿಗಳು ಒಳಗೆ ಹೋಗಿ ಬರಲು ಮುಜುಗಪಟ್ಟುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಮಿಶ್ರಾ ತಕ್ಷಣ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಶಾಲೆಯ ಶೌಚಾಲಯ ಯಾವಾಗಲೂ ನೈರ್ಮಲ್ಯದಿಂದ ಇರುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡುವ ಜತೆಗೆ ಸ್ವಚ್ಛ ಭಾರತ ಯೋಜನೆಯ ಯಶಸ್ಸಿಗಾಗಿ ಮಕ್ಕಳಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಸಹ ಮೂಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿಂದೊಮ್ಮೆ ಶಾಲೆಯೊಂದಕ್ಕೆ ಭೇಟಿ ನೀಡಿದ್ದಾಗ, ವಿದ್ಯಾರ್ಥಿಗಳು ಸರಿಯಾಗಿ ಸ್ನಾನ ಮಾಡದೆ ಶಾಲೆಗೆ ಬಂದಿದ್ದನ್ನು ಕಂಡಿದ್ದ ಮಿಶ್ರಾ ಅವರು ಒಬ್ಬ ವಿದ್ಯಾರ್ಥಿಗೆ ಸ್ನಾನವನ್ನೇ ಮಾಡಿಸಿದ್ದರು. ಕಳೆದ ವಾರ ಬಡಾವಣೆಯೊಂದರಲ್ಲಿ ಕಸಗುಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಒಟ್ಟಿನಲ್ಲಿ ಬಿಳಿ ಬಟ್ಟೆ ತೊಟ್ಟು ಶೋಕಿ ಮಾಡುವ ರಾಜಕಾರಣಿಗಳಿಗಿಂತ ಬಿಜೆಪಿಯ ಜನಾರ್ದನ್ ಮಿಶ್ರ ವಿಭಿನ್ನವಾಗಿ ಕಾಣುತ್ತಾರೆ. ಇಂತಹವರ ಸಂತತಿ ಜಾಸ್ತಿಯಾಗಲಿ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search