• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬದಲಾಗಲಿದೆ ಗ್ರಾಮೀಣರ ಬದುಕು, ಕೇಂದ್ರ ಸರ್ಕಾರದಿಂದ ಮತ್ತೊಂದು ಜನೋಪಯೋಗಿ ಯೋಜನೆ

TNN Correspondent Posted On February 23, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಗೋಮುಖ ವ್ಯಾಘ್ರಗಳಿಗೆ ಬಲಿಯಾಗುತ್ತಿರುವ ಮತ್ತು ಸಂಕಷ್ಟದಲ್ಲಿರುವ ಗೋ ತಳಿಗಳ ರಕ್ಷಣೆಯ ಜತೆಗೆ ಗೋ ಕೃಷಿಗೆ ಒತ್ತು ನೀಡುವುದು, ದೇಶದ ರೈತರ ಆದಾಯಕ್ಕೂ ತಕ್ಕ ಮಟ್ಟಿನ ಪ್ರೋತ್ಸಾಹ ನೀಡುವುದಕ್ಕೆ ಕೇಂದ್ರ ಸರ್ಕಾರ ನೂತನ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಪಶುಗಳ ಸಗಣಿ ಬಳಸಿ ಇಂಧನ ಉತ್ಪಾದಿಸುವ ‘ಗೋಬರ್‌-ಧನ್‌’ ಯೋಜನೆ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಕೇಂದ್ರ ಕುಡಿಯುವ ನೀರು ಹಾಗೂ ನೈರ್ಮಲ್ಯ ಸಚಿವಾಲಯದಿಂದ ಈ ಯೋಜನೆ ಏಪ್ರಿಲ್‌ನಿಂದ ಜಾರಿಗೊಳಿಸಲಾಗುವುದು ಎನ್ನಲಾಗುತ್ತಿದೆ. ಈ ಯೋಜನೆಯ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯನ್ನು ಗ್ರಾಮೀಣ ಭಾಗದಲ್ಲಿ ಚುರುಕುಗೊಳಿಸುವ ಮತ್ತು ಇಂಧನ ಉತ್ಪಾದನೆ ಮತ್ತು ರೈತರಿಗೆ ಸೂಕ್ತ ಲಾಭ ದೊರಕಿಸುವ ಉದ್ದೇಶ ಕೇಂದ್ರ ಸರ್ಕಾರದ್ದು.

350 ಜಿಲ್ಲೆಯಲ್ಲಿ ಪ್ರಥಮ ಹಂತದಲ್ಲಿ ಆರಂಭ

350 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಯೋಜನೆ ಆರಂಭಿಸುವ ಗುರಿ ಯೋಜಿಸಲಾಗಿದೆ. ದೇಶದಲ್ಲಿ  ಸುಮಾರು 30 ಕೋಟಿ ಪಶುಗಳ ಸಂಖ್ಯೆ ಇದ್ದು, ನಿತ್ಯ 30 ಲಕ್ಷ ಟನ್‌ ಸಗಣಿ ಸೃಷ್ಟಿಯಾಗುವ ಅಂದಾಜಿದೆ. ಸಗಣಿಯನ್ನು ಬಳಸಿ ಜೈವಿಕ ಅನಿಲ ಹಾಗೂ ಜೈವಿಕ ಸಿಎನ್‌ಜಿ ಉತ್ಪಾದಿಸುವುದು ಮತ್ತು ಅದನ್ನು ಇ-ಕಾಮರ್ಸ್‌ ವೇದಿಕೆ ಮೂಲಕ ಆನ್‌ಲೈನ್‌ನಲ್ಲೇ ಮಾರಾಟ ಮಾಡಲು ಈ ಯೋಜನೆ ಮೂಲಕ ಅನುಕೂಲ ಕಲ್ಪಿಸಲಾಗಿದೆ.

ಆನ್ ಲೈನ್ ಮೂಲಕ ಇಂಧನ ಮಾರಾಟಕ್ಕೆ ಕೇಂದ್ರದ ನೆರವು

ಸಾರ್ವಜನಿಕ ಸ್ವಾಮ್ಯದ  ತೈಲ ಕಂಪನಿಯೊಂದು ಜೈವಿಕ ಅನಿಲ ಖರೀದಿಗೂ ಮುಂದೆ ಬಂದಿದೆ ಎನ್ನಲಾಗುತ್ತಿದೆ. ಗ್ರಾಮ ಪಂಚಾಯ್ತಿಯು ಯೋಜನೆಯ ಕೇಂದ್ರವಾಗಲಿದೆ. ಗ್ರಾಮೀಣರು ಬಯೋ ಗ್ಯಾಸ್‌ ಮತ್ತು ಬಯೋ ಸಿಎನ್‌ಜಿ ಘಟಕಗಳನ್ನು ಸ್ಥಾಪಿಸಬಹುದು. ಘಟಕ ಸ್ಥಾಪನೆ ಸ್ಥಳ, ತಂತ್ರಜ್ಞಾನದು ಕುರಿತು ಶೀಘ್ರದಲ್ಲಿ ನಿರ್ಧಾರ ಪ್ರಕಟವಾಗಬೇಕಿದೆ. ಉತ್ಪಾದನೆಯಾದ ಜೈವಿಕ ಅನಿಲವನ್ನು ಆನ್‌ಲೈನ್‌ನಲ್ಲಿ ಕಂಪನಿಗಳನ್ನು ಸಂಪರ್ಕಿಸಿ ಮಾರಾಟ ಮಾಡಲು ಕೇಂದ್ರ ಸರ್ಕಾರವೇ ನೆರವು ನೀಡಲಿದೆ ಎಂದು ಮೂಲಗಳು ತಿಳಿಸಿವೆ.

ಬದಲಾಗಲಿದೆ ಗ್ರಾಮೀಣರ ಜೀವನ ಶೈಲಿ

  • ಎರಡು ರೀತಿಯಲ್ಲಿ ಸಗಣಿ ಬಳಕೆ, ಕೃಷಿಗೆ ಕಾಂಪೋಸ್ಟ್ ಗೊಬ್ಬರ ಲಭ್ಯವಾದರೆ, ಇಂಧನವೂ ಉತ್ಪಾದನೆಯಾಗುತ್ತದೆ.
  • ಉರುವಲು ಕಟ್ಟಿಗೆ ಬಳಕೆ ಕಡಿಮೆಯಾಗಿ ಸ್ವಚ್ಛ ಮತ್ತು ಸ್ವಸ್ಥ ಭಾರತಕ್ಕೆ ಅನುಕೂಲವಾಗಲಿದೆ.
  • ಗ್ರಾಮೀಣ ಭಾರತದ ರೈತರ ಆದಾಯಕ್ಕೆ ತಕ್ಕಮಟ್ಟಿಗೆ ಕೊಡುಗೆ ದೊರೆಯಲಿದೆ.
0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search