• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತಾಂತರ, ಲವ್ ಜಿಹಾದ್ ಗೆ ಬಲಿಯಾದ ಯುವತಿಯರ ಹೆತ್ತವರಿಂದಲೇ ಜಾಗೃತಿ ಸಂಘಟನೆ

TNN Correspondent Posted On February 19, 2018
0


0
Shares
  • Share On Facebook
  • Tweet It

ಕಾಸರಗೋಡು: ಕೇರಳದಲ್ಲಿ ಮತಾಂಧರ ಅಟ್ಟಹಾಸಕ್ಕೆ ಬಲಿಯಾಗಿ ಮತಾಂತರವಾಗಿರುವ ಯುವತಿಯರ ಹೆತ್ತವರು ನಿತ್ಯ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಹೆತ್ತ ಮಕ್ಕಳು ಪಾಪಕೂಪಕ್ಕೆ ಬಲಿಯಾಗುವುದನ್ನು ತಡೆಯಲು ಇದೀಗ ಅದೇ ಹೆತ್ತವರು ಮುಖ್ಯವಾಹಿನಿಗೆ ಬಂದಿದ್ದು, ಯುವತಿಯರಲ್ಲಿ ಮತಾಂತರ, ಲವ್ ಜಿಹಾದ್ ಬಗ್ಗೆ ಜಾಗೃತಿ ಮೂಡಿಸಲು ಸ್ವಂತ ಸಂಘಟನೆಯೊಂದನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಮತಾಂತರ, ಲವ್ ಜಿಹಾದ್ ಗೆ ಬಲಿಯಾಗುವುದನ್ನು ತಡೆಯುವ ಗುರಿ ಹೊಂದಿದ್ದಾರೆ.

ಈ ಕುರಿತು ಕೇರಳದ ಎರ್ನಾಕುಲಂ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ನಾವು ಹೆತ್ತ ಮಕ್ಕಳು ವಿಶೇಷವಾಗಿ ಯುವತಿಯರು ಮತಾಂಧರ ಪಾಶಕ್ಕೆ ಸಿಲುಕಿ ಭಯೋತ್ಪಾದಕರಾಗುತ್ತಿದ್ದಾರೆ. ಯುವತಿಯರನ್ನು ಲವ್ ಜಿಹಾದ್ ನೆಪದಲ್ಲಿ ಮೋಹ ಪಾಶಕ್ಕೆ ಸಿಲುಕಿಸಿ, ವಿದೇಶಗಳಿಗೆ ಕಳ್ಳ ಸಾಗಣೆ ಮಾಡುತ್ತಿದ್ದಾರೆ. ಅಲ್ಲದೇ ಯುವತಿಯರನ್ನು ಸಾಗಣೆ ಮಾಡಿ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಇದೆಲ್ಲವನ್ನು ತಡೆಯುವಲ್ಲಿ ಸರ್ಕಾರ ಪೊಲೀಸರು ವಿಫಲರಾಗಿದ್ದಾರೆ. ಆದ್ದರಿಂದ ನಾವೇ ನಮ್ಮ ಮಕ್ಕಳ ರಕ್ಷಣೆಗಾಗಿ, ಜಾಗೃತಿ ಮೂಡಿಸಲು ಸಂಘಟನೆ ಆರಂಭಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಹಲವು ವರ್ಷ ಯುವತಿಯರನ್ನು ಸಾಕಿ ಸಲಹಿದ ನಂತರ ಮತಾಂತರದ ಕೂಪಕ್ಕೆ ಬಲಿಯಾಗಿ ಮಕ್ಕಳನ್ನು ಕಳೆದುಕೊಂಡ ಸುಮಾರು 30 ಪಾಲಕರು ಒಗ್ಗೂಡಿ ಸಂಘಟನೆ ಆರಂಭಿಸಿದ್ದಾರೆ. ಈ ಮೂಲಕ ಮತಾಂತರ, ಲವ್ ಜಿಹಾದ್ ಕೂಪಕ್ಕೆ ಬಲಿಯಾಗುತ್ತಿರುವುದನ್ನು ತಡೆಯಲು ಮುಂದಾಗಿದ್ದಾರೆ.

ಮತಾಂತರದ ದುಷ್ಪರಿಣಾಮಗಳನ್ನು ಎದುರಿಸಿರುವ ಪಾಲಕರೇ ಸಂಘಟನೆ ಮಾಡಲು ಹೊರಟಿರುವುದು ತೀವ್ರ ಶ್ಲಾಘನೆಗೆ ಕಾರಣವಾಗಿದೆ. ಅಲ್ಲದೇ ಕೇರಳದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಭಯೋತ್ಪಾದಕ ಪ್ರೇರಿತ, ಮತಾಂಧ ಚಟುವಟಿಕೆಗಳ ಬಗ್ಗೆ ಜಾಗೃತಿಯೂ ಈ ಸಂಘಟನೆಯಿಂದ ನಡೆಯಲಿರುವುದು ವಿಶೇಷ.

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search