• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರ ಗುಟುರಿಗೆ ಹೆದರಿದ ರೌಡಿಗಳು, ಶರಣಾದವರನ್ನು ಜೈಲಿಗೆ ಹಾಕಲು ಸ್ಥಳವೇ ಸಾಕಾಗುತ್ತಿಲ್ಲ

TNN Correspondent Posted On February 19, 2018
0


0
Shares
  • Share On Facebook
  • Tweet It

ಲಖನೌ: ಫೈರ್ ಬ್ರ್ಯಾಂಡ್ ಯೋಗಿ ಆದಿತ್ಯನಾಥರು 2017ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಜಾರಿಗೆ ತಂದ ಪ್ರಮುಖ ಯೋಜನೆಗಳು, ತೆಗೆದುಕೊಂಡ ದಿಟ್ಟ ನಿರ್ಧಾರಗಳು ಹೇಗೆ ಮನೆಮಾತಾಗಿವೆಯೋ, ಅವರು ಕೈಗೊಂಡ ಕಾನೂನು ಸುವ್ಯವಸ್ಥೆಯೂ ಪ್ರಸ್ತುತ ರಾಜ್ಯದ ಗಡಿದಾಟಿ ಸುದ್ದಿಯಾಗುತ್ತಿದೆ.

ಹೌದು, ಸಮಾಜದ ನೆಮ್ಮದಿ ಹಾಳು ಮಾಡುತ್ತಿರುವ ರೌಡಿಗಳನ್ನು ಎನ್ ಕೌಂಟರ್ ಮಾಡಲು ಆದೇಶಿಸಿರುವ ಸಿಎಂ ಆದಿತ್ಯನಾಥರು, ಶರಣಾಗಲು ಒಪ್ಪದವರನ್ನು ಸಹ ಎನ್ ಕೌಂಟರ್ ಮಾಡುವಂತೆ ದಿಟ್ಟ ಆದೇಶ ಹೊರಡಿಸಿದ್ದಾರೆ.

ಇದರಿಂದ ಪತರಗುಟ್ಟಿರುವ ಉತ್ತರ ಪ್ರದೇಶದ ರೌಡಿಗಳು ಈಗ ಹಿಂಡು ಹಿಂಡಾಗಿ ಬಂದು ಶರಣಾಗುತ್ತಿದ್ದು, ಅವರನ್ನು ಇಡಲು ಜೈಲಿನಲ್ಲಿ ಸ್ಥಳವೇ ಸಾಕಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಉತ್ತರ ಪ್ರದೇಶ ಡಿಜಿಪಿ ಕಚೇರಿಯೇ ಮಾಹಿತಿ ನೀಡಿರುವ ಪ್ರಕಾರ, ಪೊಲೀಸರ ವಾಂಟೆಡ್ ಲಿಸ್ಟ್ ನಲ್ಲಿದ್ದ ಸುಮಾರು 142 ಕ್ರಿಮಿನಲ್ ಗಳು ಶರಣಾಗಿದ್ದಾರೆ. ಈ ಕುರಿತು ಸುಮಾರು 26 ಕ್ರಿಮಿನಲ್ ಗಳಿಗೆ ಜಾಮೀನು ಮಂಜೂರಾಗಿದ್ದರೂ ಜೈಲು ಬಿಟ್ಟಲು ಹೋಗುತ್ತಿಲ್ಲ ಎಂದು ತಿಳಿದುಬಂದಿದೆ.

ಇದಕ್ಕೆಲ್ಲ ಕಾರಣ ಯೋಗಿ ಆದಿತ್ಯನಾಥರು ಕೈಗೊಂಡ ನಿರ್ಧಾರವೇ ಆಗಿದ್ದು, 2017ರ ಮಾರ್ಚ್ 20ರಿಂದ ಇದುವರೆಗೆ ಉತ್ತರ ಪ್ರದೇಶದಲ್ಲಿ 1240 ಎನ್ ಕೌಂಟರ್ ನಡೆದಿವೆ. ಅದರಲ್ಲಿ 40ಕ್ಕೂ ಅಧಿಕ ಕ್ರಿಮಿನಲ್ ಗಳು ಮೃತಪಟ್ಟಿದ್ದು, 300ಕ್ಕೂ ಹೆಚ್ಚು ರೌಡಿಗಳು ಗಾಯಗೊಂಡಿದ್ದಾರೆ.

ಅಲ್ಲದೆ, ಶರಣಾಗಲು ಒಪ್ಪದಿದ್ದರೆ ಎನ್ ಕೌಂಟರ್ ಮಾಡಿ ಎಂದು ಯೋಗಿ ಆದಿತ್ಯನಾಥರು ಆದೇಶಿಸಿರುವುದರಿಂದ ಜೀವ ಉಳಿದರೆ ಸಾಕು ಎನ್ನುತ್ತಿರುವ ರೌಡಿಗಳು, ಜೈಲಿಗೆ ಬಂದು ಶರಣಾಗುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಎಂದರೆ ಇದೇ ಅಲ್ಲವೆ? ನಮ್ಮ ಸಿದ್ದರಾಮಯ್ಯನವರು ಇಂತಹ ಕ್ರಮ ಕೈಗೊಳ್ಳಬೇಕು.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search