• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಂಗ್ಲಾ-ಬ್ರಿಟನ್ ಮೂಲದ ಮಹಿಳೆ ಮೇಲೆ ಅತ್ಯಾಚಾರ, ಕೇರಳ ಪಾದ್ರಿ ವಿರುದ್ಧ ದೂರು

TNN Correspondent Posted On February 21, 2018
0


0
Shares
  • Share On Facebook
  • Tweet It

ತಿರುವನಂತಪುರ: ದೇಶದಲ್ಲಿ ಕ್ರಿಶ್ಚಿಯನ್ ಪಾದ್ರಿಗಳ ಮತಾಂತರ ಉಪಟಳದ ಕುರಿತು ಆಗಾಗ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಕೇರಳದಲ್ಲಿ ಪಾದ್ರಿಯೊಬ್ಬ ಬಾಂಗ್ಲಾ-ಬ್ರಿಟನ್ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ದೂರು ದಾಖಲಾಗಿದೆ.

ಕೇರಳದ ಕೊಟ್ಟಾಯಂ ಜಿಲ್ಲೆಯ ಪೆರುಮ್ದುತುರತ್ ಪ್ರದೇಶದಲ್ಲಿರುವ ಸೇಂಟ್ ಮ್ಯಾಥ್ಯೂಸ್ ಚರ್ಚಿನಲ್ಲಿರುವ ಪಾದ್ರಿ ಥಾಮಸ್ ವಿರುದ್ಧ ಅತ್ಯಾಚಾರ, ಚಿನ್ನ ಸೇರಿ ಹಲವು ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ ಪ್ರಕರಣ ದಾಖಲಾಗಿದೆ.

ಬಾಂಗ್ಲಾ-ಬ್ರಿಟನ್ ಮೂಲದ 41 ವರ್ಷದ ಮಹಿಳೆ ಕಡುತ್ತುರುತಿ ಪೊಲೀಸರಿಗೆ ದೂರು ನೀಡಿದ್ದು, “ಥಾಮಸ್ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದು, ಪಾದ್ರಿ ಎಂಬ ಕಾರಣಕ್ಕಾಗಿ ಕೊಟ್ಟಾಯಂನಲ್ಲಿರುವ ಚರ್ಚಿಗೆ ಭೇಟಿ ನೀಡಿದ್ದೆ. ಅಲ್ಲಿ ಒಂದು ವಾರ ನನ್ನನ್ನು ಕೂಡಿಹಾಕಿ ಅತ್ಯಾಚಾರ ಎಸಗಿದ್ದಾನೆ” ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಷ್ಟೇ ಅಲ್ಲ, ನನ್ನ ಚಿನ್ನಾಭರಣ, ನನ್ನ ಮೊಬೈಲ್, 1,300 ಪೌಂಡ್ಸ್ ಗಳನ್ನು ಪಾದ್ರಿ ಕಳ್ಳತನ ಮಾಡಿದ್ದಾನೆ ಎಂದು ಮಹಿಳೆ ದೂರಿದ್ದಾರೆ. “ಮಹಿಳೆ ನೀಡಿದ ದೂರಿನ ಅನ್ವಯ ಪಾದ್ರಿ ಥಾಮಸ್ ವಿರುದ್ಧ ಅತ್ಯಾಚಾರ ಹಾಗೂ ಕಳ್ಳತನದ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಾಗುವುದು” ಎಂದು ಕೊಟ್ಟಾಯಂ ಡಿವೈಎಸ್ಪಿ ಮಾಹಿತಿ ನೀಡಿದ್ದಾರೆ.

ಆದಾಗ್ಯೂ ಚರ್ಚ್ ಆಡಳಿತ ಮಂಡಳಿ ಥಾಮಸ್ ನನ್ನು ಪಾದ್ರಿ ಸ್ಥಾನದಿಂದ ವಜಾಗೊಳಿಸಿದ್ದು, ಪೊಲೀಸರ ತನಿಖೆಗೆ ಥಾಮಸ್ ಸಹಕರಿಸಲಿದ್ದಾರೆ ಎಂದು ಸ್ಪಷ್ಟನೆ ನೀಡಿದೆ. ಆದರೆ ಧಾರ್ಮಿಕ ಸಂಸ್ಥೆಯೊಳಗೆ ಇಂತಹ ಹೇಯ ಕೃತ್ಯ ನಡೆಸುವ ಚರ್ಚ್ ಗಳ ಬಗ್ಗೆ ಜನ ಎಚ್ಚರದಿಂದ ಇರುವುದೊಳಿತು.

0
Shares
  • Share On Facebook
  • Tweet It




Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search