• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಿದ ಆರೋಪ ಹೊತ್ತವನಿಗೆ ಹಾರ-ತುರಾಯಿಯ ಸ್ವಾಗತ, ಇದೆಂಥಾ ದಾರಿದ್ರ್ಯ?

TNN Correspondent Posted On February 22, 2018


  • Share On Facebook
  • Tweet It

ಮೈಸೂರು: ಒಂದೆಡೆ ಕಾಂಗ್ರೆಸ್ ಶಾಸಕನ ಪುತ್ರ ಮೊಹಮ್ಮದ್ ಹ್ಯಾರಿಸ್ ಗೂಂಡಾಗಿರಿ, ಇನ್ನೊಂದೆಡೆ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ದವಲತ್ತಿನಿಂದ ರಾಜ್ಯದಲ್ಲಿ ಸಾಮಾನ್ಯ ಜನರಿಗೆ ನ್ಯಾಯವಿಲ್ಲ ಎಂಬುದು ಸಾಬೀತಾಗುತ್ತಿದ್ದರೆ, ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಿದ ಆರೋಪದಲ್ಲಿ ಜೈಲಿಗೆ ಹೋಗಿ ಬಂದವನಿಗೆ ಹಾರ ತುರಾಯಿ ಹಾಕಿ ಮೆರವಣಿಗೆ ಮಾಡುವ ಮೂಲಕ ಕೆಲವರು ಬೌದ್ಧಿಕ ದಾರಿದ್ರ್ಯತನ ಮೆರೆದಿದ್ದಾರೆ.

ಹೌದು, ಮಾರ್ಚ್ 13, 2016ರಲ್ಲಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜು ಎಂಬ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿದ್ದ ಅಬೀಬ್ ಪಾಷಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಆತ ಜೈಲಿನಿಂದ ಹೊರಬರುತ್ತಲೇ ಕೆಲ ಮುಸ್ಲಿಂ ಯುವಕರು ಆತನಿಗೆ ಹಾರ ಹಾಕಿ, ಮೆರವಣಿಗೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಒಬ್ಬ ಕೊಲೆ ಆರೋಪಿಗೆ ಸಮಾಜದಲ್ಲಿ ಈ ಪರಿ ಗೌರವ ನೀಡುತ್ತಿರುವುದು ಯಾಕೆ ಹಾಗೂ ಹೀಗೆ ಗೌರವ ನೀಡುತ್ತಿದ್ದಾರೆ ಎಂಬುದರ ಹಿಂದೆ ಆತ ಹಿಂದೂವನ್ನು ಕೊಲೆ ಮಾಡಿದ ಎಂಬುದೇ ಪ್ರಮುಖ ಕಾರಣ ಎಂದೇ ಹೇಳಲಾಗುತ್ತಿದೆ.

ಈ ಅಬೀಬ್ ಪಾಷಾ ಬಿಜೆಪಿ ಕಾರ್ಯಕರ್ತ ರಾಜು ಸೇರಿ ಮೂರು ಕೊಲೆ ಪ್ರಕರಣದ ಆರೋಪಿಯಾಗಿದ್ದು, ಎಸ್ಡಿಪಿಐ ಸಂಘಟನೆಯ ಕಾರ್ಯಕರ್ತನಾಗಿದ್ದ. ಅಷ್ಟೇ ಅಲ್ಲ, ರಾಜು ಹತ್ಯೆ ನಡೆಸುವ ಮೊದಲು ಈತ ಕೇರಳದ ಸಮುದ್ರ ತೀರದಲ್ಲಿ ನಾಯಿಗಳನ್ನು ಕೊಚ್ಚಿ ಅಭ್ಯಾಸ ಮಾಡಿದ್ದ ಎಂದು ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರದ ಹಿಜ್ಬುಲ್ ಮುಜಾಹಿದ್ದೀನ್ ಸೇರಿ ಹಲವು ಸಂಘಟನೆಗಳಲ್ಲಿ ಒಂದಕ್ಕೆ ಸೇರುವ ಬಯಕೆ ಹೊಂದಿದ್ದ ಈತ ಮೈಸೂರಿನ ಮೂವರು ಬಿಜೆಪಿ ಮುಖಂಡರು, ಉತ್ತರ ಪ್ರದೇಶ ಬಿಜೆಪಿ ಮುಖಂಡ ಕಮಲೇಶ್ ತಿವಾರಿ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದ ಎಂದು ಸಹ ಹೇಳಲಾಗುತ್ತಿದೆ.

ಆದರೆ ಒಬ್ಬ ಕೊಲೆ ಆರೋಪ ಹೊತ್ತಿರುವವ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದರೆ ಮುಖಕ್ಕೆ ಉಗಿಯೋದು ಬಿಟ್ಟು, ಆತನಿಗೆ ಸನ್ಮಾನ ಮಾಡಿ ಮೆರವಣಿಗೆ ಮಾಡಿದ್ದಾರಲ್ಲ, ನಾಳೆ ತಮ್ಮ ಮನೆಯ ಅಣ್ಣನೋ, ತಮ್ಮನನ್ನೋ ಕೊಲೆ ಮಾಡಿ ಬಂದವನನ್ನೂ ಹೀಗೆ ಮಾಡುತ್ತಾರಾ? ಅಷ್ಟಕ್ಕೂ ನಮ್ಮ ಸಮಾಜ ಎಂತಹವರಿಗೆ ಗೌರವ ನೀಡಬೇಕು ಎಂಬುದನ್ನೇ ಕಲಿತಿಲ್ಲವಾ ಎಂಬ ಪ್ರಶ್ನೆಗಳು ಮೂಡುತ್ತಿವೆ.

  • Share On Facebook
  • Tweet It


- Advertisement -


Trending Now
ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
Tulunadu News December 5, 2023
ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
Tulunadu News December 5, 2023
Leave A Reply

  • Recent Posts

    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
  • Popular Posts

    • 1
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 2
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 3
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 4
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 5
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search