• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೊಬೈಲ್ ನೆಟ್ ವರ್ಕ್ ಸಿಗಲ್ಲ ಎಂದು ಐತಿಹಾಸಿಕ ಜೈಲುಗಳನ್ನೇ ಸ್ಥಳಾಂತರಿಸಲು ಹೊರಟ ಮಮತಾ ಬ್ಯಾನರ್ಜಿ!

TNN Correspondent Posted On February 24, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಈ ಮಮತಾ ಬ್ಯಾನರ್ಜಿಯವರಿಗೆ ಕೆಲವೊಮ್ಮೆ ಏನಾಗುತ್ತದೋ ಆ ದೇವರೇ ಬಲ್ಲ. ಹವಾಯಿ ಚಪ್ಪಲಿ, ಸಾಧಾರಣ ಸೀರೆ ತೊಟ್ಟು ಸರಳತನಕ್ಕೆ ಹೆಸರಾಗಿದ್ದ ದೀದಿ ಮಾತ್ರ ಇತ್ತೀಚೆಗೆ ಅಪಾರ ಸೌಲಭ್ಯ ಹಾಗೂ ಸರ್ವಾಧಿಕಾರಿಯಂತೆ ವರ್ತಿಸಲು ಆರಂಭಿಸಿದ್ದಾರೆ.

ಇದಕ್ಕೆ ಮುನ್ನುಡಿಯಾಗಿ ತಮಗೆ ಮನೆಯಲ್ಲಿದ್ದಾಗ ಮೊಬೈಲಿಗೆ ನೆಟ್ ವರ್ಕ್ ಸಿಗುತ್ತಿಲ್ಲ ಎಂದು ಕೋಲ್ಕತ್ತಾದಲ್ಲಿರುವ  ಪುರಾತನ ಮೂರು ಜೈಲುಗಳನ್ನೇ ಸ್ಥಳಾಂತರಿಸಲು ಮುಂದಾಗಿದ್ದು, ಪ್ರತಿಪಕ್ಷ ಸೇರಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮಮತಾ ಬ್ಯಾನರ್ಜಿ ವಾಸವಾಗಿರುವ ಹರೀಶ್ ಚಟರ್ಜಿ ರಸ್ತೆಯಲ್ಲೇ ಮೂರು ಜೈಲುಗಳಿವೆ. ಈ ಜೈಲಿನಲ್ಲಿ ಮೊಬೈಲ್ ನೆಟ್ ವರ್ಕ್ ಜಾಮರ್ ಅಳವಡಿಸಿದ್ದು, ಮಮತಾ ಬ್ಯಾನರ್ಜಿ ಅವರಿಗೆ ನೆಟ್ ವರ್ಕ್ ಸಮಸ್ಯೆಯಾಗಿದೆ. ಆದರೆ ಇದಕ್ಕೆ ಪರ್ಯಾಯ ಹುಡುಕುವ ಬದಲು ಜೈಲುಗಳನ್ನೇ ಸ್ಥಳಾಂತರಿಸಲು ದೀದಿ ಕೋಲ್ಕತ್ತಾ ಮಹಾನಗರ ಪಾಲಿಕೆಗೆ ಆದೇಶಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಈಗ ಮಮತಾ ಆದೇಶದಿಂದ ಪ್ರೆಸಿಡೆನ್ಸಿ ಜೈಲ್, ಎಲಿಪೋರ್ ಸೆಂಟ್ರಲ್ ಜೈಲ್ ಹಾಗೂ ಎಲಿಪೋರ್ ಮಹಿಳಾ ಜೈಲನ್ನು ಸ್ಥಳಾಂತರಿಸುವ ಅನಿವಾರ್ಯ ಎದುರಾಗಿದೆ. ಇವುಗಳು ಸುಮಾರು 150 ಎಕರೆ ವ್ಯಾಪ್ತಿಯಲ್ಲಿದ್ದು, ಮತ್ತೊಂದೆಡೆ ನಿರ್ಮಾಣ ಮಾಡಬೇಕಿದೆ. ಅಲ್ಲದೆ ಇದಕ್ಕೆ ಮಾರ್ಚ್ 31ರ ಗಡುವು ನೀಡಲಾಗಿದ್ದು, ಸುಮಾರು 2000 ಕೈದಿಗಳನ್ನು ಸಹ ಸ್ಥಳಾಂತರಿಸಬೇಕಾಗಿರುವುದು ಪಾಲಿಕೆಗೆ ನುಂಗಲಾರದ ತುತ್ತಾಗಿದೆ.

ಜನರ ಹಿತ ಕಾಪಾಡಲು ಮುಖ್ಯಮಂತ್ರಿಯಾದ ದೀದಿ, ನೆಟ್ ವರ್ಕ್ ಸಿಗದ ಕಾರಣ ಅದಕ್ಕೆ ಪರ್ಯಾಯ ಹುಡುಕುವ ಬದಲು, ಐತಿಹಾಸಿಕ ಜೈಲನ್ನೇ ಸ್ಥಳಾಂತರಗೊಳಿಸಲು ಆದೇಶಿಸಿರುವುದು ಆಕ್ರೋಶಕ್ಕೆ ಕಾರಣವಾಗುವ ಜತೆಗೆ, ಇಷ್ಟು ದಿನ ಇರದ ನೆಟ್ ವರ್ಕ್ ಸಮಸ್ಯೆ ಈಗಲೇ ಯಾಕೆ ಸೃಷ್ಟಿಯಾಗಿದೆ ಎಂದಬ ಅನುಮಾನವೂ ಕಾಡುತ್ತಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search