• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಕೃತಿಯಂತೆ ನಿರ್ಮಾಣವಾಗಲಿದೆಯೇ ರೈಲು ನಿಲ್ದಾಣ?

TNN Correspondent Posted On February 22, 2018
0


0
Shares
  • Share On Facebook
  • Tweet It

ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಸ್ಪಷ್ಟ ನಿಲುವು ತಾಳದೆ ಇರುವ, ಇನ್ನೂ ಚರ್ಚೆ, ಸಮಸ್ಯೆ, ವಿವಾದ ಬಗೆಹರಿಯದುದರ ಮಧ್ಯೆಯೇ ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಕೃತಿಯಂತೆಯೇ ರೈಲು ನಿಲ್ದಾಣ ನಿರ್ಮಾಣವಾಗಲಿದೆ ಎಂಬ ಆಶಾಭಾವನೆಯೊಂದು ಮೂಡಿದೆ.

ಹೌದು, ಅಯೋಧ್ಯೆಯಲ್ಲಿ ರೈಲು ನಿಲ್ದಾಣದ ಮರು ನಿರ್ಮಾಣ ಕಾಮಗಾರಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಮನೋಜ್ ಸಿನ್ಹಾ ಅಡಿಪಾಯ ಹಾಕಿದ್ದು, ರಾಮಮಂದಿರವನ್ನೇ ಹೋಲುವ ರೀತಿಯಲ್ಲಿ ರೈಲು ನಿಲ್ದಾಣ ನಿರ್ಮಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ರಾಮಮಂದಿರ ಹೋಲುವ ರೈಲು ನಿಲ್ದಾಣ ಕಾಮಗಾರಿ ಮುಗಿದ ಕೂಡಲೇ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಪ್ರಸ್ತುತ ರೈಲು ನಿಲ್ದಾಣದ ಮರು ನಿರ್ಮಾಣದ ಕುರಿತು ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗಲೇ ಚರ್ಚಿಸಲಾಗಿತ್ತು. ಆದರೆ ಈಗ ಅಡಿಪಾಯ ಹಾಕಲಾಗುತ್ತಿದೆ ಎಂದು ವಿವರಿಸಿದ್ದಾರೆ.

2022ಕ್ಕೆ ರೈಲು ನಿಲ್ದಾಣದ ಮರುನಿರ್ಮಾಣ ಕಾಮಗಾರಿ ಮುಗಿಯಲಿದೆ ಎಂದು ಅಂದಾಜಿಸಲಾಗಿದೆ. ದೇಶದ ಎಲ್ಲ  ಪ್ರಮುಖ ನಗರಗಳಿಂದ ಅಯೋಧ್ಯೆಗೆ ಆಗಮಿಸಲು ರೈಲಿನ ವ್ಯವಸ್ಥೆ ಕಲ್ಪಿಸುವ ಮಹತ್ವಾಕಾಂಕ್ಷೆಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆ 200 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ರೈಲು ನಿಲ್ದಾಣದ ಪುನರ್ ನಿರ್ಮಾಣಕ್ಕೆ 80 ಕೋಟಿ ರೂ, ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಅಯೋಧ್ಯೆಗೆ ಬರುವ ರಾಮನ ಭಕ್ತರಿಗೆ ಇದು ರಾಮಜನ್ಮಭೂಮಿಯ ಅನುಭವ ನೀಡಲಿ ಎಂಬ ದೃಷ್ಟಿಯಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಸಿನ್ಹಾ ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಹಿಂದೂಗಳು ಹಾಗೂ ಮುಸ್ಲಿಂ ಮುಖಂಡರ ನಡುವೆ ಚರ್ಚೆಗಳಾಗುತ್ತಿದ್ದು, ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಇದೆಲ್ಲದರ ನಡುವೆ ರಾಮಮಂದಿರವನ್ನೇ ಹೋಲುವ ರೈಲು ನಿಲ್ದಾಣದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದರೆ ರಾಮನ ಭಕ್ತರಿಗೆ ಸಂತಸವಾಗುವುದರಲ್ಲಿ ಎರಡು ಮಾತಿಲ್ಲ.

0
Shares
  • Share On Facebook
  • Tweet It




Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search