• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಶಾಸಕ ಕೊಟ್ಟ ಸೀರೆಗಳನ್ನು ಮತದಾರ ಸುಟ್ಟುಹಾಕುತ್ತಾನೆಂದರೆ ಇವರ ವಿರುದ್ಧ ಎಷ್ಟು ಆಕ್ರೋಶವಿರಬೇಕು?

TNN Correspondent Posted On February 23, 2018
0


0
Shares
  • Share On Facebook
  • Tweet It

ಚಿಕ್ಕಬಳ್ಳಾಪುರ: ಒಂದೆಡೆ ಕಾಂಗ್ರೆಸ್ಸಿಗರ ಗೂಂಡಾ ವರ್ತನೆಯಿಂದ ಇಡೀ ರಾಜ್ಯ ಕಾಂಗ್ರೆಸ್ಸಿಗೆ ಶಾಪ ಹಾಕುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಶಾಸಕರ ವಿರುದ್ಧವೂ ಜನ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದಕ್ಕೆ ಸಾಕ್ಷಿಯಾಗಿ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಅವರು ಮಹಿಳಾ ಮತದಾರರನ್ನು ಸೆಳೆಯಲು ಹಂಚಿಕೆ ಮಾಡಿದ್ದ ಸೀರೆಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೌದು, ಸಂಕ್ರಾಂತಿ ಸುಗ್ಗಿ ಕಾರ್ಯಕ್ರಮದ ನೆಪದಲ್ಲಿ ಶಾಸಕ ಡಾ.ಕೆ.ಸುಧಾಕರ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಸೀರೆಗಳನ್ನು ಹಂಚುತ್ತಿದ್ದು, ಕಾಂಗ್ರೆಸ್ಸಿನ ಈ ಮನವೊಲಿಕೆಯ ರಾಜಕಾರಣಕ್ಕೆ ಬೇಸತ್ತ ವ್ಯಕ್ತಿಯೊಬ್ಬ ನಡುರಸ್ತೆಯಲ್ಲೇ ಸೀರೆ ಸುಟ್ಟು ಹಾಕಿದ್ದಾನೆ.

ಅಧಿಕಾರಕ್ಕೆ ಬಂದು ಐದು ವರ್ಷವಾಗುತ್ತ ಬಂತು, ಇಷ್ಟು ದಿನ ಸೀರೆ ಹಂಚದ ನೀವು, ಈಗ ಸುಗ್ಗಿ ಹಬ್ಬದ ನೆಪವೊಡ್ಡಿ ಸೀರೆ ಹಂಚುತ್ತಿದ್ದೀರಿ. ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ನಿಮಗೆ ಸುಗ್ಗಿ ಹಬ್ಬ, ಸೀರೆ ಹಂಚುವುದು ನೆನಪಾಯಿತೇ ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಶಾಸಕ ಸುಧಾಕರ್ ಒಡೆತನದ ಸಾಯಿಕೃಷ್ಣ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕ್ಷೇತ್ರದೆಲ್ಲೆಡೆ ರಂಗೋಲಿ ಸ್ಪರ್ಧೆ ಸಹ ಆಯೋಜಿಸಿದ್ದು, ಫೆ.24ರಂದು ಸುಗ್ಗಿ ಹಬ್ಬ ಕಾರ್ಯಕ್ರಮದಲ್ಲಿ ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ಸಹ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಅತ್ತ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಲ್ಲಿ ವಾಸ್ತವ್ಯ ಮಾಡುತ್ತಿದ್ದರೆ, ಇತ್ತ ಚಿಕ್ಕಬಳ್ಳಾಪುರ ಶಾಸಕ ಸೀರೆ ಹಂಚಿ, ಹಲವು ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ಆದರೆ ಜನ ಮಾತ್ರ ಎಚ್ಚೆತ್ತುಕೊಂಡು ಇಂತಹ ಚುನಾವಣೆ ಗಿಮಿಕ್ ಗಳಿಗೆ ಕಿವಿಗೊಡುತ್ತಿಲ್ಲ ಎಂಬುದಕ್ಕೆ ಸೀರೆ ಸುಟ್ಟಿದ್ದೇ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search