• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರಾವಳಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಂಚಲನ, ಕಾಂಗ್ರೆಸ್ ಮೌನ

TNN Correspondent Posted On February 20, 2018
0


0
Shares
  • Share On Facebook
  • Tweet It

ಮಂಗಳೂರು: ಚುನಾವಣೆ ಚಾಣಕ್ಯ, ಬಿಜೆಪಿಯ ವಿಜಯಯಾತ್ರೆಯನ್ನು ರಾಷ್ಟ್ರದ್ಯಂತ ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿರುವ ಅಮಿತ್ ಶಾ ಇಂದು ಬೆಳಗ್ಗೆಯಿಂದ ಕರಾವಳಿಯಾದ್ಯಂತ ಭರ್ಜರಿ ಸಂಚಲನ ನಡೆಸಿದ್ದು, ಇಂದು ಕುಲ್ಕಂದಲ್ಲಿ ನಡೆದ ನವಶಕ್ತಿ ಸಮಾವೇಶದಲ್ಲಿ ರಾಜ್ಯ ಸರ್ಕಾರದ ಹುಳುಕುಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಸಮಾಜವನ್ನು ಒಡೆದು ಮತ ದ್ರುವೀಕರಣ ಮತ್ತು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಸಮಾಜ ಒಡೆದು ಮತ ಪಡೆಯುತ್ತೇನೆ ಎಂಬ ಬ್ರಹ್ಮೆಯಲ್ಲಿ ಸಿದ್ದರಾಮಯ್ಯ ರಾಜ್ಯದಲ್ಲಿ ಒಡೆದು ಆಳುವ ನೀತಿ ಪ್ರದರ್ಶಿಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯರ ಒಡೆದು ಆಳುವ ನೀತಿ ರಾಜ್ಯದಲ್ಲಿ ಫಲಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

 ಕೇಂದ್ರ ಸರ್ಕಾರ 80 ಸಾವಿರ ಕೋಟಿಯ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದೆ. ಆದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಕೇಂದ್ರ ಸರ್ಕಾರ ಏನು ನೀಡಿದೆ ಎಂದು ತಮ್ಮ ಜವಾಬ್ದಾರಿಯಿಂದ ನುಣಿಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಶಾಸಕ ಎನ್.ಎ.ಹ್ಯಾರಿಸ್ ಮಗ ಸಾಮಾನ್ಯ ನಾಗರೀಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದರೂ ಕಠಿಣ ಕ್ರಮ ಕೈಗೊಂಡಿಲ್ಲವೇಕೇ..? ಎಂದು ಪ್ರಶ್ನಿಸಿದರು.

ಅಮಿತ್ ಶಾ ತಂತ್ರ ಅರಿಯಲು ಕಾಂಗ್ರೆಸ್ ಪ್ರಯತ್ನ..?

ಬಿಜೆಪಿ ಅಮಿತ್ ಶಾ ಕರಾವಳಿಯಲ್ಲಿ ಮಿಂಚಿನ ಸಂಚಾರ ಮಾಡುತ್ತಿರುವುದು ಕಾಂಗ್ರೆಸ್ಸಿಗರಲ್ಲಿ ವಿಚಿತ್ರ ಮೌನಕ್ಕೆ ಕಾರಣವಾಗಿದೆ. ಚಾಣಕ್ಯ ಅಮಿತ್ ಶಾ ನಡೆಸುವ ತಂತ್ರಗಳಾವುವು ಎಂಬುದರ ಕುರಿತು ಅರಿಯಲು ಕಾಂಗ್ರೆಸ್ಸಿಗರು ಹರಸಾಹಸ ಪಡುತ್ತಿದ್ದಾರೆ ಎನ್ನಲಾಗಿದೆ.

ರಾತ್ರಿ ಮಂಗಳೂರಿಗೆ ಬಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಸ್ವಲ್ಪ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೂ, ನಂತರ ಸುಧಾರಿಸಿಕೊಂಡು ಬೆಳಗ್ಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ಮಾಡಿ ದೇವರ ದರ್ಶನ ಪಡೆದರು. ನಂತರ ಕುಲ್ಕಂದಲ್ಲಿ ನಡೆದ ನವಶಕ್ತಿ ಸಮಾವೇಶದಲ್ಲಿ ಮಾತನಾಡಿದರು. ವಿಧಾನಸಭೆ ಚುನಾವಣೆ ಹೊತ್ತಿನಲ್ಲೇ ಅಮಿತ್ ಶಾ ಕರಾವಳಿಯಲ್ಲಿ ಮಿಂಚಿನ ಸಂಚಾರ ಮಾಡುತ್ತಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬುತ್ತಿದ್ದರೇ, ಕಾಂಗ್ರೆಸ್ ನಾಯಕರಲ್ಲಿ ನಡುಕ ಉಂಟಾಗಿದ್ದು, ಶಾ ತಂತ್ರಗಳು ಕುರಿತು ಹದ್ದಿನ ಕಣ್ಣಿಟ್ಟಿದ್ದಾರೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search