• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಿದ ಆರೋಪ ಹೊತ್ತವನಿಗೆ ಹಾರ-ತುರಾಯಿಯ ಸ್ವಾಗತ, ಇದೆಂಥಾ ದಾರಿದ್ರ್ಯ?

TNN Correspondent Posted On February 22, 2018
0


0
Shares
  • Share On Facebook
  • Tweet It

ಮೈಸೂರು: ಒಂದೆಡೆ ಕಾಂಗ್ರೆಸ್ ಶಾಸಕನ ಪುತ್ರ ಮೊಹಮ್ಮದ್ ಹ್ಯಾರಿಸ್ ಗೂಂಡಾಗಿರಿ, ಇನ್ನೊಂದೆಡೆ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ದವಲತ್ತಿನಿಂದ ರಾಜ್ಯದಲ್ಲಿ ಸಾಮಾನ್ಯ ಜನರಿಗೆ ನ್ಯಾಯವಿಲ್ಲ ಎಂಬುದು ಸಾಬೀತಾಗುತ್ತಿದ್ದರೆ, ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಿದ ಆರೋಪದಲ್ಲಿ ಜೈಲಿಗೆ ಹೋಗಿ ಬಂದವನಿಗೆ ಹಾರ ತುರಾಯಿ ಹಾಕಿ ಮೆರವಣಿಗೆ ಮಾಡುವ ಮೂಲಕ ಕೆಲವರು ಬೌದ್ಧಿಕ ದಾರಿದ್ರ್ಯತನ ಮೆರೆದಿದ್ದಾರೆ.

ಹೌದು, ಮಾರ್ಚ್ 13, 2016ರಲ್ಲಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜು ಎಂಬ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿದ್ದ ಅಬೀಬ್ ಪಾಷಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಆತ ಜೈಲಿನಿಂದ ಹೊರಬರುತ್ತಲೇ ಕೆಲ ಮುಸ್ಲಿಂ ಯುವಕರು ಆತನಿಗೆ ಹಾರ ಹಾಕಿ, ಮೆರವಣಿಗೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಒಬ್ಬ ಕೊಲೆ ಆರೋಪಿಗೆ ಸಮಾಜದಲ್ಲಿ ಈ ಪರಿ ಗೌರವ ನೀಡುತ್ತಿರುವುದು ಯಾಕೆ ಹಾಗೂ ಹೀಗೆ ಗೌರವ ನೀಡುತ್ತಿದ್ದಾರೆ ಎಂಬುದರ ಹಿಂದೆ ಆತ ಹಿಂದೂವನ್ನು ಕೊಲೆ ಮಾಡಿದ ಎಂಬುದೇ ಪ್ರಮುಖ ಕಾರಣ ಎಂದೇ ಹೇಳಲಾಗುತ್ತಿದೆ.

ಈ ಅಬೀಬ್ ಪಾಷಾ ಬಿಜೆಪಿ ಕಾರ್ಯಕರ್ತ ರಾಜು ಸೇರಿ ಮೂರು ಕೊಲೆ ಪ್ರಕರಣದ ಆರೋಪಿಯಾಗಿದ್ದು, ಎಸ್ಡಿಪಿಐ ಸಂಘಟನೆಯ ಕಾರ್ಯಕರ್ತನಾಗಿದ್ದ. ಅಷ್ಟೇ ಅಲ್ಲ, ರಾಜು ಹತ್ಯೆ ನಡೆಸುವ ಮೊದಲು ಈತ ಕೇರಳದ ಸಮುದ್ರ ತೀರದಲ್ಲಿ ನಾಯಿಗಳನ್ನು ಕೊಚ್ಚಿ ಅಭ್ಯಾಸ ಮಾಡಿದ್ದ ಎಂದು ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರದ ಹಿಜ್ಬುಲ್ ಮುಜಾಹಿದ್ದೀನ್ ಸೇರಿ ಹಲವು ಸಂಘಟನೆಗಳಲ್ಲಿ ಒಂದಕ್ಕೆ ಸೇರುವ ಬಯಕೆ ಹೊಂದಿದ್ದ ಈತ ಮೈಸೂರಿನ ಮೂವರು ಬಿಜೆಪಿ ಮುಖಂಡರು, ಉತ್ತರ ಪ್ರದೇಶ ಬಿಜೆಪಿ ಮುಖಂಡ ಕಮಲೇಶ್ ತಿವಾರಿ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದ ಎಂದು ಸಹ ಹೇಳಲಾಗುತ್ತಿದೆ.

ಆದರೆ ಒಬ್ಬ ಕೊಲೆ ಆರೋಪ ಹೊತ್ತಿರುವವ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದರೆ ಮುಖಕ್ಕೆ ಉಗಿಯೋದು ಬಿಟ್ಟು, ಆತನಿಗೆ ಸನ್ಮಾನ ಮಾಡಿ ಮೆರವಣಿಗೆ ಮಾಡಿದ್ದಾರಲ್ಲ, ನಾಳೆ ತಮ್ಮ ಮನೆಯ ಅಣ್ಣನೋ, ತಮ್ಮನನ್ನೋ ಕೊಲೆ ಮಾಡಿ ಬಂದವನನ್ನೂ ಹೀಗೆ ಮಾಡುತ್ತಾರಾ? ಅಷ್ಟಕ್ಕೂ ನಮ್ಮ ಸಮಾಜ ಎಂತಹವರಿಗೆ ಗೌರವ ನೀಡಬೇಕು ಎಂಬುದನ್ನೇ ಕಲಿತಿಲ್ಲವಾ ಎಂಬ ಪ್ರಶ್ನೆಗಳು ಮೂಡುತ್ತಿವೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search