• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತಾಂತರ, ಲವ್ ಜಿಹಾದ್ ಗೆ ಬಲಿಯಾದ ಯುವತಿಯರ ಹೆತ್ತವರಿಂದಲೇ ಜಾಗೃತಿ ಸಂಘಟನೆ

TNN Correspondent Posted On February 19, 2018
0


0
Shares
  • Share On Facebook
  • Tweet It

ಕಾಸರಗೋಡು: ಕೇರಳದಲ್ಲಿ ಮತಾಂಧರ ಅಟ್ಟಹಾಸಕ್ಕೆ ಬಲಿಯಾಗಿ ಮತಾಂತರವಾಗಿರುವ ಯುವತಿಯರ ಹೆತ್ತವರು ನಿತ್ಯ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಹೆತ್ತ ಮಕ್ಕಳು ಪಾಪಕೂಪಕ್ಕೆ ಬಲಿಯಾಗುವುದನ್ನು ತಡೆಯಲು ಇದೀಗ ಅದೇ ಹೆತ್ತವರು ಮುಖ್ಯವಾಹಿನಿಗೆ ಬಂದಿದ್ದು, ಯುವತಿಯರಲ್ಲಿ ಮತಾಂತರ, ಲವ್ ಜಿಹಾದ್ ಬಗ್ಗೆ ಜಾಗೃತಿ ಮೂಡಿಸಲು ಸ್ವಂತ ಸಂಘಟನೆಯೊಂದನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಮತಾಂತರ, ಲವ್ ಜಿಹಾದ್ ಗೆ ಬಲಿಯಾಗುವುದನ್ನು ತಡೆಯುವ ಗುರಿ ಹೊಂದಿದ್ದಾರೆ.

ಈ ಕುರಿತು ಕೇರಳದ ಎರ್ನಾಕುಲಂ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ನಾವು ಹೆತ್ತ ಮಕ್ಕಳು ವಿಶೇಷವಾಗಿ ಯುವತಿಯರು ಮತಾಂಧರ ಪಾಶಕ್ಕೆ ಸಿಲುಕಿ ಭಯೋತ್ಪಾದಕರಾಗುತ್ತಿದ್ದಾರೆ. ಯುವತಿಯರನ್ನು ಲವ್ ಜಿಹಾದ್ ನೆಪದಲ್ಲಿ ಮೋಹ ಪಾಶಕ್ಕೆ ಸಿಲುಕಿಸಿ, ವಿದೇಶಗಳಿಗೆ ಕಳ್ಳ ಸಾಗಣೆ ಮಾಡುತ್ತಿದ್ದಾರೆ. ಅಲ್ಲದೇ ಯುವತಿಯರನ್ನು ಸಾಗಣೆ ಮಾಡಿ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಇದೆಲ್ಲವನ್ನು ತಡೆಯುವಲ್ಲಿ ಸರ್ಕಾರ ಪೊಲೀಸರು ವಿಫಲರಾಗಿದ್ದಾರೆ. ಆದ್ದರಿಂದ ನಾವೇ ನಮ್ಮ ಮಕ್ಕಳ ರಕ್ಷಣೆಗಾಗಿ, ಜಾಗೃತಿ ಮೂಡಿಸಲು ಸಂಘಟನೆ ಆರಂಭಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಹಲವು ವರ್ಷ ಯುವತಿಯರನ್ನು ಸಾಕಿ ಸಲಹಿದ ನಂತರ ಮತಾಂತರದ ಕೂಪಕ್ಕೆ ಬಲಿಯಾಗಿ ಮಕ್ಕಳನ್ನು ಕಳೆದುಕೊಂಡ ಸುಮಾರು 30 ಪಾಲಕರು ಒಗ್ಗೂಡಿ ಸಂಘಟನೆ ಆರಂಭಿಸಿದ್ದಾರೆ. ಈ ಮೂಲಕ ಮತಾಂತರ, ಲವ್ ಜಿಹಾದ್ ಕೂಪಕ್ಕೆ ಬಲಿಯಾಗುತ್ತಿರುವುದನ್ನು ತಡೆಯಲು ಮುಂದಾಗಿದ್ದಾರೆ.

ಮತಾಂತರದ ದುಷ್ಪರಿಣಾಮಗಳನ್ನು ಎದುರಿಸಿರುವ ಪಾಲಕರೇ ಸಂಘಟನೆ ಮಾಡಲು ಹೊರಟಿರುವುದು ತೀವ್ರ ಶ್ಲಾಘನೆಗೆ ಕಾರಣವಾಗಿದೆ. ಅಲ್ಲದೇ ಕೇರಳದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಭಯೋತ್ಪಾದಕ ಪ್ರೇರಿತ, ಮತಾಂಧ ಚಟುವಟಿಕೆಗಳ ಬಗ್ಗೆ ಜಾಗೃತಿಯೂ ಈ ಸಂಘಟನೆಯಿಂದ ನಡೆಯಲಿರುವುದು ವಿಶೇಷ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search