• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಿಎನ್ ಬಿ ಹಗರಣದ ಕುರಿತು ಮೋದಿ ಉತ್ತರ, ವಿರೋಧಿಗಳು ತತ್ತರ

TNN Correspondent Posted On February 23, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಯಾವುದೇ ಗಲಭೆ, ಭ್ರಷ್ಟಾಚಾರ, ದಲಿತರ ಹತ್ಯೆ ಸೇರಿ ಯಾವುದೇ ದುರ್ಘಟನೆ ನಡೆದರೂ, ಆ ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿಯೇತರ ಪಕ್ಷವಿದ್ದರೂ, ಎಲ್ಲರೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೇ ಆರೋಪ ಮಾಡುತ್ತಾರೆ.

ಅದೇ ರೀತಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲೂ ಪ್ರಧಾನಿ ಮೋದಿ ಅವರ ಹೆಸರನ್ನು ತಳುಕು ಹಾಕಲಾಯಿತು. ಸಾಲ ನೀಡಿದ ಬ್ಯಾಂಕ್ ಯಾವುದೋ, ದೇಶ ಬಿಟ್ಟು ಹೋದ ಖದೀಮ ಉದ್ಯಮಿ ಯಾವನೋ, ಆದರೆ ಆರೋಪ ಹೊತ್ತುಕೊಂಡವರು ಮಾತ್ರ ಮೋದಿ ಅವರು. ಮೋದಿ ಅವರೇ ಭ್ರಷ್ಟಾಚಾರ ಎಸಗಿದ್ದಾರೆ ಎಂಬಷ್ಟರಮಟ್ಟಿಗೆ ರಾಹುಲ್ ಗಾಂಧಿ ಸೇರಿ ಹಲವರು ಆರೋಪಿಸಿದ್ದರು.

ಆದರೆ ಈ ಎಲ್ಲ ಆರೋಪಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತ್ಯುತ್ತರ ನೀಡಿದ್ದು, ‘ಸಾರ್ವಜನಿಕರ ಹಣ ಲೂಟಿ ಮಾಡಲು ಹೊರಟ ಹಾಗೂ ಮಾಡಿದ ಯಾರನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ’ ಎಂದು ಖಂಡತುಂಡವಾಗಿ ವಿವರಿಸಿದ್ದಾರೆ.

“ಆರ್ಥಿಕ ವಹಿವಾಟಿನಲ್ಲಿ ನಿರ್ದಿಷ್ಟತೆ ಇಲ್ಲದ, ಸಾರ್ವಜನಿಕರ ದೋಚಿ ಪರಾರಿಯಾಗುವ ಯಾರನ್ನೂ ನಮ್ಮ ಸರ್ಕಾರ ಸುಮ್ಮನೆ ಬಿಡುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಯಾವುದೇ ಕಾರಣಕ್ಕೂ ಭ್ರಷ್ಟರನ್ನು ಬಚಾವಾಗುವುದನ್ನು ನಾವು ಬಿಡುವುದಿಲ್ಲ, ಮುಂದೆಯೂ ಇದೇ ರೀತಿ ಇರುತ್ತೇವೆ” ಎಂದು ಎಕನಾಮಿಕ್ಸ್ ಟೈಮ್ಸ್ ಆಯೋಜಿಸಿದ್ದ ಜಾಗತಿಕ ಉದ್ಯಮ ಶೃಂಗದಲ್ಲಿ ಮೋದಿ ಸ್ಪಷ್ಟಪಡಿಸಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಸಾಲ ಮಾಡಿ ಪರಾರಿಯಾಗಿರುವ ನೀರವ್ ಮೋದಿ ಪ್ರಕರಣದ ಕುರಿತು ಮೋದಿ ಮಾತನಾಡುತ್ತಿಲ್ಲ ಎಂದು ಬೊಬ್ಬೆ ಹಾಕುತ್ತಿದ್ದವರಿಗೆ ಮೋದಿ ಅವರ ದಿಟ್ಟ ಉತ್ತರ ತತ್ತರ ಮೂಡಿಸಿದೆ ಎಂಬುದರಲ್ಲಿ ಎರಡು ಮಾತಿಲ್ಲ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search