• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದಲ್ಲವೇ ಅಚ್ಛೇ ದಿನ್, 70 ವರ್ಷದ ಬಳಿಕ ವಿದ್ಯುತ್ ಕಂಡ ವಿಶ್ವಪ್ರಸಿದ್ಧ  ದ್ವೀಪ

TNN Correspondent Posted On February 24, 2018
0


0
Shares
  • Share On Facebook
  • Tweet It

ಮುಂಬೈ: ವಿಶ್ವಪ್ರಸಿದ್ಧ ಎಲೆಫೆಂಟಾ ಗುಹೆಗಳನ್ನು ಹೊಂದಿರುವ, ವಿಶ್ವಸಂಸ್ಥೆಯ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಘರಪುರಿ ದ್ವೀಪಕ್ಕೆ ಸ್ವಾತಂತ್ರ್ಯ ದೊರೆತ 70 ವರ್ಷದ ಬಳಿಕ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ದೇಶಾದ್ಯಂತ ವಿದ್ಯುತ್ ತಲುಪಿದರ ಗ್ರಾಮಗಳಿಗೆ ವಿದ್ಯುತ್ ಒದಗಿಸಲು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರಗಳು ಮತ್ತು ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಸಹಯೋಗದಲ್ಲಿ ದ್ವೀಪಕ್ಕೆ ವಿದ್ಯುತ್ ಕಲ್ಪಿಸಲಾಗಿದೆ.

ದೇಶದ ವಾಣಿಜ್ಯ ನಗರಿ ಮುಂಬೈನಿಂದ ಕೇವಲ 10 ಕಿ.ಮೀ ದೂರದಲ್ಲಿರುವ ದ್ವೀಪಕ್ಕೆ ಸ್ವಾತಂತ್ರ್ಯ ದೊರಕಿ 70 ವರ್ಷವಾದರೂ ವಿದ್ಯುತ್ ದೊರಕಿರಲಿಲ್ಲ. ಇದೀಗ ಸರ್ಕಾರದ ವಿಶೇಷ ಕಾಳಜಿ, ಸರ್ವರಿಗೂ ವಿದ್ಯುತ್ ದೊರೆಯಬೇಕು ಎಂಬ ಉದ್ದೇಶದಿಂದ ಈ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ವಿದ್ಯುತ್ ಪೂರೈಸಲು ಸಮುದ್ರದಲ್ಲಿ 7.5 ಕಿ.ಮೀ. ಕೇಬಲ್ ಸಂಪರ್ಕ ನಿರ್ಮಿಸಲಾಗಿದೆ.

ಇದೊಂದು ಐತಿಹಾಸಿಕ ದಿನವಾಗಿದ್ದು, ದೊಡ್ಡಮಟ್ಟದ ಕೇಬಲ್ ಗಳನ್ನು ಅರೇಬಿಯನ್ ಸಮುದ್ರದಲ್ಲಿ ವಿದ್ಯುತ್ ಪೂರೈಸಲು ಬಳಸಿರುವುದು ಇದೇ ಮೊದಲ ಬಾರಿಗೆ ಎಂದು ನವಿಕರಿಸಬಹುದಾದ ಇಂಧನ ಮೂಲಗಳ ಸಚಿವ ಚಂದ್ರಶೇಖರ್ ಬಾವಾಂಕುಲೆ ತಿಳಿಸಿದ್ದಾರೆ.

ವಿದ್ಯುತ್ ಸಂಪರ್ಕ ಕಲ್ಪಿಸಿರುವುದರಿಂದ ವಿಶ್ವಪಾರಂಪರಿಕ ತಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರಲಿದ್ದಾರೆ. ಅಲ್ಲದೇ ರಾಜ್ ಬಂದೇರ್, ಮೋರಾ ಬಂದೇರ್, ಶೆಟ್ ಬಂದೇರ್ ಗ್ರಾಮಗಳಿಗೆ ಅನುಕೂಲವಾಗಲಿದೆ. ಮೂರು ದಶಕಗಳಿಂದ ಎಲೆಫೆಂಟಾ ಗುಹೆಗಳು ಮತ್ತು ಮೂರು ಗ್ರಾಮಗಳಲ್ಲಿ ಜನರೇಟರ್ ನಿಂದ ವಿದ್ಯುತ್ ಬಳಸಲಾಗುತ್ತಿತ್ತು. ಇದೀಗ ನಿರಂತರವಾಗಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search