• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಿದ ಆರೋಪ ಹೊತ್ತವನಿಗೆ ಹಾರ-ತುರಾಯಿಯ ಸ್ವಾಗತ, ಇದೆಂಥಾ ದಾರಿದ್ರ್ಯ?

TNN Correspondent Posted On February 22, 2018
0


0
Shares
  • Share On Facebook
  • Tweet It

ಮೈಸೂರು: ಒಂದೆಡೆ ಕಾಂಗ್ರೆಸ್ ಶಾಸಕನ ಪುತ್ರ ಮೊಹಮ್ಮದ್ ಹ್ಯಾರಿಸ್ ಗೂಂಡಾಗಿರಿ, ಇನ್ನೊಂದೆಡೆ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ದವಲತ್ತಿನಿಂದ ರಾಜ್ಯದಲ್ಲಿ ಸಾಮಾನ್ಯ ಜನರಿಗೆ ನ್ಯಾಯವಿಲ್ಲ ಎಂಬುದು ಸಾಬೀತಾಗುತ್ತಿದ್ದರೆ, ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಿದ ಆರೋಪದಲ್ಲಿ ಜೈಲಿಗೆ ಹೋಗಿ ಬಂದವನಿಗೆ ಹಾರ ತುರಾಯಿ ಹಾಕಿ ಮೆರವಣಿಗೆ ಮಾಡುವ ಮೂಲಕ ಕೆಲವರು ಬೌದ್ಧಿಕ ದಾರಿದ್ರ್ಯತನ ಮೆರೆದಿದ್ದಾರೆ.

ಹೌದು, ಮಾರ್ಚ್ 13, 2016ರಲ್ಲಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜು ಎಂಬ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿದ್ದ ಅಬೀಬ್ ಪಾಷಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಆತ ಜೈಲಿನಿಂದ ಹೊರಬರುತ್ತಲೇ ಕೆಲ ಮುಸ್ಲಿಂ ಯುವಕರು ಆತನಿಗೆ ಹಾರ ಹಾಕಿ, ಮೆರವಣಿಗೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಒಬ್ಬ ಕೊಲೆ ಆರೋಪಿಗೆ ಸಮಾಜದಲ್ಲಿ ಈ ಪರಿ ಗೌರವ ನೀಡುತ್ತಿರುವುದು ಯಾಕೆ ಹಾಗೂ ಹೀಗೆ ಗೌರವ ನೀಡುತ್ತಿದ್ದಾರೆ ಎಂಬುದರ ಹಿಂದೆ ಆತ ಹಿಂದೂವನ್ನು ಕೊಲೆ ಮಾಡಿದ ಎಂಬುದೇ ಪ್ರಮುಖ ಕಾರಣ ಎಂದೇ ಹೇಳಲಾಗುತ್ತಿದೆ.

ಈ ಅಬೀಬ್ ಪಾಷಾ ಬಿಜೆಪಿ ಕಾರ್ಯಕರ್ತ ರಾಜು ಸೇರಿ ಮೂರು ಕೊಲೆ ಪ್ರಕರಣದ ಆರೋಪಿಯಾಗಿದ್ದು, ಎಸ್ಡಿಪಿಐ ಸಂಘಟನೆಯ ಕಾರ್ಯಕರ್ತನಾಗಿದ್ದ. ಅಷ್ಟೇ ಅಲ್ಲ, ರಾಜು ಹತ್ಯೆ ನಡೆಸುವ ಮೊದಲು ಈತ ಕೇರಳದ ಸಮುದ್ರ ತೀರದಲ್ಲಿ ನಾಯಿಗಳನ್ನು ಕೊಚ್ಚಿ ಅಭ್ಯಾಸ ಮಾಡಿದ್ದ ಎಂದು ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರದ ಹಿಜ್ಬುಲ್ ಮುಜಾಹಿದ್ದೀನ್ ಸೇರಿ ಹಲವು ಸಂಘಟನೆಗಳಲ್ಲಿ ಒಂದಕ್ಕೆ ಸೇರುವ ಬಯಕೆ ಹೊಂದಿದ್ದ ಈತ ಮೈಸೂರಿನ ಮೂವರು ಬಿಜೆಪಿ ಮುಖಂಡರು, ಉತ್ತರ ಪ್ರದೇಶ ಬಿಜೆಪಿ ಮುಖಂಡ ಕಮಲೇಶ್ ತಿವಾರಿ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದ ಎಂದು ಸಹ ಹೇಳಲಾಗುತ್ತಿದೆ.

ಆದರೆ ಒಬ್ಬ ಕೊಲೆ ಆರೋಪ ಹೊತ್ತಿರುವವ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದರೆ ಮುಖಕ್ಕೆ ಉಗಿಯೋದು ಬಿಟ್ಟು, ಆತನಿಗೆ ಸನ್ಮಾನ ಮಾಡಿ ಮೆರವಣಿಗೆ ಮಾಡಿದ್ದಾರಲ್ಲ, ನಾಳೆ ತಮ್ಮ ಮನೆಯ ಅಣ್ಣನೋ, ತಮ್ಮನನ್ನೋ ಕೊಲೆ ಮಾಡಿ ಬಂದವನನ್ನೂ ಹೀಗೆ ಮಾಡುತ್ತಾರಾ? ಅಷ್ಟಕ್ಕೂ ನಮ್ಮ ಸಮಾಜ ಎಂತಹವರಿಗೆ ಗೌರವ ನೀಡಬೇಕು ಎಂಬುದನ್ನೇ ಕಲಿತಿಲ್ಲವಾ ಎಂಬ ಪ್ರಶ್ನೆಗಳು ಮೂಡುತ್ತಿವೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search