• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾವೋವಾದಿಗಳಿಗೆ ಸೇನೆ ದಿಟ್ಟ ಉತ್ತರ, 20 ಕೆಂಪು ಉಗ್ರರ ಸಂಹಾರ

TNN Correspondent Posted On February 19, 2018
0


0
Shares
  • Share On Facebook
  • Tweet It

ರಾಯಪುರ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಛತ್ತೀಸ್ ಗಡದಲ್ಲಿ ನಕ್ಸಲರ ವಿರುದ್ಧ ಕೈಗೊಂಡ ಕ್ರಮದಿಂದ ಕೆಂಪು ಉಗ್ರರ ಉಪಟಳ ಕಡಿಮೆಯಾಯಿತು ಎನ್ನುವ ಮಾತು ಕೇಳಿಬರುತ್ತಿವ ಬೆನ್ನಲ್ಲೇ, ಮಾವೋವಾದಿಗಳು ಸೇನಾನೆಲೆಗಳ ಮೇಲೆ ದಾಳಿ ಮಾಡಿ ಇಬ್ಬರು ಯೋಧರನ್ನು ಹತ್ಯೆ ಮಾಡಿದ್ದಾರೆ.

ಆದರೆ ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಸಹ ದಿಟ್ಟ ಪ್ರತಿದಾಳಿ ಮಾಡಿದ್ದು, ಬರೋಬ್ಬರಿ ಇಪ್ಪತ್ತು ನಕ್ಸಲರನ್ನು ಹೊಡೆದುರುಳಿಸಿದ್ದಾರೆ.

ಛತ್ತೀಸ್ ಗಡದ ಸುಕ್ಮಾ ಎಂಬಲ್ಲಿ ನಕ್ಸಲರು ಭದ್ರತಾ ಸಿಬ್ಬಂದಿ ಮೇಲೆ ಮಾಡಿದ ದಾಳಿಯಲ್ಲಿ ಇಬ್ಬರು ಯೋಧರು ಹಾಗೂ ಒಬ್ಬ ನಾಗರಿಕ ಮೃತಪಟ್ಟಿದ್ದರು. ಇದರಿಂದ ಕೆರಳಿದ ಸೇನೆ ಸತತ ಐದು ಗಂಟೆ ಕಾರ್ಯಾಚರಣೆ ನಡೆಸಿ 20 ಕೆಂಪು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಪರಿಸ್ಥಿತಿ ತಿಳಿಯಾಗಿದೆ ಎಂದು ಭದ್ರತಾ ಸಿಬ್ಬಂದಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಆಗ ನಕ್ಸಲರು ಭಾರಿ ಗುಂಡಿನ ದಾಳಿ ಮಾಡಿದ್ದು, ಇದಕ್ಕೆ ಪ್ರತಿಯಾಗಿ ನಮ್ಮ ಸಿಬ್ಬಂದಿ ಸಹ ಗುಂಡಿನ ಸುರಿಮಳೆಗೈದರು. ದಾಳಿಯಲ್ಲಿ 20 ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ನಕ್ಸಲ್ ನಿಗ್ರಹ ಕಾರ್ಯಾಚರಣೆ ಪಡೆಯ ವಿಶೇಷ ಡಿಜಿ ಡಿ.ಎಂ.ಅಸ್ವಥಿ ಮಾಹಿತಿ ನೀಡಿದ್ದಾರೆ.

ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ ಮತ್ತು ಜಂಟಿ ವಿಶೇಷ ಕಾರ್ಯಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಇದುವರೆಗೂ ಹತ್ಯೆ ಮಾಡಲಾಗಿರುವ ನಕ್ಸಲರ ದೇಹ ಪತ್ತೆಯಾಗಿಲ್ಲ, ಹುಡುಕಾಟ ನಡೆಯುತ್ತಿದೆ ಎಂದು ವಿವರಿಸಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಸುಕ್ಮಾದಲ್ಲಿ ನಕ್ಸಲರು ದಾಳಿ ಮಾಡಿರುವ ಹಿನ್ನೆಲೆ ಇರುವುದರಿಂದ ಭದ್ರತಾ ಸಿಬ್ಬಂದಿ ಹಗಲು-ರಾತ್ರಿ ನಕ್ಸಲರ ಬೇಟೆಗಾಗಿ ಹಾತೊರೆಯುತ್ತದೆ. ಅದಕ್ಕಾಗಿ ಅಪಾರ ಸಿಬ್ಬಂದಿಯನ್ನು ಸಹ ನಿಯೋಜನೆ ಮಾಡಲಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search