• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದಲ್ಲವೇ ಅಚ್ಛೇ ದಿನ್, 70 ವರ್ಷದ ಬಳಿಕ ವಿದ್ಯುತ್ ಕಂಡ ವಿಶ್ವಪ್ರಸಿದ್ಧ  ದ್ವೀಪ

TNN Correspondent Posted On February 24, 2018
0


0
Shares
  • Share On Facebook
  • Tweet It

ಮುಂಬೈ: ವಿಶ್ವಪ್ರಸಿದ್ಧ ಎಲೆಫೆಂಟಾ ಗುಹೆಗಳನ್ನು ಹೊಂದಿರುವ, ವಿಶ್ವಸಂಸ್ಥೆಯ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಘರಪುರಿ ದ್ವೀಪಕ್ಕೆ ಸ್ವಾತಂತ್ರ್ಯ ದೊರೆತ 70 ವರ್ಷದ ಬಳಿಕ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ದೇಶಾದ್ಯಂತ ವಿದ್ಯುತ್ ತಲುಪಿದರ ಗ್ರಾಮಗಳಿಗೆ ವಿದ್ಯುತ್ ಒದಗಿಸಲು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರಗಳು ಮತ್ತು ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಸಹಯೋಗದಲ್ಲಿ ದ್ವೀಪಕ್ಕೆ ವಿದ್ಯುತ್ ಕಲ್ಪಿಸಲಾಗಿದೆ.

ದೇಶದ ವಾಣಿಜ್ಯ ನಗರಿ ಮುಂಬೈನಿಂದ ಕೇವಲ 10 ಕಿ.ಮೀ ದೂರದಲ್ಲಿರುವ ದ್ವೀಪಕ್ಕೆ ಸ್ವಾತಂತ್ರ್ಯ ದೊರಕಿ 70 ವರ್ಷವಾದರೂ ವಿದ್ಯುತ್ ದೊರಕಿರಲಿಲ್ಲ. ಇದೀಗ ಸರ್ಕಾರದ ವಿಶೇಷ ಕಾಳಜಿ, ಸರ್ವರಿಗೂ ವಿದ್ಯುತ್ ದೊರೆಯಬೇಕು ಎಂಬ ಉದ್ದೇಶದಿಂದ ಈ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ವಿದ್ಯುತ್ ಪೂರೈಸಲು ಸಮುದ್ರದಲ್ಲಿ 7.5 ಕಿ.ಮೀ. ಕೇಬಲ್ ಸಂಪರ್ಕ ನಿರ್ಮಿಸಲಾಗಿದೆ.

ಇದೊಂದು ಐತಿಹಾಸಿಕ ದಿನವಾಗಿದ್ದು, ದೊಡ್ಡಮಟ್ಟದ ಕೇಬಲ್ ಗಳನ್ನು ಅರೇಬಿಯನ್ ಸಮುದ್ರದಲ್ಲಿ ವಿದ್ಯುತ್ ಪೂರೈಸಲು ಬಳಸಿರುವುದು ಇದೇ ಮೊದಲ ಬಾರಿಗೆ ಎಂದು ನವಿಕರಿಸಬಹುದಾದ ಇಂಧನ ಮೂಲಗಳ ಸಚಿವ ಚಂದ್ರಶೇಖರ್ ಬಾವಾಂಕುಲೆ ತಿಳಿಸಿದ್ದಾರೆ.

ವಿದ್ಯುತ್ ಸಂಪರ್ಕ ಕಲ್ಪಿಸಿರುವುದರಿಂದ ವಿಶ್ವಪಾರಂಪರಿಕ ತಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರಲಿದ್ದಾರೆ. ಅಲ್ಲದೇ ರಾಜ್ ಬಂದೇರ್, ಮೋರಾ ಬಂದೇರ್, ಶೆಟ್ ಬಂದೇರ್ ಗ್ರಾಮಗಳಿಗೆ ಅನುಕೂಲವಾಗಲಿದೆ. ಮೂರು ದಶಕಗಳಿಂದ ಎಲೆಫೆಂಟಾ ಗುಹೆಗಳು ಮತ್ತು ಮೂರು ಗ್ರಾಮಗಳಲ್ಲಿ ಜನರೇಟರ್ ನಿಂದ ವಿದ್ಯುತ್ ಬಳಸಲಾಗುತ್ತಿತ್ತು. ಇದೀಗ ನಿರಂತರವಾಗಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search