• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಶಾಸಕ ಕೊಟ್ಟ ಸೀರೆಗಳನ್ನು ಮತದಾರ ಸುಟ್ಟುಹಾಕುತ್ತಾನೆಂದರೆ ಇವರ ವಿರುದ್ಧ ಎಷ್ಟು ಆಕ್ರೋಶವಿರಬೇಕು?

TNN Correspondent Posted On February 23, 2018
0


0
Shares
  • Share On Facebook
  • Tweet It

ಚಿಕ್ಕಬಳ್ಳಾಪುರ: ಒಂದೆಡೆ ಕಾಂಗ್ರೆಸ್ಸಿಗರ ಗೂಂಡಾ ವರ್ತನೆಯಿಂದ ಇಡೀ ರಾಜ್ಯ ಕಾಂಗ್ರೆಸ್ಸಿಗೆ ಶಾಪ ಹಾಕುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಶಾಸಕರ ವಿರುದ್ಧವೂ ಜನ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದಕ್ಕೆ ಸಾಕ್ಷಿಯಾಗಿ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಅವರು ಮಹಿಳಾ ಮತದಾರರನ್ನು ಸೆಳೆಯಲು ಹಂಚಿಕೆ ಮಾಡಿದ್ದ ಸೀರೆಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೌದು, ಸಂಕ್ರಾಂತಿ ಸುಗ್ಗಿ ಕಾರ್ಯಕ್ರಮದ ನೆಪದಲ್ಲಿ ಶಾಸಕ ಡಾ.ಕೆ.ಸುಧಾಕರ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಸೀರೆಗಳನ್ನು ಹಂಚುತ್ತಿದ್ದು, ಕಾಂಗ್ರೆಸ್ಸಿನ ಈ ಮನವೊಲಿಕೆಯ ರಾಜಕಾರಣಕ್ಕೆ ಬೇಸತ್ತ ವ್ಯಕ್ತಿಯೊಬ್ಬ ನಡುರಸ್ತೆಯಲ್ಲೇ ಸೀರೆ ಸುಟ್ಟು ಹಾಕಿದ್ದಾನೆ.

ಅಧಿಕಾರಕ್ಕೆ ಬಂದು ಐದು ವರ್ಷವಾಗುತ್ತ ಬಂತು, ಇಷ್ಟು ದಿನ ಸೀರೆ ಹಂಚದ ನೀವು, ಈಗ ಸುಗ್ಗಿ ಹಬ್ಬದ ನೆಪವೊಡ್ಡಿ ಸೀರೆ ಹಂಚುತ್ತಿದ್ದೀರಿ. ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ನಿಮಗೆ ಸುಗ್ಗಿ ಹಬ್ಬ, ಸೀರೆ ಹಂಚುವುದು ನೆನಪಾಯಿತೇ ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಶಾಸಕ ಸುಧಾಕರ್ ಒಡೆತನದ ಸಾಯಿಕೃಷ್ಣ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕ್ಷೇತ್ರದೆಲ್ಲೆಡೆ ರಂಗೋಲಿ ಸ್ಪರ್ಧೆ ಸಹ ಆಯೋಜಿಸಿದ್ದು, ಫೆ.24ರಂದು ಸುಗ್ಗಿ ಹಬ್ಬ ಕಾರ್ಯಕ್ರಮದಲ್ಲಿ ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ಸಹ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಅತ್ತ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಲ್ಲಿ ವಾಸ್ತವ್ಯ ಮಾಡುತ್ತಿದ್ದರೆ, ಇತ್ತ ಚಿಕ್ಕಬಳ್ಳಾಪುರ ಶಾಸಕ ಸೀರೆ ಹಂಚಿ, ಹಲವು ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ಆದರೆ ಜನ ಮಾತ್ರ ಎಚ್ಚೆತ್ತುಕೊಂಡು ಇಂತಹ ಚುನಾವಣೆ ಗಿಮಿಕ್ ಗಳಿಗೆ ಕಿವಿಗೊಡುತ್ತಿಲ್ಲ ಎಂಬುದಕ್ಕೆ ಸೀರೆ ಸುಟ್ಟಿದ್ದೇ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search