• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೊಬೈಲ್ ನೆಟ್ ವರ್ಕ್ ಸಿಗಲ್ಲ ಎಂದು ಐತಿಹಾಸಿಕ ಜೈಲುಗಳನ್ನೇ ಸ್ಥಳಾಂತರಿಸಲು ಹೊರಟ ಮಮತಾ ಬ್ಯಾನರ್ಜಿ!

TNN Correspondent Posted On February 24, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಈ ಮಮತಾ ಬ್ಯಾನರ್ಜಿಯವರಿಗೆ ಕೆಲವೊಮ್ಮೆ ಏನಾಗುತ್ತದೋ ಆ ದೇವರೇ ಬಲ್ಲ. ಹವಾಯಿ ಚಪ್ಪಲಿ, ಸಾಧಾರಣ ಸೀರೆ ತೊಟ್ಟು ಸರಳತನಕ್ಕೆ ಹೆಸರಾಗಿದ್ದ ದೀದಿ ಮಾತ್ರ ಇತ್ತೀಚೆಗೆ ಅಪಾರ ಸೌಲಭ್ಯ ಹಾಗೂ ಸರ್ವಾಧಿಕಾರಿಯಂತೆ ವರ್ತಿಸಲು ಆರಂಭಿಸಿದ್ದಾರೆ.

ಇದಕ್ಕೆ ಮುನ್ನುಡಿಯಾಗಿ ತಮಗೆ ಮನೆಯಲ್ಲಿದ್ದಾಗ ಮೊಬೈಲಿಗೆ ನೆಟ್ ವರ್ಕ್ ಸಿಗುತ್ತಿಲ್ಲ ಎಂದು ಕೋಲ್ಕತ್ತಾದಲ್ಲಿರುವ  ಪುರಾತನ ಮೂರು ಜೈಲುಗಳನ್ನೇ ಸ್ಥಳಾಂತರಿಸಲು ಮುಂದಾಗಿದ್ದು, ಪ್ರತಿಪಕ್ಷ ಸೇರಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮಮತಾ ಬ್ಯಾನರ್ಜಿ ವಾಸವಾಗಿರುವ ಹರೀಶ್ ಚಟರ್ಜಿ ರಸ್ತೆಯಲ್ಲೇ ಮೂರು ಜೈಲುಗಳಿವೆ. ಈ ಜೈಲಿನಲ್ಲಿ ಮೊಬೈಲ್ ನೆಟ್ ವರ್ಕ್ ಜಾಮರ್ ಅಳವಡಿಸಿದ್ದು, ಮಮತಾ ಬ್ಯಾನರ್ಜಿ ಅವರಿಗೆ ನೆಟ್ ವರ್ಕ್ ಸಮಸ್ಯೆಯಾಗಿದೆ. ಆದರೆ ಇದಕ್ಕೆ ಪರ್ಯಾಯ ಹುಡುಕುವ ಬದಲು ಜೈಲುಗಳನ್ನೇ ಸ್ಥಳಾಂತರಿಸಲು ದೀದಿ ಕೋಲ್ಕತ್ತಾ ಮಹಾನಗರ ಪಾಲಿಕೆಗೆ ಆದೇಶಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಈಗ ಮಮತಾ ಆದೇಶದಿಂದ ಪ್ರೆಸಿಡೆನ್ಸಿ ಜೈಲ್, ಎಲಿಪೋರ್ ಸೆಂಟ್ರಲ್ ಜೈಲ್ ಹಾಗೂ ಎಲಿಪೋರ್ ಮಹಿಳಾ ಜೈಲನ್ನು ಸ್ಥಳಾಂತರಿಸುವ ಅನಿವಾರ್ಯ ಎದುರಾಗಿದೆ. ಇವುಗಳು ಸುಮಾರು 150 ಎಕರೆ ವ್ಯಾಪ್ತಿಯಲ್ಲಿದ್ದು, ಮತ್ತೊಂದೆಡೆ ನಿರ್ಮಾಣ ಮಾಡಬೇಕಿದೆ. ಅಲ್ಲದೆ ಇದಕ್ಕೆ ಮಾರ್ಚ್ 31ರ ಗಡುವು ನೀಡಲಾಗಿದ್ದು, ಸುಮಾರು 2000 ಕೈದಿಗಳನ್ನು ಸಹ ಸ್ಥಳಾಂತರಿಸಬೇಕಾಗಿರುವುದು ಪಾಲಿಕೆಗೆ ನುಂಗಲಾರದ ತುತ್ತಾಗಿದೆ.

ಜನರ ಹಿತ ಕಾಪಾಡಲು ಮುಖ್ಯಮಂತ್ರಿಯಾದ ದೀದಿ, ನೆಟ್ ವರ್ಕ್ ಸಿಗದ ಕಾರಣ ಅದಕ್ಕೆ ಪರ್ಯಾಯ ಹುಡುಕುವ ಬದಲು, ಐತಿಹಾಸಿಕ ಜೈಲನ್ನೇ ಸ್ಥಳಾಂತರಗೊಳಿಸಲು ಆದೇಶಿಸಿರುವುದು ಆಕ್ರೋಶಕ್ಕೆ ಕಾರಣವಾಗುವ ಜತೆಗೆ, ಇಷ್ಟು ದಿನ ಇರದ ನೆಟ್ ವರ್ಕ್ ಸಮಸ್ಯೆ ಈಗಲೇ ಯಾಕೆ ಸೃಷ್ಟಿಯಾಗಿದೆ ಎಂದಬ ಅನುಮಾನವೂ ಕಾಡುತ್ತಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search