• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಿಎನ್ ಬಿ ಹಗರಣದ ಕುರಿತು ಮೋದಿ ಉತ್ತರ, ವಿರೋಧಿಗಳು ತತ್ತರ

TNN Correspondent Posted On February 23, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಯಾವುದೇ ಗಲಭೆ, ಭ್ರಷ್ಟಾಚಾರ, ದಲಿತರ ಹತ್ಯೆ ಸೇರಿ ಯಾವುದೇ ದುರ್ಘಟನೆ ನಡೆದರೂ, ಆ ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿಯೇತರ ಪಕ್ಷವಿದ್ದರೂ, ಎಲ್ಲರೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೇ ಆರೋಪ ಮಾಡುತ್ತಾರೆ.

ಅದೇ ರೀತಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲೂ ಪ್ರಧಾನಿ ಮೋದಿ ಅವರ ಹೆಸರನ್ನು ತಳುಕು ಹಾಕಲಾಯಿತು. ಸಾಲ ನೀಡಿದ ಬ್ಯಾಂಕ್ ಯಾವುದೋ, ದೇಶ ಬಿಟ್ಟು ಹೋದ ಖದೀಮ ಉದ್ಯಮಿ ಯಾವನೋ, ಆದರೆ ಆರೋಪ ಹೊತ್ತುಕೊಂಡವರು ಮಾತ್ರ ಮೋದಿ ಅವರು. ಮೋದಿ ಅವರೇ ಭ್ರಷ್ಟಾಚಾರ ಎಸಗಿದ್ದಾರೆ ಎಂಬಷ್ಟರಮಟ್ಟಿಗೆ ರಾಹುಲ್ ಗಾಂಧಿ ಸೇರಿ ಹಲವರು ಆರೋಪಿಸಿದ್ದರು.

ಆದರೆ ಈ ಎಲ್ಲ ಆರೋಪಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತ್ಯುತ್ತರ ನೀಡಿದ್ದು, ‘ಸಾರ್ವಜನಿಕರ ಹಣ ಲೂಟಿ ಮಾಡಲು ಹೊರಟ ಹಾಗೂ ಮಾಡಿದ ಯಾರನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ’ ಎಂದು ಖಂಡತುಂಡವಾಗಿ ವಿವರಿಸಿದ್ದಾರೆ.

“ಆರ್ಥಿಕ ವಹಿವಾಟಿನಲ್ಲಿ ನಿರ್ದಿಷ್ಟತೆ ಇಲ್ಲದ, ಸಾರ್ವಜನಿಕರ ದೋಚಿ ಪರಾರಿಯಾಗುವ ಯಾರನ್ನೂ ನಮ್ಮ ಸರ್ಕಾರ ಸುಮ್ಮನೆ ಬಿಡುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಯಾವುದೇ ಕಾರಣಕ್ಕೂ ಭ್ರಷ್ಟರನ್ನು ಬಚಾವಾಗುವುದನ್ನು ನಾವು ಬಿಡುವುದಿಲ್ಲ, ಮುಂದೆಯೂ ಇದೇ ರೀತಿ ಇರುತ್ತೇವೆ” ಎಂದು ಎಕನಾಮಿಕ್ಸ್ ಟೈಮ್ಸ್ ಆಯೋಜಿಸಿದ್ದ ಜಾಗತಿಕ ಉದ್ಯಮ ಶೃಂಗದಲ್ಲಿ ಮೋದಿ ಸ್ಪಷ್ಟಪಡಿಸಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಸಾಲ ಮಾಡಿ ಪರಾರಿಯಾಗಿರುವ ನೀರವ್ ಮೋದಿ ಪ್ರಕರಣದ ಕುರಿತು ಮೋದಿ ಮಾತನಾಡುತ್ತಿಲ್ಲ ಎಂದು ಬೊಬ್ಬೆ ಹಾಕುತ್ತಿದ್ದವರಿಗೆ ಮೋದಿ ಅವರ ದಿಟ್ಟ ಉತ್ತರ ತತ್ತರ ಮೂಡಿಸಿದೆ ಎಂಬುದರಲ್ಲಿ ಎರಡು ಮಾತಿಲ್ಲ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search