• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾವೋವಾದಿಗಳಿಗೆ ಸೇನೆ ದಿಟ್ಟ ಉತ್ತರ, 20 ಕೆಂಪು ಉಗ್ರರ ಸಂಹಾರ

TNN Correspondent Posted On February 19, 2018
0


0
Shares
  • Share On Facebook
  • Tweet It

ರಾಯಪುರ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಛತ್ತೀಸ್ ಗಡದಲ್ಲಿ ನಕ್ಸಲರ ವಿರುದ್ಧ ಕೈಗೊಂಡ ಕ್ರಮದಿಂದ ಕೆಂಪು ಉಗ್ರರ ಉಪಟಳ ಕಡಿಮೆಯಾಯಿತು ಎನ್ನುವ ಮಾತು ಕೇಳಿಬರುತ್ತಿವ ಬೆನ್ನಲ್ಲೇ, ಮಾವೋವಾದಿಗಳು ಸೇನಾನೆಲೆಗಳ ಮೇಲೆ ದಾಳಿ ಮಾಡಿ ಇಬ್ಬರು ಯೋಧರನ್ನು ಹತ್ಯೆ ಮಾಡಿದ್ದಾರೆ.

ಆದರೆ ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಸಹ ದಿಟ್ಟ ಪ್ರತಿದಾಳಿ ಮಾಡಿದ್ದು, ಬರೋಬ್ಬರಿ ಇಪ್ಪತ್ತು ನಕ್ಸಲರನ್ನು ಹೊಡೆದುರುಳಿಸಿದ್ದಾರೆ.

ಛತ್ತೀಸ್ ಗಡದ ಸುಕ್ಮಾ ಎಂಬಲ್ಲಿ ನಕ್ಸಲರು ಭದ್ರತಾ ಸಿಬ್ಬಂದಿ ಮೇಲೆ ಮಾಡಿದ ದಾಳಿಯಲ್ಲಿ ಇಬ್ಬರು ಯೋಧರು ಹಾಗೂ ಒಬ್ಬ ನಾಗರಿಕ ಮೃತಪಟ್ಟಿದ್ದರು. ಇದರಿಂದ ಕೆರಳಿದ ಸೇನೆ ಸತತ ಐದು ಗಂಟೆ ಕಾರ್ಯಾಚರಣೆ ನಡೆಸಿ 20 ಕೆಂಪು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಪರಿಸ್ಥಿತಿ ತಿಳಿಯಾಗಿದೆ ಎಂದು ಭದ್ರತಾ ಸಿಬ್ಬಂದಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಆಗ ನಕ್ಸಲರು ಭಾರಿ ಗುಂಡಿನ ದಾಳಿ ಮಾಡಿದ್ದು, ಇದಕ್ಕೆ ಪ್ರತಿಯಾಗಿ ನಮ್ಮ ಸಿಬ್ಬಂದಿ ಸಹ ಗುಂಡಿನ ಸುರಿಮಳೆಗೈದರು. ದಾಳಿಯಲ್ಲಿ 20 ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ನಕ್ಸಲ್ ನಿಗ್ರಹ ಕಾರ್ಯಾಚರಣೆ ಪಡೆಯ ವಿಶೇಷ ಡಿಜಿ ಡಿ.ಎಂ.ಅಸ್ವಥಿ ಮಾಹಿತಿ ನೀಡಿದ್ದಾರೆ.

ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ ಮತ್ತು ಜಂಟಿ ವಿಶೇಷ ಕಾರ್ಯಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಇದುವರೆಗೂ ಹತ್ಯೆ ಮಾಡಲಾಗಿರುವ ನಕ್ಸಲರ ದೇಹ ಪತ್ತೆಯಾಗಿಲ್ಲ, ಹುಡುಕಾಟ ನಡೆಯುತ್ತಿದೆ ಎಂದು ವಿವರಿಸಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಸುಕ್ಮಾದಲ್ಲಿ ನಕ್ಸಲರು ದಾಳಿ ಮಾಡಿರುವ ಹಿನ್ನೆಲೆ ಇರುವುದರಿಂದ ಭದ್ರತಾ ಸಿಬ್ಬಂದಿ ಹಗಲು-ರಾತ್ರಿ ನಕ್ಸಲರ ಬೇಟೆಗಾಗಿ ಹಾತೊರೆಯುತ್ತದೆ. ಅದಕ್ಕಾಗಿ ಅಪಾರ ಸಿಬ್ಬಂದಿಯನ್ನು ಸಹ ನಿಯೋಜನೆ ಮಾಡಲಾಗಿದೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search