• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಹಿಳಾ ತಾಕತ್ತು ತೋರಿದ ಅವನಿ ಚತುರ್ವೇದಿ, ಏಕಾಂಗಿಯಾಗಿ ಯುದ್ಧ ವಿಮಾನ ಹಾರಾಟ ಮಾಡಿ ಇತಿಹಾಸ ಸೃಷ್ಟಿ

TNN Correspondent Posted On February 22, 2018
0


0
Shares
  • Share On Facebook
  • Tweet It

ಅಹಮದಾಬಾದ್: ಭಾರತ ಮಹಿಳೆಯರ ತಾಕತ್ತು ಇದೀಗ ಬಾನಂಗಳದಲ್ಲಿ ಪ್ರದರ್ಶಿತವಾಗುತ್ತಿದ್ದು, ಭಾರತದ ಸೈನ್ಯದಲ್ಲಿರುವ ಮಹಿಳೆಯೊಬ್ಬರು ಮಿಗ್ 21 ಬಿಸನ್ ಯುದ್ಧ ವಿಮಾನವನ್ನು ಏಕಾಂಗಿಯಾಗಿ ಹಾರಾಟ ಮಾಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ವಿಶ್ವದಲ್ಲೇ ತನ್ನ ಸೈನಿಕ ಬಲದ ಮೂಲಕ ಗಮನ ಸೆಳೆದಿರುವ ಭಾರತೀಯ ಸೇನೆ ಇದೀಗ ಹೊಸ ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ಏಕಾಂಗಿಯಾಗಿ ಮಹಿಳಾ ಪೈಲಟ್‌ವೊಬ್ಬರು ಯುದ್ಧ ವಿಮಾನ ಹಾರಾಟ ನಡೆಸುವ ಮೂಲಕ ಐತಿಹಾಸಿಕ ಘಟನೆ ನಿರ್ಮಾಣ ಮಾಡಿದ್ದಾರೆ.

ಅವನಿ ಚತುರ್ವೇದಿ ಯುದ್ಧ ವಿಮಾನವನ್ನು ಏಕಾಂಗಿಯಾಗಿ ಹಾರಾಟ ನಡೆಸಿದ ಭಾರತೀಯ ಸೇನೆಯ ಮಹಿಳಾ ಪೈಲಟ್‌ ಅಧಿಕಾರಿ. ಗುಜರಾತ್‌ನ ಜಮ್‌ನಗರ್‌ನಲ್ಲಿ ಸೋಮವಾರ ಅವನಿ ಚತುರ್ವೇದಿ ಒಬ್ಬರೇ ಮಿಗ್‌-21 ಬಿಸನ್‌ ಯುದ್ಧ ವಿಮಾನ ಹಾರಾಟ ನಡೆಸಿದ್ದಾರೆ. ಭಾರತೀಯ ವಾಯುಪಡೆ ಹಾಗೂ ಭಾರತಕ್ಕೆ ಇದೊಂದು ಅನನ್ಯ ಸಾಧನೆ ಎಂದು ವಾಯುಪಡೆಯ ಕಮಾಂಡರ್‌ ಪ್ರಶಾಂತ್‌ ದೀಕ್ಷಿತ್‌ ತಿಳಿಸಿದ್ದಾರೆ.

ಮಿಗ್‌-21 ಬಿಸನ್‌ ಯುದ್ಧ ವಿಮಾನ ಹಾರಾಟ ನಡೆಸಿ ಅವನಿ ಚತುರ್ವೇದಿ ಭಾರತೀಯ ಸೈನ್ಯದ ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿದ್ದಾರೆ. ಮಿಗ್‌-21 ಬಿಸನ್‌ ಯುದ್ಧ ವಿಮಾನ ವಿಶ್ವದಲ್ಲೇ ಅತ್ಯಧಿಕ (ಪ್ರತಿ ಗಂಟೆಗೆ 340 ಕಿ.ಮೀ.) ಲ್ಯಾಂಡಿಂಗ್‌ ಹಾಗೂ ಟೇಕ್‌ಆಫ್‌ ವೇಗ ಹೊಂದಿದೆ ಎಂದು ಪ್ರಶಾಂತ್‌ ದೀಕ್ಷಿತ್‌ ತಿಳಿಸಿದ್ದಾರೆ.
2016ರ ಜೂನ್‌ 8ರಂದು ಅವನಿ ಚತುರ್ವೇದಿ, ಮೋಹನಾ ಸಿಂಗ್‌ ಹಾಗೂ ಭಾವನಾಕಾಂತ್‌ ಅವರನ್ನು ಭಾರತದ ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್‌‌ಗಳೆಂದು ಘೋಷಿಸಲಾಗಿತ್ತು.
ಅವಾನಿ ಚತುರ್ವೇದಿ, ಮೋಹನಾ ಸಿಂಗ್‌ ಹಾಗೂ ಭಾವನಾಕಾಂತ್‌ ಅವರ ತರಬೇತಿ ಜನವರಿಯಲ್ಲಿ ಪೂರ್ಣಗೊಂಡಿದೆ. ಶೀಘ್ರವೇ ಮೋಹನಾ ಸಿಂಗ್‌ ಹಾಗೂ ಭಾವನಾಕಾಂತ್‌ ಕೂಡ ಯುದ್ಧ ವಿಮಾನದ ಹಾರಾಟ ನಡೆಸಲಿದ್ದಾರೆ. ಅವನಿ ಚತುರ್ವೇದಿ ಮಧ್ಯಪ್ರದೇಶದ ರೇವಾ ಜಿಲ್ಲೆಯವರಾಗಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search