• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಖಟರ್ ಮುಸ್ಲಿಂ ರಾಷ್ಟ್ರ ಸೌದಿಯಲ್ಲಿ ಮಹಿಳೆಯರಿಗೆ ಸ್ವತಂತ್ರ ಉದ್ದಿಮೆ ಆರಂಭಿಸಲು ಅವಕಾಶ

TNN Correspondent Posted On February 19, 2018


  • Share On Facebook
  • Tweet It

ರಿಯಾದ್: ಖಟರ್ ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾ ಕಾಲಕ್ಕೆ ತಕ್ಕಂತೆ ಬದಲಾವಣೆಗೆ ತೆರೆದುಕೊಳ್ಳುತ್ತಿದ್ದು, ಇದೀಗ ಮಹಿಳೆಯರಿಗೆ ಸಂಬಂಧಿಕರ ನೆರವು ಇಲ್ಲದೇ ಸ್ವಂತ ಉದ್ದಿಮೆ ಆರಂಭಿಸಲು ಅವಕಾಶ ನೀಡಿದೆ. ಈ ಮೂಲಕ ಮುಸ್ಲಿಂ ಧರ್ಮದಲ್ಲಿ ಮಹಿಳೆಯರಿಗೆ ವಿಧಿಸಲಾಗಿದ್ದ ಕಟ್ಟುಪಾಡುಗಳಿಗೆ ಕೊನೆ ಮೊಳೆ ಹೊಡೆಯಲು ಸೌದಿ ಅರೇಬಿಯಾ ಸರ್ಕಾರ ನಿರ್ಧರಿಸಿದೆ.

ಪುರುಷ ಪ್ರಧಾನ ರಾಷ್ಟ್ರದಲ್ಲಿ ಈ ಮಹತ್ವದ ನಿಯಮ ಜಾರಿಗೆ ತರುವ ಮೂಲಕ ಸೌದಿ ಅರೇಬಿಯಾ ಸರ್ಕಾರ ಹೊಸ ಇತಿಹಾಸ ಮೂಡಿಸಿದೆ. ಮಹಿಳೆಯರು ಇನ್ನು ಮುಂದೆ ಸ್ವಂತ ಉದ್ಯಮವನ್ನು ಪುರುಷರ ಸಹಕಾರವಿಲ್ಲದೇ ಆರಂಭಿಸಬಹುದು. ಅಲ್ಲದೇ ಆನ್ ಲೈನ್ ಮೂಲಕ ಸೇವೆ ಸಲ್ಲಿಸಬಹುದು ಎಂದು ಸೌದಿ ಸರ್ಕಾರದ ಉದ್ದಿಮೆ ಮತ್ತು ಹೂಡಿಕೆ ಇಲಾಖೆ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಈ ಮೊದಲು ಮಹಿಳೆಯರು ಉದ್ದಿಮೆ ನಡೆಸಲು ಪೋಷಕರನ್ನು ಹೊಂದಿರಬೇಕಿತ್ತು. ಪತಿ ಅಥವಾ ತಂದೆಯ ಅನುಮತಿ ಪಡೆಯಬೇಕಿತ್ತು. ಇದೀಗ ಆ ನಿಯಮಕ್ಕೆ ವಿರಾಮ ಹೇಳಲಾಗಿದ್ದು, ಸೌದಿ ಅರೇಬಿಯಾದ ಆದಾಯ ಹೆಚ್ಚಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಮಹಿಳೆಯರಿಗೆ ಉದ್ಯೋಗ ನೀಡುವುದರ ಜತೆಗೆ, ತೈಲೋಧ್ಯಮದಲ್ಲಿ ಬದಲಾವಣೆಗಳನ್ನು ತರಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಮೊದಲ ಬಾರಿಗೆ ಮಹಿಳಾ ಹೂಡಿಕೆದಾರರಿಗೆ ಅವಕಾಶ ನೀಡಲಾಗುತ್ತಿದೆ.

ಸೌದಿ ಅರೇಬಿಯಾದ ರಾಜ ಮಹಮ್ಮದ್ ಬಿನ್ ಸಲ್ಮಾನ್ ಈ ಕ್ರಾಂತಿಕಾರಿಕ ನಿಲುವುಗಳನ್ನು ಕೈಗೊಂಡಿದ್ದಾರೆ. ಇತ್ತೀಚೆಗೆ ಸೌದಿಯಲ್ಲಿ ಮಹಿಳೆಯರಿಗೆ ಡ್ರೈವಿಂಗ್ ಗೆ ಅನುಮತಿ ನೀಡಲಾಗಿತ್ತು. ಅಲ್ಲದೇ ಕ್ರೀಡೆಯಲ್ಲಿ ಯೋಗ ಅಳವಡಿಸಿಕೊಳ್ಳಲಾಗಿತ್ತು ಮತ್ತು ಬಹಿರಂಗವಾಗಿ ಫುಟ್ಬಾಲ್ ನೋಡಲು ಅವಕಾಶ ನೀಡಲಾಗಿತ್ತು. ಸೌದಿ ಅರೇಬಿಯಾ ಮೂಡ ನಿಯಮಗಳನ್ನು ತೊರೆದು ಇದೀಗ ಹೊಸ ಇತಿಹಾಸ ಸೃಷ್ಟಿಸಲು ಮುಂದಾಗಿದೆ. ಅಲ್ಲದೇ ಹೊಸ ಬದಲಾವಣೆಗೆ ತೆರೆದುಕೊಂಡು ಮಹಿಳೆಯರಿಗೆ ಸ್ವಾತಂತ್ರ್ಯ ನೀಡುತ್ತಿದೆ.

  • Share On Facebook
  • Tweet It


- Advertisement -


Trending Now
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
Leave A Reply

  • Recent Posts

    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
  • Popular Posts

    • 1
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 2
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 3
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 4
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 5
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search