• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವಚ್ಛ ಭಾರತ ಅಭಿಯಾನದ ಯಶಸ್ಸಿಗಾಗಿ ಶೌಚಾಲಯ ಶುದ್ಧಗೊಳಿಸಿ ಜಾಗೃತಿ ಮೂಡಿಸಿದ ಬಿಜೆಪಿ ಸಂಸದ!

TNN Correspondent Posted On February 18, 2018
0


0
Shares
  • Share On Facebook
  • Tweet It

ಭೋಪಾಲ್: ರಾಜಕಾರಣಿಗಳು ಎಂದರೆ ಯಾವುದೇ ಕಾಮಗಾಗಿಗೆ ಗುದ್ದಲಿಪೂಜೆ, ಕಟ್ಟಡ ಉದ್ಘಾಟನೆಯ ಟೇಪ್ ಕತ್ತರಿಸುವ ಚಿತ್ರಗಳು ಪತ್ರಿಕೆಗಳಲ್ಲಿ ಪ್ರಕಟವಾಗುತ್ತವೆ. ಅದರಲ್ಲಿ ಅವರು ಸಹ ಪ್ರಚಾರಕ್ಕಾಗಿ ಚೆನ್ನಾಗಿಯೇ ಪೋಸ್ ಕೊಡುತ್ತಾರೆ. ಅಥವಾ ಸಸಿ ನೆಟ್ಟು ತಾವು ಪರಿಸರ ಪ್ರೇಮಿಗಳು ಎಂದೋ, ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿಯೋ ಜನಪ್ರಿಯತೆ ಗಳಿಸಲು ನಾಟಕವಾಡುತ್ತಾರೆ.

ಆದರೆ ಮಧ್ಯಪ್ರದೇಶದಲ್ಲಿ ಬಿಜೆಪಿ ಸಂಸದರೊಬ್ಬರು ಸ್ವಚ್ಛ ಭಾರತ ಅಭಿಯಾನದ ಯಶಸ್ಸು ಹಾಗೂ ಜಾಗೃತಿ ಮೂಡಿಸಲು ತಾವೇ ಶೌಚಾಲಯ ಸ್ವಚ್ಛಗೊಳಿಸುವ ಮೂಲಕ ಬೇರೆ ರಾಜಕಾರಣಿಗಳಿಗೆ ಮಾದರಿಯಾಗುವ ಕೆಲಸ ಮಾಡಿದ್ದಾರೆ.

ರೇವಾ ಕ್ಷೇತ್ರದ ಸಂಸದ ಜನಾರ್ದನ್ ಮಿಶ್ರಾ ಶೌಚಾಲಯ ಸ್ವಚ್ಛಗೊಳಿಸಿದ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಿಶ್ರಾ ಅವರಿಗೆ ಮೆಚ್ಚುಗೆಯ ಮಾತುಗಳು ಸಹ ವ್ಯಕ್ತವಾಗಿವೆ.

ರೇವಾದ ಖಾಜುಹಾ ಎಂಬ ಶಾಲೆಗೆ ಜನಾರ್ದನ್ ಮಿಶ್ರಾ ಭೇಟಿ ನೀಡಿದ್ದು, ಅಲ್ಲಿ ಶೌಚಾಲಯ ಸ್ವಚ್ಛವಿರದ ಕಾರಣ ವಿದ್ಯಾರ್ಥಿಗಳು ಒಳಗೆ ಹೋಗಿ ಬರಲು ಮುಜುಗಪಟ್ಟುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಮಿಶ್ರಾ ತಕ್ಷಣ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಶಾಲೆಯ ಶೌಚಾಲಯ ಯಾವಾಗಲೂ ನೈರ್ಮಲ್ಯದಿಂದ ಇರುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡುವ ಜತೆಗೆ ಸ್ವಚ್ಛ ಭಾರತ ಯೋಜನೆಯ ಯಶಸ್ಸಿಗಾಗಿ ಮಕ್ಕಳಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಸಹ ಮೂಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿಂದೊಮ್ಮೆ ಶಾಲೆಯೊಂದಕ್ಕೆ ಭೇಟಿ ನೀಡಿದ್ದಾಗ, ವಿದ್ಯಾರ್ಥಿಗಳು ಸರಿಯಾಗಿ ಸ್ನಾನ ಮಾಡದೆ ಶಾಲೆಗೆ ಬಂದಿದ್ದನ್ನು ಕಂಡಿದ್ದ ಮಿಶ್ರಾ ಅವರು ಒಬ್ಬ ವಿದ್ಯಾರ್ಥಿಗೆ ಸ್ನಾನವನ್ನೇ ಮಾಡಿಸಿದ್ದರು. ಕಳೆದ ವಾರ ಬಡಾವಣೆಯೊಂದರಲ್ಲಿ ಕಸಗುಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಒಟ್ಟಿನಲ್ಲಿ ಬಿಳಿ ಬಟ್ಟೆ ತೊಟ್ಟು ಶೋಕಿ ಮಾಡುವ ರಾಜಕಾರಣಿಗಳಿಗಿಂತ ಬಿಜೆಪಿಯ ಜನಾರ್ದನ್ ಮಿಶ್ರ ವಿಭಿನ್ನವಾಗಿ ಕಾಣುತ್ತಾರೆ. ಇಂತಹವರ ಸಂತತಿ ಜಾಸ್ತಿಯಾಗಲಿ.

0
Shares
  • Share On Facebook
  • Tweet It




Trending Now
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
Tulunadu News July 7, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
  • Popular Posts

    • 1
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 2
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 3
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 4
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • 5
      ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?

  • Privacy Policy
  • Contact
© Tulunadu Infomedia.

Press enter/return to begin your search