• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತಾಂತರ, ಲವ್ ಜಿಹಾದ್ ಗೆ ಬಲಿಯಾದ ಯುವತಿಯರ ಹೆತ್ತವರಿಂದಲೇ ಜಾಗೃತಿ ಸಂಘಟನೆ

TNN Correspondent Posted On February 19, 2018
0


0
Shares
  • Share On Facebook
  • Tweet It

ಕಾಸರಗೋಡು: ಕೇರಳದಲ್ಲಿ ಮತಾಂಧರ ಅಟ್ಟಹಾಸಕ್ಕೆ ಬಲಿಯಾಗಿ ಮತಾಂತರವಾಗಿರುವ ಯುವತಿಯರ ಹೆತ್ತವರು ನಿತ್ಯ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಹೆತ್ತ ಮಕ್ಕಳು ಪಾಪಕೂಪಕ್ಕೆ ಬಲಿಯಾಗುವುದನ್ನು ತಡೆಯಲು ಇದೀಗ ಅದೇ ಹೆತ್ತವರು ಮುಖ್ಯವಾಹಿನಿಗೆ ಬಂದಿದ್ದು, ಯುವತಿಯರಲ್ಲಿ ಮತಾಂತರ, ಲವ್ ಜಿಹಾದ್ ಬಗ್ಗೆ ಜಾಗೃತಿ ಮೂಡಿಸಲು ಸ್ವಂತ ಸಂಘಟನೆಯೊಂದನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಮತಾಂತರ, ಲವ್ ಜಿಹಾದ್ ಗೆ ಬಲಿಯಾಗುವುದನ್ನು ತಡೆಯುವ ಗುರಿ ಹೊಂದಿದ್ದಾರೆ.

ಈ ಕುರಿತು ಕೇರಳದ ಎರ್ನಾಕುಲಂ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ನಾವು ಹೆತ್ತ ಮಕ್ಕಳು ವಿಶೇಷವಾಗಿ ಯುವತಿಯರು ಮತಾಂಧರ ಪಾಶಕ್ಕೆ ಸಿಲುಕಿ ಭಯೋತ್ಪಾದಕರಾಗುತ್ತಿದ್ದಾರೆ. ಯುವತಿಯರನ್ನು ಲವ್ ಜಿಹಾದ್ ನೆಪದಲ್ಲಿ ಮೋಹ ಪಾಶಕ್ಕೆ ಸಿಲುಕಿಸಿ, ವಿದೇಶಗಳಿಗೆ ಕಳ್ಳ ಸಾಗಣೆ ಮಾಡುತ್ತಿದ್ದಾರೆ. ಅಲ್ಲದೇ ಯುವತಿಯರನ್ನು ಸಾಗಣೆ ಮಾಡಿ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಇದೆಲ್ಲವನ್ನು ತಡೆಯುವಲ್ಲಿ ಸರ್ಕಾರ ಪೊಲೀಸರು ವಿಫಲರಾಗಿದ್ದಾರೆ. ಆದ್ದರಿಂದ ನಾವೇ ನಮ್ಮ ಮಕ್ಕಳ ರಕ್ಷಣೆಗಾಗಿ, ಜಾಗೃತಿ ಮೂಡಿಸಲು ಸಂಘಟನೆ ಆರಂಭಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಹಲವು ವರ್ಷ ಯುವತಿಯರನ್ನು ಸಾಕಿ ಸಲಹಿದ ನಂತರ ಮತಾಂತರದ ಕೂಪಕ್ಕೆ ಬಲಿಯಾಗಿ ಮಕ್ಕಳನ್ನು ಕಳೆದುಕೊಂಡ ಸುಮಾರು 30 ಪಾಲಕರು ಒಗ್ಗೂಡಿ ಸಂಘಟನೆ ಆರಂಭಿಸಿದ್ದಾರೆ. ಈ ಮೂಲಕ ಮತಾಂತರ, ಲವ್ ಜಿಹಾದ್ ಕೂಪಕ್ಕೆ ಬಲಿಯಾಗುತ್ತಿರುವುದನ್ನು ತಡೆಯಲು ಮುಂದಾಗಿದ್ದಾರೆ.

ಮತಾಂತರದ ದುಷ್ಪರಿಣಾಮಗಳನ್ನು ಎದುರಿಸಿರುವ ಪಾಲಕರೇ ಸಂಘಟನೆ ಮಾಡಲು ಹೊರಟಿರುವುದು ತೀವ್ರ ಶ್ಲಾಘನೆಗೆ ಕಾರಣವಾಗಿದೆ. ಅಲ್ಲದೇ ಕೇರಳದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಭಯೋತ್ಪಾದಕ ಪ್ರೇರಿತ, ಮತಾಂಧ ಚಟುವಟಿಕೆಗಳ ಬಗ್ಗೆ ಜಾಗೃತಿಯೂ ಈ ಸಂಘಟನೆಯಿಂದ ನಡೆಯಲಿರುವುದು ವಿಶೇಷ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search