• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಮಾಸ್ಟರ್ ಸ್ಟ್ರೋಕ್: ಉತ್ತರ ಪ್ರದೇಶದ ಖೈರಾನ ಬಿಟ್ಟಿದ ಹಿಂದೂಗಳು ಮರಳಿ ಗೂಡಿಗೆ

TNN Correspondent Posted On February 20, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ಗಲಭೆ ಪೀಡಿತ ಮುಸ್ಲಿಂ ಬಾಹುಳ್ಯದ ಖೈರಾನ್ ದಲ್ಲಿ ಮೂಲಭುತವಾದಿಗಳ ಕಿರುಕುಳಕ್ಕೆ ಊರು ಬಿಟ್ಟಿದ್ದ ಹಿಂದೂ ಕುಟುಂಬಗಳು ಇದೀಗ ಮರಳಿ ಗೂಡು ಸೇರುತ್ತಿವೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾನೂನು ಸುವ್ಯಸ್ಥೆ ಕುರಿತು ಕೈಗೊಂಡ ಕಠಿಣ ಕ್ರಮಗಳು, ದಿಟ್ಟ ನಿಲುವುಗಳಿಂದ  ಹಿಂದೂಗಳಿಗೆ ಸೂಕ್ತ ಭದ್ರತೆ ದೊರಕಿದೆ. ಮುಸ್ಲಿಂ ಮೂಲಭೂತವಾದಿಗಳಿಂದ ನಿತ್ಯ ಆತಂಕದಿಂದ ಖೈರಾನ್ ಬಿಟ್ಟು ಬೇರೆ ಬೇರೆ ಪ್ರದೇಶಗಳಿಗೆ ವಲಸೆ ಹೋಗಿದ್ದರು.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಸಮಾಜದಲ್ಲಿ ಶಾಂತಿ ಕೆಡಿಸುವವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ ಖೈರಾನ ಪ್ರದೇಶದ ಜನರಿಗೆ ಹೊಸ ಭರವಸೆ ಮೂಡಿಸಿದೆ. ಮುಸ್ಲಿಂ ಗುಂಡಾಗಳಿಂದ, ಗಲಭೆಗಳಿಂದ ಚಿಂತಿತರಾಗಿದ್ದ ಹಿಂದೂಗಳಿಗೆ ಹಿಂದಿನ ಸರ್ಕಾರ ಸೂಕ್ತ ಭದ್ರತೆ ನೀಡಿರಲಿಲ್ಲ. ಇದರಿಂದ ಹಿಂದೂಗಳು ವಲಸೆ ಹೋಗಿದ್ದರು. ಇದೀಗ ಯೋಗಿ ಆಡಳಿತದ 10 ತಿಂಗಳಲ್ಲಿ ಚಮತ್ಕಾರಿ ಬದಲಾವಣೆಯಾಗಿದೆ. ಸುಮಾರು ಒಂದು ಡಜನ್ ಗಿಂತ ಹೆಚ್ಚು ಹಿಂದೂ ಕುಟುಂಬಗಳು ಇದೀಗ ಖೈರಾನ್ ಕ್ಕೆ ವಾಪಸ್ಸ್ ಆಗಿವೆ.

‘ಮನೆ ಮಾರಾಟಕ್ಕಿವೆ’ ಬೋರ್ಡ್ ಬದಲು

ಮುಸ್ಲಿಂ ಗುಂಡಾಗಳ ಕಿರುಕುಳಕ್ಕೆ ಬೇಸತ್ತು ವಲಸೆ ಹೋಗಿದ್ದ ಹಿಂದೂಗಳ ಎಲ್ಲ ಮನೆ ಎದುರು ಮನೆ ಮಾರಾಟಕ್ಕಿವೆ ಎಂಬ ಬೋರ್ಡ್ ಗಳೇ ಇಷ್ಟು ದಿನ ಕಾಣುತ್ತಿದ್ದವು. ಯಾವಾಗ ಯೋಗಿ ಅಧಿಕಾರ ವಹಿಸಿಕೊಂಡರೋ ಆಗ ಖೈರಾನ್ ದಲ್ಲಿನ ಚಿತ್ರಣ ಬದಲಾಗಿದ್ದು, ಹಿಂದೂಗಳು ವ್ಯಾಪಾರ ಆರಂಭಿಸಿದ್ದು, ತಮ್ಮ ನಿತ್ಯದ ಕಾರ್ಯಕಲಾಪಗಳಲ್ಲಿ ತೊಡಗಿದ್ದಾರೆ.

ಸಂಭ್ರಮದಿಂದ ಹೋಲಿ ಆಚರಿಸುತ್ತೇವೆ

2014ರಲ್ಲಿ ಮೂಲಭೂತವಾದಿಗಳ ಕಿರುಕುಳಕ್ಕೆ ಖೈರಾನ್ ಬಿಟ್ಟು ಹೋಗಿದ್ದ ಅಂಕುರ ಮಿತ್ತಲ್ ಇದೀಗ ಮರಳಿದ್ದು, ಮತ್ತೆ ತಮ್ಮ ಸಿನೆಮಾ ಮಂದಿರವನ್ನು ಮುಂದುವರಿಸಿಕೊಂಡಿದ್ದಾರೆ. ಶೀಘ್ರದಲ್ಲಿ ನಾವು ಸಂಭ್ರಮದಿಂದ ಹೋಲಿ ಹಬ್ಬವನ್ನು ಆಚರಿಸುತ್ತೇವೆ ಎಂದಿದ್ದಾರೆ. ತನ್ನ ಸಹೋದರನನ್ನು ಎದುರಲ್ಲೇ ಹತ್ಯೆ ಮಾಡಿದ್ದರಿಂದ ಊರು ಬಿಟ್ಟಿದ್ದ ವಿನೋಧ ಕುಮಾರ ಇದೀಗ ಮರಳಿ ಖೈರಾನ್ ಕ್ಕೆ ಬಂದಿದ್ದು, ಸರ್ಕಾರದ ರಕ್ಷಣೆಯಲ್ಲಿ ಸ್ವಂತ ಊರಲ್ಲಿ ಜೀವನ ನಡೆಸಲು ಆರಂಭಿಸಿದ್ದಾರೆ.

ಇತ್ತೀಚೆಗೆ ಸಮಾಜಘಾತುಕ ಶಾರ್ಪಶೂಟರ್ ಶಬ್ಬೀರ್ ಅಹ್ಮದ್ ಎಂಬಾತನನ್ನು ಪೊಲೀಸರು ಹತ್ಯೆ ಮಾಡಿದ್ದರು. ಆತನ ವಿರುದ್ಧ ಕೊಲೆ ಮತ್ತು ದರೋಡೆ ಕುರಿತ 20 ಪ್ರಕರಣಗಳಿದ್ದವು. ಶಬ್ಬೀರ್ ಹತ್ಯೆಯಿಂದ ಹಿಂದೂಗಳಲ್ಲಿ ಹೊಸ ಆಶಾಕಿರಣವೊಂದು ಮೂಡಿದ್ದು, ಯೋಗಿ ಸರ್ಕಾರ ರಕ್ಷಣೆ ನೀಡುತ್ತದೆ ಎಂಬ ಭರವಸೆ ಮೂಡಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search