• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಂಗ್ಲಾ-ಬ್ರಿಟನ್ ಮೂಲದ ಮಹಿಳೆ ಮೇಲೆ ಅತ್ಯಾಚಾರ, ಕೇರಳ ಪಾದ್ರಿ ವಿರುದ್ಧ ದೂರು

TNN Correspondent Posted On February 21, 2018
0


0
Shares
  • Share On Facebook
  • Tweet It

ತಿರುವನಂತಪುರ: ದೇಶದಲ್ಲಿ ಕ್ರಿಶ್ಚಿಯನ್ ಪಾದ್ರಿಗಳ ಮತಾಂತರ ಉಪಟಳದ ಕುರಿತು ಆಗಾಗ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಕೇರಳದಲ್ಲಿ ಪಾದ್ರಿಯೊಬ್ಬ ಬಾಂಗ್ಲಾ-ಬ್ರಿಟನ್ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ದೂರು ದಾಖಲಾಗಿದೆ.

ಕೇರಳದ ಕೊಟ್ಟಾಯಂ ಜಿಲ್ಲೆಯ ಪೆರುಮ್ದುತುರತ್ ಪ್ರದೇಶದಲ್ಲಿರುವ ಸೇಂಟ್ ಮ್ಯಾಥ್ಯೂಸ್ ಚರ್ಚಿನಲ್ಲಿರುವ ಪಾದ್ರಿ ಥಾಮಸ್ ವಿರುದ್ಧ ಅತ್ಯಾಚಾರ, ಚಿನ್ನ ಸೇರಿ ಹಲವು ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ ಪ್ರಕರಣ ದಾಖಲಾಗಿದೆ.

ಬಾಂಗ್ಲಾ-ಬ್ರಿಟನ್ ಮೂಲದ 41 ವರ್ಷದ ಮಹಿಳೆ ಕಡುತ್ತುರುತಿ ಪೊಲೀಸರಿಗೆ ದೂರು ನೀಡಿದ್ದು, “ಥಾಮಸ್ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದು, ಪಾದ್ರಿ ಎಂಬ ಕಾರಣಕ್ಕಾಗಿ ಕೊಟ್ಟಾಯಂನಲ್ಲಿರುವ ಚರ್ಚಿಗೆ ಭೇಟಿ ನೀಡಿದ್ದೆ. ಅಲ್ಲಿ ಒಂದು ವಾರ ನನ್ನನ್ನು ಕೂಡಿಹಾಕಿ ಅತ್ಯಾಚಾರ ಎಸಗಿದ್ದಾನೆ” ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಷ್ಟೇ ಅಲ್ಲ, ನನ್ನ ಚಿನ್ನಾಭರಣ, ನನ್ನ ಮೊಬೈಲ್, 1,300 ಪೌಂಡ್ಸ್ ಗಳನ್ನು ಪಾದ್ರಿ ಕಳ್ಳತನ ಮಾಡಿದ್ದಾನೆ ಎಂದು ಮಹಿಳೆ ದೂರಿದ್ದಾರೆ. “ಮಹಿಳೆ ನೀಡಿದ ದೂರಿನ ಅನ್ವಯ ಪಾದ್ರಿ ಥಾಮಸ್ ವಿರುದ್ಧ ಅತ್ಯಾಚಾರ ಹಾಗೂ ಕಳ್ಳತನದ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಾಗುವುದು” ಎಂದು ಕೊಟ್ಟಾಯಂ ಡಿವೈಎಸ್ಪಿ ಮಾಹಿತಿ ನೀಡಿದ್ದಾರೆ.

ಆದಾಗ್ಯೂ ಚರ್ಚ್ ಆಡಳಿತ ಮಂಡಳಿ ಥಾಮಸ್ ನನ್ನು ಪಾದ್ರಿ ಸ್ಥಾನದಿಂದ ವಜಾಗೊಳಿಸಿದ್ದು, ಪೊಲೀಸರ ತನಿಖೆಗೆ ಥಾಮಸ್ ಸಹಕರಿಸಲಿದ್ದಾರೆ ಎಂದು ಸ್ಪಷ್ಟನೆ ನೀಡಿದೆ. ಆದರೆ ಧಾರ್ಮಿಕ ಸಂಸ್ಥೆಯೊಳಗೆ ಇಂತಹ ಹೇಯ ಕೃತ್ಯ ನಡೆಸುವ ಚರ್ಚ್ ಗಳ ಬಗ್ಗೆ ಜನ ಎಚ್ಚರದಿಂದ ಇರುವುದೊಳಿತು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search