• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೊಬೈಲ್ ನೆಟ್ ವರ್ಕ್ ಸಿಗಲ್ಲ ಎಂದು ಐತಿಹಾಸಿಕ ಜೈಲುಗಳನ್ನೇ ಸ್ಥಳಾಂತರಿಸಲು ಹೊರಟ ಮಮತಾ ಬ್ಯಾನರ್ಜಿ!

TNN Correspondent Posted On February 24, 2018


  • Share On Facebook
  • Tweet It

ಕೋಲ್ಕತ್ತಾ: ಈ ಮಮತಾ ಬ್ಯಾನರ್ಜಿಯವರಿಗೆ ಕೆಲವೊಮ್ಮೆ ಏನಾಗುತ್ತದೋ ಆ ದೇವರೇ ಬಲ್ಲ. ಹವಾಯಿ ಚಪ್ಪಲಿ, ಸಾಧಾರಣ ಸೀರೆ ತೊಟ್ಟು ಸರಳತನಕ್ಕೆ ಹೆಸರಾಗಿದ್ದ ದೀದಿ ಮಾತ್ರ ಇತ್ತೀಚೆಗೆ ಅಪಾರ ಸೌಲಭ್ಯ ಹಾಗೂ ಸರ್ವಾಧಿಕಾರಿಯಂತೆ ವರ್ತಿಸಲು ಆರಂಭಿಸಿದ್ದಾರೆ.

ಇದಕ್ಕೆ ಮುನ್ನುಡಿಯಾಗಿ ತಮಗೆ ಮನೆಯಲ್ಲಿದ್ದಾಗ ಮೊಬೈಲಿಗೆ ನೆಟ್ ವರ್ಕ್ ಸಿಗುತ್ತಿಲ್ಲ ಎಂದು ಕೋಲ್ಕತ್ತಾದಲ್ಲಿರುವ  ಪುರಾತನ ಮೂರು ಜೈಲುಗಳನ್ನೇ ಸ್ಥಳಾಂತರಿಸಲು ಮುಂದಾಗಿದ್ದು, ಪ್ರತಿಪಕ್ಷ ಸೇರಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮಮತಾ ಬ್ಯಾನರ್ಜಿ ವಾಸವಾಗಿರುವ ಹರೀಶ್ ಚಟರ್ಜಿ ರಸ್ತೆಯಲ್ಲೇ ಮೂರು ಜೈಲುಗಳಿವೆ. ಈ ಜೈಲಿನಲ್ಲಿ ಮೊಬೈಲ್ ನೆಟ್ ವರ್ಕ್ ಜಾಮರ್ ಅಳವಡಿಸಿದ್ದು, ಮಮತಾ ಬ್ಯಾನರ್ಜಿ ಅವರಿಗೆ ನೆಟ್ ವರ್ಕ್ ಸಮಸ್ಯೆಯಾಗಿದೆ. ಆದರೆ ಇದಕ್ಕೆ ಪರ್ಯಾಯ ಹುಡುಕುವ ಬದಲು ಜೈಲುಗಳನ್ನೇ ಸ್ಥಳಾಂತರಿಸಲು ದೀದಿ ಕೋಲ್ಕತ್ತಾ ಮಹಾನಗರ ಪಾಲಿಕೆಗೆ ಆದೇಶಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಈಗ ಮಮತಾ ಆದೇಶದಿಂದ ಪ್ರೆಸಿಡೆನ್ಸಿ ಜೈಲ್, ಎಲಿಪೋರ್ ಸೆಂಟ್ರಲ್ ಜೈಲ್ ಹಾಗೂ ಎಲಿಪೋರ್ ಮಹಿಳಾ ಜೈಲನ್ನು ಸ್ಥಳಾಂತರಿಸುವ ಅನಿವಾರ್ಯ ಎದುರಾಗಿದೆ. ಇವುಗಳು ಸುಮಾರು 150 ಎಕರೆ ವ್ಯಾಪ್ತಿಯಲ್ಲಿದ್ದು, ಮತ್ತೊಂದೆಡೆ ನಿರ್ಮಾಣ ಮಾಡಬೇಕಿದೆ. ಅಲ್ಲದೆ ಇದಕ್ಕೆ ಮಾರ್ಚ್ 31ರ ಗಡುವು ನೀಡಲಾಗಿದ್ದು, ಸುಮಾರು 2000 ಕೈದಿಗಳನ್ನು ಸಹ ಸ್ಥಳಾಂತರಿಸಬೇಕಾಗಿರುವುದು ಪಾಲಿಕೆಗೆ ನುಂಗಲಾರದ ತುತ್ತಾಗಿದೆ.

ಜನರ ಹಿತ ಕಾಪಾಡಲು ಮುಖ್ಯಮಂತ್ರಿಯಾದ ದೀದಿ, ನೆಟ್ ವರ್ಕ್ ಸಿಗದ ಕಾರಣ ಅದಕ್ಕೆ ಪರ್ಯಾಯ ಹುಡುಕುವ ಬದಲು, ಐತಿಹಾಸಿಕ ಜೈಲನ್ನೇ ಸ್ಥಳಾಂತರಗೊಳಿಸಲು ಆದೇಶಿಸಿರುವುದು ಆಕ್ರೋಶಕ್ಕೆ ಕಾರಣವಾಗುವ ಜತೆಗೆ, ಇಷ್ಟು ದಿನ ಇರದ ನೆಟ್ ವರ್ಕ್ ಸಮಸ್ಯೆ ಈಗಲೇ ಯಾಕೆ ಸೃಷ್ಟಿಯಾಗಿದೆ ಎಂದಬ ಅನುಮಾನವೂ ಕಾಡುತ್ತಿದೆ.

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search