• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಿಎನ್ ಬಿ ಹಗರಣದ ಕುರಿತು ಮೋದಿ ಉತ್ತರ, ವಿರೋಧಿಗಳು ತತ್ತರ

TNN Correspondent Posted On February 23, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಯಾವುದೇ ಗಲಭೆ, ಭ್ರಷ್ಟಾಚಾರ, ದಲಿತರ ಹತ್ಯೆ ಸೇರಿ ಯಾವುದೇ ದುರ್ಘಟನೆ ನಡೆದರೂ, ಆ ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿಯೇತರ ಪಕ್ಷವಿದ್ದರೂ, ಎಲ್ಲರೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೇ ಆರೋಪ ಮಾಡುತ್ತಾರೆ.

ಅದೇ ರೀತಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲೂ ಪ್ರಧಾನಿ ಮೋದಿ ಅವರ ಹೆಸರನ್ನು ತಳುಕು ಹಾಕಲಾಯಿತು. ಸಾಲ ನೀಡಿದ ಬ್ಯಾಂಕ್ ಯಾವುದೋ, ದೇಶ ಬಿಟ್ಟು ಹೋದ ಖದೀಮ ಉದ್ಯಮಿ ಯಾವನೋ, ಆದರೆ ಆರೋಪ ಹೊತ್ತುಕೊಂಡವರು ಮಾತ್ರ ಮೋದಿ ಅವರು. ಮೋದಿ ಅವರೇ ಭ್ರಷ್ಟಾಚಾರ ಎಸಗಿದ್ದಾರೆ ಎಂಬಷ್ಟರಮಟ್ಟಿಗೆ ರಾಹುಲ್ ಗಾಂಧಿ ಸೇರಿ ಹಲವರು ಆರೋಪಿಸಿದ್ದರು.

ಆದರೆ ಈ ಎಲ್ಲ ಆರೋಪಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತ್ಯುತ್ತರ ನೀಡಿದ್ದು, ‘ಸಾರ್ವಜನಿಕರ ಹಣ ಲೂಟಿ ಮಾಡಲು ಹೊರಟ ಹಾಗೂ ಮಾಡಿದ ಯಾರನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ’ ಎಂದು ಖಂಡತುಂಡವಾಗಿ ವಿವರಿಸಿದ್ದಾರೆ.

“ಆರ್ಥಿಕ ವಹಿವಾಟಿನಲ್ಲಿ ನಿರ್ದಿಷ್ಟತೆ ಇಲ್ಲದ, ಸಾರ್ವಜನಿಕರ ದೋಚಿ ಪರಾರಿಯಾಗುವ ಯಾರನ್ನೂ ನಮ್ಮ ಸರ್ಕಾರ ಸುಮ್ಮನೆ ಬಿಡುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಯಾವುದೇ ಕಾರಣಕ್ಕೂ ಭ್ರಷ್ಟರನ್ನು ಬಚಾವಾಗುವುದನ್ನು ನಾವು ಬಿಡುವುದಿಲ್ಲ, ಮುಂದೆಯೂ ಇದೇ ರೀತಿ ಇರುತ್ತೇವೆ” ಎಂದು ಎಕನಾಮಿಕ್ಸ್ ಟೈಮ್ಸ್ ಆಯೋಜಿಸಿದ್ದ ಜಾಗತಿಕ ಉದ್ಯಮ ಶೃಂಗದಲ್ಲಿ ಮೋದಿ ಸ್ಪಷ್ಟಪಡಿಸಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಸಾಲ ಮಾಡಿ ಪರಾರಿಯಾಗಿರುವ ನೀರವ್ ಮೋದಿ ಪ್ರಕರಣದ ಕುರಿತು ಮೋದಿ ಮಾತನಾಡುತ್ತಿಲ್ಲ ಎಂದು ಬೊಬ್ಬೆ ಹಾಕುತ್ತಿದ್ದವರಿಗೆ ಮೋದಿ ಅವರ ದಿಟ್ಟ ಉತ್ತರ ತತ್ತರ ಮೂಡಿಸಿದೆ ಎಂಬುದರಲ್ಲಿ ಎರಡು ಮಾತಿಲ್ಲ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search