• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತಾಂತರ, ಲವ್ ಜಿಹಾದ್ ಗೆ ಬಲಿಯಾದ ಯುವತಿಯರ ಹೆತ್ತವರಿಂದಲೇ ಜಾಗೃತಿ ಸಂಘಟನೆ

TNN Correspondent Posted On February 19, 2018
0


0
Shares
  • Share On Facebook
  • Tweet It

ಕಾಸರಗೋಡು: ಕೇರಳದಲ್ಲಿ ಮತಾಂಧರ ಅಟ್ಟಹಾಸಕ್ಕೆ ಬಲಿಯಾಗಿ ಮತಾಂತರವಾಗಿರುವ ಯುವತಿಯರ ಹೆತ್ತವರು ನಿತ್ಯ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಹೆತ್ತ ಮಕ್ಕಳು ಪಾಪಕೂಪಕ್ಕೆ ಬಲಿಯಾಗುವುದನ್ನು ತಡೆಯಲು ಇದೀಗ ಅದೇ ಹೆತ್ತವರು ಮುಖ್ಯವಾಹಿನಿಗೆ ಬಂದಿದ್ದು, ಯುವತಿಯರಲ್ಲಿ ಮತಾಂತರ, ಲವ್ ಜಿಹಾದ್ ಬಗ್ಗೆ ಜಾಗೃತಿ ಮೂಡಿಸಲು ಸ್ವಂತ ಸಂಘಟನೆಯೊಂದನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಮತಾಂತರ, ಲವ್ ಜಿಹಾದ್ ಗೆ ಬಲಿಯಾಗುವುದನ್ನು ತಡೆಯುವ ಗುರಿ ಹೊಂದಿದ್ದಾರೆ.

ಈ ಕುರಿತು ಕೇರಳದ ಎರ್ನಾಕುಲಂ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ನಾವು ಹೆತ್ತ ಮಕ್ಕಳು ವಿಶೇಷವಾಗಿ ಯುವತಿಯರು ಮತಾಂಧರ ಪಾಶಕ್ಕೆ ಸಿಲುಕಿ ಭಯೋತ್ಪಾದಕರಾಗುತ್ತಿದ್ದಾರೆ. ಯುವತಿಯರನ್ನು ಲವ್ ಜಿಹಾದ್ ನೆಪದಲ್ಲಿ ಮೋಹ ಪಾಶಕ್ಕೆ ಸಿಲುಕಿಸಿ, ವಿದೇಶಗಳಿಗೆ ಕಳ್ಳ ಸಾಗಣೆ ಮಾಡುತ್ತಿದ್ದಾರೆ. ಅಲ್ಲದೇ ಯುವತಿಯರನ್ನು ಸಾಗಣೆ ಮಾಡಿ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಇದೆಲ್ಲವನ್ನು ತಡೆಯುವಲ್ಲಿ ಸರ್ಕಾರ ಪೊಲೀಸರು ವಿಫಲರಾಗಿದ್ದಾರೆ. ಆದ್ದರಿಂದ ನಾವೇ ನಮ್ಮ ಮಕ್ಕಳ ರಕ್ಷಣೆಗಾಗಿ, ಜಾಗೃತಿ ಮೂಡಿಸಲು ಸಂಘಟನೆ ಆರಂಭಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಹಲವು ವರ್ಷ ಯುವತಿಯರನ್ನು ಸಾಕಿ ಸಲಹಿದ ನಂತರ ಮತಾಂತರದ ಕೂಪಕ್ಕೆ ಬಲಿಯಾಗಿ ಮಕ್ಕಳನ್ನು ಕಳೆದುಕೊಂಡ ಸುಮಾರು 30 ಪಾಲಕರು ಒಗ್ಗೂಡಿ ಸಂಘಟನೆ ಆರಂಭಿಸಿದ್ದಾರೆ. ಈ ಮೂಲಕ ಮತಾಂತರ, ಲವ್ ಜಿಹಾದ್ ಕೂಪಕ್ಕೆ ಬಲಿಯಾಗುತ್ತಿರುವುದನ್ನು ತಡೆಯಲು ಮುಂದಾಗಿದ್ದಾರೆ.

ಮತಾಂತರದ ದುಷ್ಪರಿಣಾಮಗಳನ್ನು ಎದುರಿಸಿರುವ ಪಾಲಕರೇ ಸಂಘಟನೆ ಮಾಡಲು ಹೊರಟಿರುವುದು ತೀವ್ರ ಶ್ಲಾಘನೆಗೆ ಕಾರಣವಾಗಿದೆ. ಅಲ್ಲದೇ ಕೇರಳದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಭಯೋತ್ಪಾದಕ ಪ್ರೇರಿತ, ಮತಾಂಧ ಚಟುವಟಿಕೆಗಳ ಬಗ್ಗೆ ಜಾಗೃತಿಯೂ ಈ ಸಂಘಟನೆಯಿಂದ ನಡೆಯಲಿರುವುದು ವಿಶೇಷ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search