• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾವೋವಾದಿಗಳಿಗೆ ಸೇನೆ ದಿಟ್ಟ ಉತ್ತರ, 20 ಕೆಂಪು ಉಗ್ರರ ಸಂಹಾರ

TNN Correspondent Posted On February 19, 2018
0


0
Shares
  • Share On Facebook
  • Tweet It

ರಾಯಪುರ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಛತ್ತೀಸ್ ಗಡದಲ್ಲಿ ನಕ್ಸಲರ ವಿರುದ್ಧ ಕೈಗೊಂಡ ಕ್ರಮದಿಂದ ಕೆಂಪು ಉಗ್ರರ ಉಪಟಳ ಕಡಿಮೆಯಾಯಿತು ಎನ್ನುವ ಮಾತು ಕೇಳಿಬರುತ್ತಿವ ಬೆನ್ನಲ್ಲೇ, ಮಾವೋವಾದಿಗಳು ಸೇನಾನೆಲೆಗಳ ಮೇಲೆ ದಾಳಿ ಮಾಡಿ ಇಬ್ಬರು ಯೋಧರನ್ನು ಹತ್ಯೆ ಮಾಡಿದ್ದಾರೆ.

ಆದರೆ ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಸಹ ದಿಟ್ಟ ಪ್ರತಿದಾಳಿ ಮಾಡಿದ್ದು, ಬರೋಬ್ಬರಿ ಇಪ್ಪತ್ತು ನಕ್ಸಲರನ್ನು ಹೊಡೆದುರುಳಿಸಿದ್ದಾರೆ.

ಛತ್ತೀಸ್ ಗಡದ ಸುಕ್ಮಾ ಎಂಬಲ್ಲಿ ನಕ್ಸಲರು ಭದ್ರತಾ ಸಿಬ್ಬಂದಿ ಮೇಲೆ ಮಾಡಿದ ದಾಳಿಯಲ್ಲಿ ಇಬ್ಬರು ಯೋಧರು ಹಾಗೂ ಒಬ್ಬ ನಾಗರಿಕ ಮೃತಪಟ್ಟಿದ್ದರು. ಇದರಿಂದ ಕೆರಳಿದ ಸೇನೆ ಸತತ ಐದು ಗಂಟೆ ಕಾರ್ಯಾಚರಣೆ ನಡೆಸಿ 20 ಕೆಂಪು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಪರಿಸ್ಥಿತಿ ತಿಳಿಯಾಗಿದೆ ಎಂದು ಭದ್ರತಾ ಸಿಬ್ಬಂದಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಆಗ ನಕ್ಸಲರು ಭಾರಿ ಗುಂಡಿನ ದಾಳಿ ಮಾಡಿದ್ದು, ಇದಕ್ಕೆ ಪ್ರತಿಯಾಗಿ ನಮ್ಮ ಸಿಬ್ಬಂದಿ ಸಹ ಗುಂಡಿನ ಸುರಿಮಳೆಗೈದರು. ದಾಳಿಯಲ್ಲಿ 20 ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ನಕ್ಸಲ್ ನಿಗ್ರಹ ಕಾರ್ಯಾಚರಣೆ ಪಡೆಯ ವಿಶೇಷ ಡಿಜಿ ಡಿ.ಎಂ.ಅಸ್ವಥಿ ಮಾಹಿತಿ ನೀಡಿದ್ದಾರೆ.

ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ ಮತ್ತು ಜಂಟಿ ವಿಶೇಷ ಕಾರ್ಯಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಇದುವರೆಗೂ ಹತ್ಯೆ ಮಾಡಲಾಗಿರುವ ನಕ್ಸಲರ ದೇಹ ಪತ್ತೆಯಾಗಿಲ್ಲ, ಹುಡುಕಾಟ ನಡೆಯುತ್ತಿದೆ ಎಂದು ವಿವರಿಸಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಸುಕ್ಮಾದಲ್ಲಿ ನಕ್ಸಲರು ದಾಳಿ ಮಾಡಿರುವ ಹಿನ್ನೆಲೆ ಇರುವುದರಿಂದ ಭದ್ರತಾ ಸಿಬ್ಬಂದಿ ಹಗಲು-ರಾತ್ರಿ ನಕ್ಸಲರ ಬೇಟೆಗಾಗಿ ಹಾತೊರೆಯುತ್ತದೆ. ಅದಕ್ಕಾಗಿ ಅಪಾರ ಸಿಬ್ಬಂದಿಯನ್ನು ಸಹ ನಿಯೋಜನೆ ಮಾಡಲಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search