• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರ ಗುಟುರಿಗೆ ಹೆದರಿದ ರೌಡಿಗಳು, ಶರಣಾದವರನ್ನು ಜೈಲಿಗೆ ಹಾಕಲು ಸ್ಥಳವೇ ಸಾಕಾಗುತ್ತಿಲ್ಲ

TNN Correspondent Posted On February 19, 2018
0


0
Shares
  • Share On Facebook
  • Tweet It

ಲಖನೌ: ಫೈರ್ ಬ್ರ್ಯಾಂಡ್ ಯೋಗಿ ಆದಿತ್ಯನಾಥರು 2017ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಜಾರಿಗೆ ತಂದ ಪ್ರಮುಖ ಯೋಜನೆಗಳು, ತೆಗೆದುಕೊಂಡ ದಿಟ್ಟ ನಿರ್ಧಾರಗಳು ಹೇಗೆ ಮನೆಮಾತಾಗಿವೆಯೋ, ಅವರು ಕೈಗೊಂಡ ಕಾನೂನು ಸುವ್ಯವಸ್ಥೆಯೂ ಪ್ರಸ್ತುತ ರಾಜ್ಯದ ಗಡಿದಾಟಿ ಸುದ್ದಿಯಾಗುತ್ತಿದೆ.

ಹೌದು, ಸಮಾಜದ ನೆಮ್ಮದಿ ಹಾಳು ಮಾಡುತ್ತಿರುವ ರೌಡಿಗಳನ್ನು ಎನ್ ಕೌಂಟರ್ ಮಾಡಲು ಆದೇಶಿಸಿರುವ ಸಿಎಂ ಆದಿತ್ಯನಾಥರು, ಶರಣಾಗಲು ಒಪ್ಪದವರನ್ನು ಸಹ ಎನ್ ಕೌಂಟರ್ ಮಾಡುವಂತೆ ದಿಟ್ಟ ಆದೇಶ ಹೊರಡಿಸಿದ್ದಾರೆ.

ಇದರಿಂದ ಪತರಗುಟ್ಟಿರುವ ಉತ್ತರ ಪ್ರದೇಶದ ರೌಡಿಗಳು ಈಗ ಹಿಂಡು ಹಿಂಡಾಗಿ ಬಂದು ಶರಣಾಗುತ್ತಿದ್ದು, ಅವರನ್ನು ಇಡಲು ಜೈಲಿನಲ್ಲಿ ಸ್ಥಳವೇ ಸಾಕಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಉತ್ತರ ಪ್ರದೇಶ ಡಿಜಿಪಿ ಕಚೇರಿಯೇ ಮಾಹಿತಿ ನೀಡಿರುವ ಪ್ರಕಾರ, ಪೊಲೀಸರ ವಾಂಟೆಡ್ ಲಿಸ್ಟ್ ನಲ್ಲಿದ್ದ ಸುಮಾರು 142 ಕ್ರಿಮಿನಲ್ ಗಳು ಶರಣಾಗಿದ್ದಾರೆ. ಈ ಕುರಿತು ಸುಮಾರು 26 ಕ್ರಿಮಿನಲ್ ಗಳಿಗೆ ಜಾಮೀನು ಮಂಜೂರಾಗಿದ್ದರೂ ಜೈಲು ಬಿಟ್ಟಲು ಹೋಗುತ್ತಿಲ್ಲ ಎಂದು ತಿಳಿದುಬಂದಿದೆ.

ಇದಕ್ಕೆಲ್ಲ ಕಾರಣ ಯೋಗಿ ಆದಿತ್ಯನಾಥರು ಕೈಗೊಂಡ ನಿರ್ಧಾರವೇ ಆಗಿದ್ದು, 2017ರ ಮಾರ್ಚ್ 20ರಿಂದ ಇದುವರೆಗೆ ಉತ್ತರ ಪ್ರದೇಶದಲ್ಲಿ 1240 ಎನ್ ಕೌಂಟರ್ ನಡೆದಿವೆ. ಅದರಲ್ಲಿ 40ಕ್ಕೂ ಅಧಿಕ ಕ್ರಿಮಿನಲ್ ಗಳು ಮೃತಪಟ್ಟಿದ್ದು, 300ಕ್ಕೂ ಹೆಚ್ಚು ರೌಡಿಗಳು ಗಾಯಗೊಂಡಿದ್ದಾರೆ.

ಅಲ್ಲದೆ, ಶರಣಾಗಲು ಒಪ್ಪದಿದ್ದರೆ ಎನ್ ಕೌಂಟರ್ ಮಾಡಿ ಎಂದು ಯೋಗಿ ಆದಿತ್ಯನಾಥರು ಆದೇಶಿಸಿರುವುದರಿಂದ ಜೀವ ಉಳಿದರೆ ಸಾಕು ಎನ್ನುತ್ತಿರುವ ರೌಡಿಗಳು, ಜೈಲಿಗೆ ಬಂದು ಶರಣಾಗುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಎಂದರೆ ಇದೇ ಅಲ್ಲವೆ? ನಮ್ಮ ಸಿದ್ದರಾಮಯ್ಯನವರು ಇಂತಹ ಕ್ರಮ ಕೈಗೊಳ್ಳಬೇಕು.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search