• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಿಎನ್ ಬಿ ಹಗರಣದ ಕುರಿತು ಮೋದಿ ಉತ್ತರ, ವಿರೋಧಿಗಳು ತತ್ತರ

TNN Correspondent Posted On February 23, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಯಾವುದೇ ಗಲಭೆ, ಭ್ರಷ್ಟಾಚಾರ, ದಲಿತರ ಹತ್ಯೆ ಸೇರಿ ಯಾವುದೇ ದುರ್ಘಟನೆ ನಡೆದರೂ, ಆ ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿಯೇತರ ಪಕ್ಷವಿದ್ದರೂ, ಎಲ್ಲರೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೇ ಆರೋಪ ಮಾಡುತ್ತಾರೆ.

ಅದೇ ರೀತಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲೂ ಪ್ರಧಾನಿ ಮೋದಿ ಅವರ ಹೆಸರನ್ನು ತಳುಕು ಹಾಕಲಾಯಿತು. ಸಾಲ ನೀಡಿದ ಬ್ಯಾಂಕ್ ಯಾವುದೋ, ದೇಶ ಬಿಟ್ಟು ಹೋದ ಖದೀಮ ಉದ್ಯಮಿ ಯಾವನೋ, ಆದರೆ ಆರೋಪ ಹೊತ್ತುಕೊಂಡವರು ಮಾತ್ರ ಮೋದಿ ಅವರು. ಮೋದಿ ಅವರೇ ಭ್ರಷ್ಟಾಚಾರ ಎಸಗಿದ್ದಾರೆ ಎಂಬಷ್ಟರಮಟ್ಟಿಗೆ ರಾಹುಲ್ ಗಾಂಧಿ ಸೇರಿ ಹಲವರು ಆರೋಪಿಸಿದ್ದರು.

ಆದರೆ ಈ ಎಲ್ಲ ಆರೋಪಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತ್ಯುತ್ತರ ನೀಡಿದ್ದು, ‘ಸಾರ್ವಜನಿಕರ ಹಣ ಲೂಟಿ ಮಾಡಲು ಹೊರಟ ಹಾಗೂ ಮಾಡಿದ ಯಾರನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ’ ಎಂದು ಖಂಡತುಂಡವಾಗಿ ವಿವರಿಸಿದ್ದಾರೆ.

“ಆರ್ಥಿಕ ವಹಿವಾಟಿನಲ್ಲಿ ನಿರ್ದಿಷ್ಟತೆ ಇಲ್ಲದ, ಸಾರ್ವಜನಿಕರ ದೋಚಿ ಪರಾರಿಯಾಗುವ ಯಾರನ್ನೂ ನಮ್ಮ ಸರ್ಕಾರ ಸುಮ್ಮನೆ ಬಿಡುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಯಾವುದೇ ಕಾರಣಕ್ಕೂ ಭ್ರಷ್ಟರನ್ನು ಬಚಾವಾಗುವುದನ್ನು ನಾವು ಬಿಡುವುದಿಲ್ಲ, ಮುಂದೆಯೂ ಇದೇ ರೀತಿ ಇರುತ್ತೇವೆ” ಎಂದು ಎಕನಾಮಿಕ್ಸ್ ಟೈಮ್ಸ್ ಆಯೋಜಿಸಿದ್ದ ಜಾಗತಿಕ ಉದ್ಯಮ ಶೃಂಗದಲ್ಲಿ ಮೋದಿ ಸ್ಪಷ್ಟಪಡಿಸಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಸಾಲ ಮಾಡಿ ಪರಾರಿಯಾಗಿರುವ ನೀರವ್ ಮೋದಿ ಪ್ರಕರಣದ ಕುರಿತು ಮೋದಿ ಮಾತನಾಡುತ್ತಿಲ್ಲ ಎಂದು ಬೊಬ್ಬೆ ಹಾಕುತ್ತಿದ್ದವರಿಗೆ ಮೋದಿ ಅವರ ದಿಟ್ಟ ಉತ್ತರ ತತ್ತರ ಮೂಡಿಸಿದೆ ಎಂಬುದರಲ್ಲಿ ಎರಡು ಮಾತಿಲ್ಲ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search