• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಂಬಳ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಕ್ಕೆ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಏನ್ ಹೇಳಿದ್ರು ಗೊತ್ತಾ?

TNN Correspondent Posted On February 22, 2018


  • Share On Facebook
  • Tweet It

ದೆಹಲಿ: ಪ್ರಾಣಿ ದಯಾ ಸಂಘ ಸೇರಿ ಹಲವು ಸಂಘಟನೆಗಳು, ಹಲವು ಎಡಬಿಡಂಗಿ ಬುದ್ಧಿಜೀವಿಗಳು ಕರ್ನಾಟಕದ, ಅದರಲ್ಲೂ ಕರಾವಳಿ ಭಾಗದಲ್ಲಿ ಪ್ರಾಬಲ್ಯ ಸಾಧಿಸಿರುವ, ಸಂಸ್ಕೃತಿಯ ಪ್ರತಿಬಿಂಬವಾಗಿರುವ ಕಂಬಳಕ್ಕೆ ಎಷ್ಟೇ ಅಡ್ಡಗಾಲು ಹಾಕಿದರೂ ಪ್ರಸ್ತುತ ಕಂಬಳ ಏರ್ಪಡಿಸಲು ರಾಷ್ಟ್ರಪತಿ ಅಂಕಿತ ಸಿಕ್ಕಿದೆ.

ಈ ಸಂಗತಿ ಕರಾವಳಿ ಸೇರಿ ರಾಜ್ಯದ ಎಲ್ಲ ಜನರಿಗೂ ಸಂತಸವಾಗಿದ್ದು, ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿಯವರು ಸಹಿ ಹಾಕಿದ್ದು, ಇನ್ನು ಮುಂದೆ ಕಂಬಳಕ್ಕೆ ಯಾರೂ ಅಡ್ಡಿ ಹಾಗೂ ಕಡ್ಡಿ ಹಾಕುವಂತಿಲ್ಲ.

ಇಂತಹ ಖುಷಿಯ ಸಂಗತಿಯ ಜತೆಗೆ ಮತ್ತೊಂದು ಸಂತಸದ ವಿಚಾರ ಹೊರಬಿದ್ದಿದ್ದು, ಕರ್ನಾಟಕದ ಕಂಬಳಕ್ಕೆ ರಾಷ್ಟ್ರಪತಿಯವರು ಹಸಿರು ನಿಶಾನೆ ತೋರಿರುವ ಕ್ರಮವನ್ನು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸಹ ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಕ್ರೀಡೆಗಳನ್ನು ನಾವು ರಕ್ಷಿಸಲೇಬೇಕು. ಅವುಗಳ ಅಸ್ತಿತ್ವ ಹಾಗೂ ಗ್ರಾಮೀಣ ಯುವಕರು ಚೈತನ್ಯದಿಂದ ಇರಲು ಗ್ರಾಮೀಣ ಕ್ರೀಡೆಗಳು ಸಹಕಾರಿ. ಈ ದಿಸೆಯಲ್ಲಿ ಕರ್ನಾಟಕದ ಗ್ರಾಮೀಣ ಸೊಗಡಾದ ಕಂಬಳಕ್ಕೆ ರಾಷ್ಟ್ರಪತಿಯವರು ಸಹಿ ಹಾಕಿರುವುದು ಸಂತಸ ತಂದಿದೆ ಎಂದು ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲ, ಕೆಲವು ಕಪಟಿಗಳು ಗ್ರಾಮೀಣ ಕ್ರೀಡೆಗೆ ಅಡ್ಡಗಾಲು ಹಾಕಲು ಮುಂದಾದವು. ಆದರೆ ಕೊನೆಗೆ ಗ್ರಾಮೀಣ ಕ್ರೀಡೆಗಳಿಗೇ ಜಯ ಸಿಕ್ಕಂತಾಗಿರುವುದು ಖುಷಿಯ ವಿಚಾರ ಎಂದು ಡ್ಯಾಷಿಂಗ್ ಓಪನರ್ ಎಂದೇ ಖ್ಯಾತರಾಗಿದ್ದ ವೀರೂ ಟ್ವೀಟ್ ಮಾಡುವ ಮೂಲಕ ಕರ್ನಾಟಕದ ಕಂಬಳವನ್ನು ಬೆಂಬಲಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search