• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುಜರಾತ್ ಪುರಸಭೆಗಳಲ್ಲೂ ಕಾಂಗ್ರೆಸ್ಸಿಗಿಲ್ಲ ಸ್ಥಾನ, ಬಿಜೆಪಿಗೆ ಭರ್ಜರಿಗೆ ಗೆಲುವು

TNN Correspondent Posted On February 20, 2018
0


0
Shares
  • Share On Facebook
  • Tweet It

ಗಾಂಧಿನಗರ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾಂಗ್ರೆಸ್ ಮುಕ್ತ ಭಾರತ ಕನಸು ಕೇವಲ ರಾಜ್ಯ ವಿಧಾನಸಭೆ ಚುನಾವಣೆಗಳಲ್ಲಿ ಮಾತ್ರ ನನಸಾಗುತ್ತಿಲ್ಲ, ಬದಲಿಗೆ ಹಲವು ರಾಜ್ಯಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಕಾಂಗ್ರೆಸ್ ಮುಕ್ತವಾಗುತ್ತದೆ.

ಇದಕ್ಕೆ ಉತ್ತರ ಪ್ರದೇಶದ ಬಳಿಕ ಮೋದಿ ತವರು ರಾಜ್ಯ ಗುಜರಾತಿನಲ್ಲೇ ನಿದರ್ಶನ ಸಿಕ್ಕಿದ್ದು, ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ.

ರಾಜ್ಯದ 75 ಪುರಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 47 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ತನಗಿರುವ ಪ್ರಾಬಲ್ಯ ಉಳಿಸಿಕೊಂಡರೆ, ಯಥಾಪ್ರಕಾರ ಕಾಂಗ್ರೆ ಸೋತು ಸುಣ್ಣವಾಗಿದೆ.

ಕಾಂಗ್ರೆಸ್ ಕೇವಲ 16 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಗುಜರಾತಿನಲ್ಲಿ ತನಗೆ ಅಸ್ತಿತ್ವ ಇಲ್ಲ ಎಂಬುದನ್ನು ಈ ಚುನಾವಣೆಯಿಂದ ಕಾಂಗ್ರೆಸ್ ಕಲಿಯಬೇಕು ಎಂದೇ ವಿಶ್ಲೇಷಿಸಲಾಗುತ್ತಿದೆ.

75 ಕ್ಷೇತ್ರಗಳಲ್ಲಿ 47ರಲ್ಲಿ ಬಿಜೆಪಿ ಗೆದ್ದರೆ, 16 ಕಾಂಗ್ರೆಸ್, ಬಿಎಸ್ ಪಿ, ಎನ್ ಸಿಪಿ ತಲಾ ಒಂದು; ಸ್ವತಂತ್ರ ಅಭ್ಯರ್ಥಿಗಳು ನಾಲ್ಕರಲ್ಲಿ ಹಾಗೂ ಆರು ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದೆ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಉಳಿದಿದೆ.’

ಪ್ರಸ್ತುತ ರಾಜ್ಯಾದ್ಯಂತ ಇರುವ 2060 ಪುರಸಭೆ ಕ್ಷೇತ್ರದಲ್ಲಿ 1167 ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿದ್ದರೆ, ಕಾಂಗ್ರೆಸ್ ಕೇವಲ 630ರಲ್ಲಿ ಮಾತ್ರ ಪ್ರಭಾವ ಉಳಿಸಿಕೊಂಡಿದೆ. ಆದಾಗ್ಯೂ ಕಳೆದ ಡಿಸೆಂಬರ್ ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದ ಅಧಿಕಾರದ ಗದ್ದುಗೆ ಏರಿದೆ. ಈಗ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಮುನ್ನಡೆ ಸಾಧಿಸಿದೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search