• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬದಲಾಗಲಿದೆ ಗ್ರಾಮೀಣರ ಬದುಕು, ಕೇಂದ್ರ ಸರ್ಕಾರದಿಂದ ಮತ್ತೊಂದು ಜನೋಪಯೋಗಿ ಯೋಜನೆ

TNN Correspondent Posted On February 23, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಗೋಮುಖ ವ್ಯಾಘ್ರಗಳಿಗೆ ಬಲಿಯಾಗುತ್ತಿರುವ ಮತ್ತು ಸಂಕಷ್ಟದಲ್ಲಿರುವ ಗೋ ತಳಿಗಳ ರಕ್ಷಣೆಯ ಜತೆಗೆ ಗೋ ಕೃಷಿಗೆ ಒತ್ತು ನೀಡುವುದು, ದೇಶದ ರೈತರ ಆದಾಯಕ್ಕೂ ತಕ್ಕ ಮಟ್ಟಿನ ಪ್ರೋತ್ಸಾಹ ನೀಡುವುದಕ್ಕೆ ಕೇಂದ್ರ ಸರ್ಕಾರ ನೂತನ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಪಶುಗಳ ಸಗಣಿ ಬಳಸಿ ಇಂಧನ ಉತ್ಪಾದಿಸುವ ‘ಗೋಬರ್‌-ಧನ್‌’ ಯೋಜನೆ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಕೇಂದ್ರ ಕುಡಿಯುವ ನೀರು ಹಾಗೂ ನೈರ್ಮಲ್ಯ ಸಚಿವಾಲಯದಿಂದ ಈ ಯೋಜನೆ ಏಪ್ರಿಲ್‌ನಿಂದ ಜಾರಿಗೊಳಿಸಲಾಗುವುದು ಎನ್ನಲಾಗುತ್ತಿದೆ. ಈ ಯೋಜನೆಯ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯನ್ನು ಗ್ರಾಮೀಣ ಭಾಗದಲ್ಲಿ ಚುರುಕುಗೊಳಿಸುವ ಮತ್ತು ಇಂಧನ ಉತ್ಪಾದನೆ ಮತ್ತು ರೈತರಿಗೆ ಸೂಕ್ತ ಲಾಭ ದೊರಕಿಸುವ ಉದ್ದೇಶ ಕೇಂದ್ರ ಸರ್ಕಾರದ್ದು.

350 ಜಿಲ್ಲೆಯಲ್ಲಿ ಪ್ರಥಮ ಹಂತದಲ್ಲಿ ಆರಂಭ

350 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಯೋಜನೆ ಆರಂಭಿಸುವ ಗುರಿ ಯೋಜಿಸಲಾಗಿದೆ. ದೇಶದಲ್ಲಿ  ಸುಮಾರು 30 ಕೋಟಿ ಪಶುಗಳ ಸಂಖ್ಯೆ ಇದ್ದು, ನಿತ್ಯ 30 ಲಕ್ಷ ಟನ್‌ ಸಗಣಿ ಸೃಷ್ಟಿಯಾಗುವ ಅಂದಾಜಿದೆ. ಸಗಣಿಯನ್ನು ಬಳಸಿ ಜೈವಿಕ ಅನಿಲ ಹಾಗೂ ಜೈವಿಕ ಸಿಎನ್‌ಜಿ ಉತ್ಪಾದಿಸುವುದು ಮತ್ತು ಅದನ್ನು ಇ-ಕಾಮರ್ಸ್‌ ವೇದಿಕೆ ಮೂಲಕ ಆನ್‌ಲೈನ್‌ನಲ್ಲೇ ಮಾರಾಟ ಮಾಡಲು ಈ ಯೋಜನೆ ಮೂಲಕ ಅನುಕೂಲ ಕಲ್ಪಿಸಲಾಗಿದೆ.

ಆನ್ ಲೈನ್ ಮೂಲಕ ಇಂಧನ ಮಾರಾಟಕ್ಕೆ ಕೇಂದ್ರದ ನೆರವು

ಸಾರ್ವಜನಿಕ ಸ್ವಾಮ್ಯದ  ತೈಲ ಕಂಪನಿಯೊಂದು ಜೈವಿಕ ಅನಿಲ ಖರೀದಿಗೂ ಮುಂದೆ ಬಂದಿದೆ ಎನ್ನಲಾಗುತ್ತಿದೆ. ಗ್ರಾಮ ಪಂಚಾಯ್ತಿಯು ಯೋಜನೆಯ ಕೇಂದ್ರವಾಗಲಿದೆ. ಗ್ರಾಮೀಣರು ಬಯೋ ಗ್ಯಾಸ್‌ ಮತ್ತು ಬಯೋ ಸಿಎನ್‌ಜಿ ಘಟಕಗಳನ್ನು ಸ್ಥಾಪಿಸಬಹುದು. ಘಟಕ ಸ್ಥಾಪನೆ ಸ್ಥಳ, ತಂತ್ರಜ್ಞಾನದು ಕುರಿತು ಶೀಘ್ರದಲ್ಲಿ ನಿರ್ಧಾರ ಪ್ರಕಟವಾಗಬೇಕಿದೆ. ಉತ್ಪಾದನೆಯಾದ ಜೈವಿಕ ಅನಿಲವನ್ನು ಆನ್‌ಲೈನ್‌ನಲ್ಲಿ ಕಂಪನಿಗಳನ್ನು ಸಂಪರ್ಕಿಸಿ ಮಾರಾಟ ಮಾಡಲು ಕೇಂದ್ರ ಸರ್ಕಾರವೇ ನೆರವು ನೀಡಲಿದೆ ಎಂದು ಮೂಲಗಳು ತಿಳಿಸಿವೆ.

ಬದಲಾಗಲಿದೆ ಗ್ರಾಮೀಣರ ಜೀವನ ಶೈಲಿ

  • ಎರಡು ರೀತಿಯಲ್ಲಿ ಸಗಣಿ ಬಳಕೆ, ಕೃಷಿಗೆ ಕಾಂಪೋಸ್ಟ್ ಗೊಬ್ಬರ ಲಭ್ಯವಾದರೆ, ಇಂಧನವೂ ಉತ್ಪಾದನೆಯಾಗುತ್ತದೆ.
  • ಉರುವಲು ಕಟ್ಟಿಗೆ ಬಳಕೆ ಕಡಿಮೆಯಾಗಿ ಸ್ವಚ್ಛ ಮತ್ತು ಸ್ವಸ್ಥ ಭಾರತಕ್ಕೆ ಅನುಕೂಲವಾಗಲಿದೆ.
  • ಗ್ರಾಮೀಣ ಭಾರತದ ರೈತರ ಆದಾಯಕ್ಕೆ ತಕ್ಕಮಟ್ಟಿಗೆ ಕೊಡುಗೆ ದೊರೆಯಲಿದೆ.
0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search