• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದಲ್ಲವೇ ಅಚ್ಛೇ ದಿನ್, 70 ವರ್ಷದ ಬಳಿಕ ವಿದ್ಯುತ್ ಕಂಡ ವಿಶ್ವಪ್ರಸಿದ್ಧ  ದ್ವೀಪ

TNN Correspondent Posted On February 24, 2018
0


0
Shares
  • Share On Facebook
  • Tweet It

ಮುಂಬೈ: ವಿಶ್ವಪ್ರಸಿದ್ಧ ಎಲೆಫೆಂಟಾ ಗುಹೆಗಳನ್ನು ಹೊಂದಿರುವ, ವಿಶ್ವಸಂಸ್ಥೆಯ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಘರಪುರಿ ದ್ವೀಪಕ್ಕೆ ಸ್ವಾತಂತ್ರ್ಯ ದೊರೆತ 70 ವರ್ಷದ ಬಳಿಕ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ದೇಶಾದ್ಯಂತ ವಿದ್ಯುತ್ ತಲುಪಿದರ ಗ್ರಾಮಗಳಿಗೆ ವಿದ್ಯುತ್ ಒದಗಿಸಲು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರಗಳು ಮತ್ತು ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಸಹಯೋಗದಲ್ಲಿ ದ್ವೀಪಕ್ಕೆ ವಿದ್ಯುತ್ ಕಲ್ಪಿಸಲಾಗಿದೆ.

ದೇಶದ ವಾಣಿಜ್ಯ ನಗರಿ ಮುಂಬೈನಿಂದ ಕೇವಲ 10 ಕಿ.ಮೀ ದೂರದಲ್ಲಿರುವ ದ್ವೀಪಕ್ಕೆ ಸ್ವಾತಂತ್ರ್ಯ ದೊರಕಿ 70 ವರ್ಷವಾದರೂ ವಿದ್ಯುತ್ ದೊರಕಿರಲಿಲ್ಲ. ಇದೀಗ ಸರ್ಕಾರದ ವಿಶೇಷ ಕಾಳಜಿ, ಸರ್ವರಿಗೂ ವಿದ್ಯುತ್ ದೊರೆಯಬೇಕು ಎಂಬ ಉದ್ದೇಶದಿಂದ ಈ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ವಿದ್ಯುತ್ ಪೂರೈಸಲು ಸಮುದ್ರದಲ್ಲಿ 7.5 ಕಿ.ಮೀ. ಕೇಬಲ್ ಸಂಪರ್ಕ ನಿರ್ಮಿಸಲಾಗಿದೆ.

ಇದೊಂದು ಐತಿಹಾಸಿಕ ದಿನವಾಗಿದ್ದು, ದೊಡ್ಡಮಟ್ಟದ ಕೇಬಲ್ ಗಳನ್ನು ಅರೇಬಿಯನ್ ಸಮುದ್ರದಲ್ಲಿ ವಿದ್ಯುತ್ ಪೂರೈಸಲು ಬಳಸಿರುವುದು ಇದೇ ಮೊದಲ ಬಾರಿಗೆ ಎಂದು ನವಿಕರಿಸಬಹುದಾದ ಇಂಧನ ಮೂಲಗಳ ಸಚಿವ ಚಂದ್ರಶೇಖರ್ ಬಾವಾಂಕುಲೆ ತಿಳಿಸಿದ್ದಾರೆ.

ವಿದ್ಯುತ್ ಸಂಪರ್ಕ ಕಲ್ಪಿಸಿರುವುದರಿಂದ ವಿಶ್ವಪಾರಂಪರಿಕ ತಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರಲಿದ್ದಾರೆ. ಅಲ್ಲದೇ ರಾಜ್ ಬಂದೇರ್, ಮೋರಾ ಬಂದೇರ್, ಶೆಟ್ ಬಂದೇರ್ ಗ್ರಾಮಗಳಿಗೆ ಅನುಕೂಲವಾಗಲಿದೆ. ಮೂರು ದಶಕಗಳಿಂದ ಎಲೆಫೆಂಟಾ ಗುಹೆಗಳು ಮತ್ತು ಮೂರು ಗ್ರಾಮಗಳಲ್ಲಿ ಜನರೇಟರ್ ನಿಂದ ವಿದ್ಯುತ್ ಬಳಸಲಾಗುತ್ತಿತ್ತು. ಇದೀಗ ನಿರಂತರವಾಗಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search