• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡೋಕ್ಲಾಂ ಬಿಕ್ಕಟ್ಟು, ಭೂತಾನ್ ಗೆ ಭೇಟಿ ನೀಡಿ ಚೀನಾಗೆ ಶಾಕ್ ನೀಡಿದ ಭಾರತದ ಅಧಿಕಾರಿಗಳು

TNN Correspondent Posted On February 19, 2018
0


0
Shares
  • Share On Facebook
  • Tweet It

ದೆಹಲಿ: ಭಾರತ ಚೀನಾ ಮಧ್ಯೆ ತೀವ್ರ ಗಡಿ ವಿವಾದಕ್ಕೆ ಕಾರಣವಾಗಿರುವ ಡೋಕ್ಲಾಂ ಬಿಕ್ಕಟ್ಟು ಬಗೆ ಹರಿಸಲು ಭೂತಾನ್ ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜೀತ್ ದೋವಾಲ್ ಭೇಟಿ ನೀಡಿದ್ದು, ಭೂತಾನ್ ನ ಪ್ರಮುಖ ಅಧಿಕಾರಿಗಳೊಂದಿಗೆ ಡೋಕ್ಲಾಂ ಗಡಿ ಬಿಕ್ಕಟ್ಟು ಬಗೆಹರಿಸಿ, ಗಡಿಯಲ್ಲಿ ಶಾಂತಿ ನೆಲೆಸುವ ಕುರಿತು ಮಾತುಕತೆ ನಡೆಸಿದ್ದಾರೆ.

ಅಜಿತ್ ದೋವಲ್ ನೇತೃತ್ವದ ತಂಡದಲ್ಲಿ ರಾಷ್ಟ್ರೀಯ ಸೇನೆಯ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಭೂತಾನ್ ಗೆ ಭೇಟಿ ನೀಡಿದ್ದು, ಶಾಂತಿ ಮಾತುಕತೆ ನಡೆಸಿದ್ದಾರೆ. ಡೋಕ್ಲಾಂನಲ್ಲಿ ಭೂತಾನ್ ಪಾಲುದಾರಿಕೆ, ಬಿಕ್ಕಟ್ಟಿಗೆ ಮೂಲ ಕಾರಣ, ಚೀನಾ ಹಸ್ತಕ್ಷೇಪ ಸೇರಿ ನಾನಾ ತಂತ್ರಗಾರಿಕೆಗಳ ಬಗ್ಗೆ ಫೆ.6 ಮತ್ತು 7ರಂದು ಭೇಟಿ ನೀಡಿದ ವೇಳೆ ಮಾತುಕತೆ ನಡೆದಿದೆ.

ಭೂತಾನ್ ಮತ್ತು ಭಾರತ ಉಭಯ ರಾಷ್ಟ್ರಗಳು ಡೋಕ್ಲಾಂನಲ್ಲಿ ಚೀನಾ ಸೈನಿಕ ಕಾರ್ಯಚರಣೆ ಬಗ್ಗೆ ಎಚ್ಚರವಹಿಸಬೇಕು. ಉಭಯ ರಾಷ್ಟ್ರಗಳ ಮಧ್ಯೆ ಸೈನಿಕ ಸಹಕಾರ ಪಡೆಯಬೇಕು. ಡೋಕ್ಲಾಂನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗಿದೆ. ಇದು ಭಾರತ ಮತ್ತು ಭೂತಾನ್ ಗಳ ಮಧ್ಯೆ ಉತ್ತಮ ಸ್ನೇಹ ಬಾಂಧವ್ಯವನ್ನು ವೃದ್ಧಿಸಲಿದೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ಮೂಲಗಳು ತಿಳಿಸಿವೆ.

ಡೋಕ್ಲಾಂ ಕುರಿತ ಅಧಿಕಾರಿಗಳ ಪ್ರಥಮ ಭೇಟಿ

ಡೋಕ್ಲಾಂ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತ ಮತ್ತು ಭೂತಾನನ ಉನ್ನತ ಮಟ್ಟದ ಅಧಿಕಾರಿಗಳ ಭೇಟಿ ಇದೇ ಪ್ರಥಮವಾಗಿದೆ. ಈ ಮೊದಲು ಅಧಿಕಾರಿಗಳು ಭೇಟಿ ನೀಡಿದ್ದರು. ಆದರೆ ವಿಶೇಷವಾಗಿ ಡೋಕ್ಲಾಂ ವಿವಾದದ ಬಗ್ಗೆ ಮಾತನಾಡಲು ಇದೇ ಮೊದಲ ಬಾರಿಗೆ ಉನ್ನತ ಮಟ್ಟದ ಅಧಿಕಾರಿಗಳು ಡೋಕ್ಲಾಂಗೆ ಭೇಟಿ ನೀಡಿದ್ದಾರೆ. ಭೂತಾನ್ ಭಾರತದ ಆಡಳಿತಾತ್ಮಕ ಮತ್ತು ಸೈನಿಕ ಸಹಕಾರ ಬಯಸುತ್ತಿರುವ ಕುರಿತು ಮಾತುಕತೆ ನಡೆದಿವೆ.

 

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search