• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತಾಂತರ, ಲವ್ ಜಿಹಾದ್ ಗೆ ಬಲಿಯಾದ ಯುವತಿಯರ ಹೆತ್ತವರಿಂದಲೇ ಜಾಗೃತಿ ಸಂಘಟನೆ

TNN Correspondent Posted On February 19, 2018
0


0
Shares
  • Share On Facebook
  • Tweet It

ಕಾಸರಗೋಡು: ಕೇರಳದಲ್ಲಿ ಮತಾಂಧರ ಅಟ್ಟಹಾಸಕ್ಕೆ ಬಲಿಯಾಗಿ ಮತಾಂತರವಾಗಿರುವ ಯುವತಿಯರ ಹೆತ್ತವರು ನಿತ್ಯ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಹೆತ್ತ ಮಕ್ಕಳು ಪಾಪಕೂಪಕ್ಕೆ ಬಲಿಯಾಗುವುದನ್ನು ತಡೆಯಲು ಇದೀಗ ಅದೇ ಹೆತ್ತವರು ಮುಖ್ಯವಾಹಿನಿಗೆ ಬಂದಿದ್ದು, ಯುವತಿಯರಲ್ಲಿ ಮತಾಂತರ, ಲವ್ ಜಿಹಾದ್ ಬಗ್ಗೆ ಜಾಗೃತಿ ಮೂಡಿಸಲು ಸ್ವಂತ ಸಂಘಟನೆಯೊಂದನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಮತಾಂತರ, ಲವ್ ಜಿಹಾದ್ ಗೆ ಬಲಿಯಾಗುವುದನ್ನು ತಡೆಯುವ ಗುರಿ ಹೊಂದಿದ್ದಾರೆ.

ಈ ಕುರಿತು ಕೇರಳದ ಎರ್ನಾಕುಲಂ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ನಾವು ಹೆತ್ತ ಮಕ್ಕಳು ವಿಶೇಷವಾಗಿ ಯುವತಿಯರು ಮತಾಂಧರ ಪಾಶಕ್ಕೆ ಸಿಲುಕಿ ಭಯೋತ್ಪಾದಕರಾಗುತ್ತಿದ್ದಾರೆ. ಯುವತಿಯರನ್ನು ಲವ್ ಜಿಹಾದ್ ನೆಪದಲ್ಲಿ ಮೋಹ ಪಾಶಕ್ಕೆ ಸಿಲುಕಿಸಿ, ವಿದೇಶಗಳಿಗೆ ಕಳ್ಳ ಸಾಗಣೆ ಮಾಡುತ್ತಿದ್ದಾರೆ. ಅಲ್ಲದೇ ಯುವತಿಯರನ್ನು ಸಾಗಣೆ ಮಾಡಿ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಇದೆಲ್ಲವನ್ನು ತಡೆಯುವಲ್ಲಿ ಸರ್ಕಾರ ಪೊಲೀಸರು ವಿಫಲರಾಗಿದ್ದಾರೆ. ಆದ್ದರಿಂದ ನಾವೇ ನಮ್ಮ ಮಕ್ಕಳ ರಕ್ಷಣೆಗಾಗಿ, ಜಾಗೃತಿ ಮೂಡಿಸಲು ಸಂಘಟನೆ ಆರಂಭಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಹಲವು ವರ್ಷ ಯುವತಿಯರನ್ನು ಸಾಕಿ ಸಲಹಿದ ನಂತರ ಮತಾಂತರದ ಕೂಪಕ್ಕೆ ಬಲಿಯಾಗಿ ಮಕ್ಕಳನ್ನು ಕಳೆದುಕೊಂಡ ಸುಮಾರು 30 ಪಾಲಕರು ಒಗ್ಗೂಡಿ ಸಂಘಟನೆ ಆರಂಭಿಸಿದ್ದಾರೆ. ಈ ಮೂಲಕ ಮತಾಂತರ, ಲವ್ ಜಿಹಾದ್ ಕೂಪಕ್ಕೆ ಬಲಿಯಾಗುತ್ತಿರುವುದನ್ನು ತಡೆಯಲು ಮುಂದಾಗಿದ್ದಾರೆ.

ಮತಾಂತರದ ದುಷ್ಪರಿಣಾಮಗಳನ್ನು ಎದುರಿಸಿರುವ ಪಾಲಕರೇ ಸಂಘಟನೆ ಮಾಡಲು ಹೊರಟಿರುವುದು ತೀವ್ರ ಶ್ಲಾಘನೆಗೆ ಕಾರಣವಾಗಿದೆ. ಅಲ್ಲದೇ ಕೇರಳದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಭಯೋತ್ಪಾದಕ ಪ್ರೇರಿತ, ಮತಾಂಧ ಚಟುವಟಿಕೆಗಳ ಬಗ್ಗೆ ಜಾಗೃತಿಯೂ ಈ ಸಂಘಟನೆಯಿಂದ ನಡೆಯಲಿರುವುದು ವಿಶೇಷ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search